ಲಂಚ ಸ್ವೀಕಾರ: ಸಂಗಾಪೂರ ಪಿಡಿಒ ಹಾಗೂ ಕಾರ್ಯದರ್ಶಿ ಎಸಿಬಿ ಬಲೆಗೆ
Team Udayavani, Jan 13, 2022, 5:40 PM IST
ಸಾಂದರ್ಭಿಕ ಚಿತ್ರ
ಗಂಗಾವತಿ: ಮನೆಯ ಹಕ್ಕು ಬದಲಾವಣೆ ಹಾಗೂ 11 ಬಿ ಫಾರಂ ನೀಡಲು ಲಂಚದ ಬೇಡಿಕೆ ಇಟ್ಟಿದ್ದ ಸಂಗಾಪೂರ ಗ್ರಾ.ಪಂ. ಪಿಡಿಒ ಹಾಗೂ ಕಾರ್ಯದರ್ಶಿಗಳನ್ನು ಲಂಚದಹಣ ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ ಪ್ರಕರಣ ಗುರುವಾರ ಸಂಗಾಪೂರ ಗ್ರಾ.ಪಂ.ನಲ್ಲಿ ಜರುಗಿದೆ.
ತಾಲೂಕಿನ ಬಂಡಿಬಸಪ್ಪ ಕ್ಯಾಂಪಿನ ವಿಜಯಕುಮಾರ ಎಂಬುವವರು ಮನೆ ಹಕ್ಕು ಬದಲಾವಣೆ ಹಾಗೂ 11 ಬಿ ಫಾರಂ ನೀಡಲು ಅರ್ಜಿ ಸಲ್ಲಿಸಿ ಅಲೆದಾಡಿದರೂ ಕೆಲಸವಾಗದೇ ಇದ್ದಾಗ ಕಾರ್ಯದರ್ಶಿ ನೂರ ಉಲ್ಲಾಹಕ್ ಅವರು 6ಸಾವಿರ ರೂ.ಗಳ ಲಂಚ ಬೇಡಿಕೆ ಇಟ್ಟಿದ್ದಾರೆ. ಈ ವಿಷಯವನ್ನು ಜಿಲ್ಲಾ ಎಸಿಬಿ ಪೊಲೀಸರಿಗೆ ದೂರು ಸಲ್ಲಿಸಿದಾಗ ಮುಂಗಡವಾಗಿ 2 ಸಾವಿರ ಹಣ ನೀಡಿ ಉಳಿದ ಹಣ ಗುರುವಾರ ಕಾರ್ಯದರ್ಶಿ ಸ್ವೀಕಾರ ಮಾಡುವ ಸಂದರ್ಭದಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿ ಕಾರ್ಯದರ್ಶಿ ನೂರ ಉಲ್ಲಾಹಕ್ ಹಾಗೂ ಪಿಡಿಒ ಪಿ.ಎಸ್.ಶೇಖಸಾಬ ಇವರನ್ನು ಬಂಧಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಎಸಿಬಿ ಎಸ್ಪಿ ಶ್ರೀಹರಿಬಾಬು ಹಾಗೂ ಡಿವೈಎಸ್ಪಿ ಶಿವಕುಮಾರ ಹಾಗೂ ಎಸಿಬಿ ಪೊಲೀಸರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್