ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ


Team Udayavani, Nov 23, 2018, 5:48 PM IST

kopp.jpg

ಕೊಪ್ಪಳ: ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈಗಾಗಲೇ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಜ್ಜಾಗಿದ್ದೇವೆ. ವಿವಿಧ ಬ್ಲಾಕ್‌ ಮಟ್ಟದಲ್ಲಿ ಪದಾಧಿಕಾರಿಗಳ ಸಭೆ ನಡೆಸಿದ್ದೇವೆ. ಪ್ರತಿ ಕ್ಷೇತ್ರದಲ್ಲೂ ಬೂತ್‌ ಮಟ್ಟದ ಕಾರ್ಯಕಾರಣಿ ನಡೆಸಿ ಡಿ. 2ರಂದು ಭಾಗ್ಯನಗರದಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳ ವರ್ಕ್‌ಶಾಪ್‌ ನಡೆಸಲಿದ್ದೇವೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆಗೆ ಈಗಾಗಲೇ ತಯಾರಿ ನಡೆದಿದೆ. ಎಐಸಿಸಿ ನಿರ್ದೇಶನದಂತೆ ಹಾಗೂ ರಾಹುಲ್‌ ಗಾಂಧಿ ಅವರೇ ಜನರೊಂದಿಗೆ ನೇರಮಾತನಾಡಲು ಪ್ರೊಜೆಕ್ಟ್ ಆರಂಭಿಸಿದ್ದು, ಇದರಡಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ 10 ಸಾವಿರ ಜನರ ಹೆಸರು ನೋಂದಣಿ ಮಾಡಿಸುವ ಕೆಲಸಕ್ಕೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ. ಜಿಲ್ಲೆಯಲ್ಲಿ 5 ಕ್ಷೇತ್ರದಲ್ಲಿ ಎರಡು ಬ್ಲಾಕ್‌ ಕಾಂಗ್ರೆಸ್‌ ಸಮಿತಿಗಳಿದ್ದು, ಪ್ರತಿ ಬ್ಲಾಕಿಗೂ ಇಬ್ಬರನ್ನು ನೇಮಿಸಿ ಅವರ ಮೂಲಕ ನೋಂದಣಿ ಕಾರ್ಯ ಆರಂಭಿಸಲಿದ್ದೇವೆ. ಒಂದು ತಿಂಗಳೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಿದ್ದೇವೆ ಎಂದರು.

ಬ್ಲಾಕ್‌ಗೆ ನೇಮಕಗೊಂಡ ಕಾರ್ಯಕರ್ತ ಬೂತ್‌ ಮಟ್ಟದಲ್ಲಿ ಸಕ್ರೀಯನಾಗಬೇಕು. ಈಗಾಗಲೇ ಬ್ಲಾಕ್‌ ಹಂತದಲ್ಲಿ ಪದಾ ಧಿಕಾರಿಗಳ ಪುನರ್‌ ನೇಮಕದ ಕುರಿತು ಚರ್ಚೆ ನಡೆದಿದೆ. ಡಿ. 2ರಂದು ಭಾಗ್ಯನಗರದಲ್ಲಿ ಜಿಲ್ಲಾಮಟ್ಟದ ಪದಾ ಧಿಕಾರಿಗಳ
ವರ್ಕ್‌ಶಾಪ್‌ ನಡೆಯಲಿದೆ. ಈ ಸಭೆಗೆ ಎಐಸಿಸಿ ಕಾರ್ಯದರ್ಶಿಗಳು ಆಗಮಿಸಲಿದ್ದು, ಜೊತೆಗೆ ಶಕ್ತಿ ಪ್ರೋಜೆಕ್ಟ್‌ನ ಮುಖ್ಯಸ್ಥ ಸೂರಜ್‌ ಹೆಗಡೆ ಅವರು ಆಗಮಿಸಲಿದ್ದಾರೆ ಎಂದರು.

ದಢೇಸುಗೂರು ಕಮಿಷನ್‌ ಶಾಸಕ: ಕನಕಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು ಅವರು
ಕಮಿಷನ್‌ ಶಾಸಕರಾಗಿದ್ದಾರೆ. ಕಮಿಷನ್‌ ಪಡೆದುಕೊಂಡೇ ಅವರು ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ. ಮಾಧ್ಯಮಗಳಲ್ಲಿಯೇ ಅವರ ಕುರಿತು ವರದಿ ಬರುತ್ತಿವೆ. ಟೆಂಡರ್‌ ವಿಷಯದಲ್ಲಿ ಅವರು ಒಬ್ಬರ ಪರ ವಕಾಲತ್ತು ಮಾಡುತ್ತಿದ್ದಾರೆ ಎಂದರೆ ಏನರ್ಥ? ಅವರಿಂದ ಏನನ್ನೋ ಪಡೆದಿದ್ದಾರೆ ಎನ್ನುವುದು ತೋರಿಸುತ್ತದೆ.

ಇನ್ನೂ ಸಿಡಿಪಿಒಗಳ ವಿವಾದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಅವರ ಬಗ್ಗೆ ಕ್ಷೇತ್ರದಲ್ಲಿನ ಜನರೇ ಮಾತನಾಡುತ್ತಿದ್ದಾರೆ. ಅದಕ್ಕೆ ನಾನು ಸುಮ್ಮನಿದ್ದು, ಮುಂದಿನ ದಿನದಲ್ಲಿ ದಾಖಲೆಗಳ ಸಮೇತ ಮತನಾಡುವೆ. ಇದಲ್ಲದೇ, ಚಿಕ್ಕ ಜಂತಗಲ್‌ನಲ್ಲಿ 10 ಎಕರೆ ಸರ್ಕಾರಿ ಜಮೀನಿದೆ. ಅಲ್ಲಿ 20 ವರ್ಷಗಳಿಂದ ಕೃಷಿ ಮಾಡುತ್ತಿದ್ದ ಜನರನ್ನು ಬಿಜೆಪಿ ಶಾಸಕರು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರಲ್ಲದೇ, ಕಾರಟಗಿ ಎಪಿಎಂಸಿ ನಿರ್ದೇಶಕ ನಾಗರಾಜ ಅರಳಿ ಎನ್ನುವವರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ಆದರೂ ಅವರ ಬಗ್ಗೆ ಕ್ರಮಕೈಗೊಳ್ಳುತ್ತಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.