ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

ಪೊಲೀಸ್‌ ಇಲಾಖೆಯಿಂದ ಜಾಗೃತಿ ಕಾರ್ಯ | ಸಂಘ-ಸಂಸ್ಥೆಗಳು, ಗ್ರಾಮಸ್ಥರಿಂದಲೂ ಸಹಕಾರ

Team Udayavani, Sep 25, 2021, 9:56 PM IST

cfghfyhty

ಕೊಪ್ಪಳ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಇನ್ನೂ ಅಸ್ಪೃಶ್ಯತೆಯ ಜೀವಂತಿಕೆಯು ಎಲ್ಲೆಡೆ ಸದ್ದು ಮಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಈಚೆಗೆ ನಡೆದ ಮಿಯಾಪುರ ಘಟನೆಯೇ ಸಾಕ್ಷಿಯಾಗಿದೆ. ಇಂತಹ ಘಟನೆ ಕುರಿತು ಜನ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್‌ ಇಲಾಖೆಯು ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಪ್ರತಿಜ್ಞೆ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಜನರ ಗಮನ ಸೆಳೆದಿದೆ.

ಹೌದು. ಈಚೆಗೆ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಬಾಲಕ ದೇವಾಲಯ ಪ್ರವೇಶಿಸಿದ ಎನ್ನುವ ಕಾರಣಕ್ಕೆ ಗ್ರಾಮಸ್ಥರು ದಂಡ ಹಾಕಿರುವ ಪ್ರಕರಣದ ಬೆನ್ನಲ್ಲೇ ಅಸ್ಪೃಶ್ಯತೆಯ ಜೀವಂತಿಕೆಯ ಕುರಿತು ಮಾಧ್ಯಮಗಳಲ್ಲಿ ಭಾರಿ ವರದಿಗಳು ಸದ್ದು ಮಾಡಿದ್ದವು. ಹಲವು ಸಂಘ-ಸಂಸ್ಥೆಗಳು, ಸಂಘಟನೆಗಳು ಇಂಥ ಘಟನೆ ಬಗ್ಗೆ ಖಂಡಿಸಿದ್ದವು. ಡಿಸಿ ವಿಕಾಸ್‌ ಕಿಶೋರ್‌, ಎಸ್ಪಿ ಟಿ. ಶ್ರೀಧರ್‌ ಅವರು ಸೇರಿ ಅಧಿಕಾರಿಗಳ ತಂಡವು ಮಿಯಾಪುರ ಗ್ರಾಮಕ್ಕೆ ಭೇಟಿ ನೀಡಿ ಅಸ್ಪೃಶ್ಯತೆಯ ನಿವಾರಣೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಘಟನೆ ಸಂಬಂಧ ಗ್ರಾಮದ ಐವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಆಯೋಗವೂ ಸಹಿತ ಘಟನೆ ಕುರಿತು ಜಿಲ್ಲಾಡಳಿತದಿಂದ ವರದಿ ಕೇಳಿದೆ. ಈ ಘಟನೆ ಬಗ್ಗೆ ಜಾಗೃತಿ ವಹಿಸಿದ ಪೊಲೀಸ್‌ ಇಲಾಖೆಯು ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳು ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಪ್ರತಿಜ್ಞೆ ವಿಧಿ ಎನ್ನುವ ವಿನೂತನವಾದ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜಿಲ್ಲೆಯಲ್ಲಿ ಕೆಲವೊಂದು ಸೂಕ್ಷ್ಮತೆ ಹೊಂದಿರುವ ಗ್ರಾಮಗಳ ಗುರುತು ಮಾಡಿ ಪೊಲೀಸ್‌ ಇಲಾಖೆ ಅಧಿಕಾರಿಗಳ ತಂಡವು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿನ ಮುಖಂಡರ ಸಭೆ ನಡೆಸಿ, ಶಾಲೆಗಳ ವಿದ್ಯಾರ್ಥಿಗಳೂ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಗ್ರಾಮದಲ್ಲಿ ಎಲ್ಲರೂ ಸಹೋದರತೆ ಭಾವನೆಯಿಂದ ಬಾಳಬೇಕು. ಸಹಬಾಳ್ವೆಯಿಂದ ಮುನ್ನಡೆಯಬೇಕು. ಯಾವುದೇ ಜಾತಿ ಮತ, ಪಂಥ ಎನ್ನುವ ಭಾವನೆ ಇರಬಾರದು. ದೇಶದಲ್ಲಿ ನಾವೆಲ್ಲರೂ ಸಂವಿಧಾನದ ಆಶಯದಂತೆ ಜಾತ್ಯತೀತತೆ ಮತ್ತು ಸರ್ವಧರ್ಮ ಸಮನ್ವಯ ಕಾಪಾಡಿಕೊಂಡು ಮುನ್ನಡೆಯಬೇಕು. ಅಸ್ಪೃಶ್ಯತೆ ಎನ್ನುವ ಸಮಾಜಿಕ ಅನಿಷ್ಟ ಕಳಂಕವನ್ನು ತೊಲಗಿಸಲು ನಾವೆಲ್ಲ ಕಂಕಣ ಬದ್ಧರಾಗಿರಬೇಕು. ಯಾವುದೇ ಗ್ರಾಮದಲ್ಲಿ ಅಸ್ಪೃಶ್ಯತೆಯ ಆಚರಣೆ ಕಾನೂನಿನಡಿ ಶಿಕ್ಷಾರ್ಹ ಅಪರಾಧವಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಧರ್ಮ, ಜಾತಿ, ಲಿಂಗ ಬೇಧಬಾವ ತಾಳದೆ ಸರ್ವರೂ ಪರಸ್ಪರ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಸೌಹಾರ್ದತೆಯಿಂದ ಬಾಳುವ ಮೂಲಕ ಗ್ರಾಮಗಳನ್ನು ಅಸ್ಪೃಶ್ಯತಾ ಮುಕ್ತ ಗ್ರಾಮವನ್ನಾಗಿ ಮಾಡೋಣ ಎನ್ನುವ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಸಿತು.

ಜಿಲ್ಲೆಯಲ್ಲಿನ ಕೆಲ ಗ್ರಾಮಗಳಲ್ಲಿ ಇಂತಹ ವಿನೂತನ ಕಾರ್ಯಕ್ರಮ ಏಕ ಕಾಲಕ್ಕೆ ನಡೆದವು. ಹಲವು ಗ್ರಾಮಗಳಲ್ಲಿ ಪೊಲೀಸ್‌ ಇಲಾಖೆಯ ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೂ ಸಹಕಾರ ನೀಡುತ್ತಿದ್ದು, ಎಲ್ಲರಿಂದಲೂ ಒಮ್ಮತ ಮೂಡಿ ಬರುತ್ತಿದೆ. ಪೊಲೀಸ್‌ ಇಲಾಖೆಯ ಇಂತಹ ಕಾರ್ಯ ಜನರಲ್ಲಿ ಜಾಗೃತಿಯ ಜೊತೆಗೆ ಅಸ್ಪೃಶ್ಯತೆ ಆಚರಣೆ ಮಾಡುವ ಜನರಿಗೆ ಕಾನೂನಿನ ಎಚ್ಚರಿಕೆಯ ಸಂದೇಶವನ್ನು ನೀಡಿದೆ. ಒಟ್ಟಿನಲ್ಲಿ ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಪ್ರತಿಜ್ಞೆ ಎನ್ನುವ ವಿಭಿನ್ನ ಕಾರ್ಯಕ್ರಮವೂ ನಿಜಕ್ಕೂ ಜಿಲ್ಲೆಯ ಜನರಲ್ಲಿ ಗಮನ ಸೆಳೆದಿದೆ. ಆಧುನಿಕ ವ್ಯವಸ್ಥೆಯಲ್ಲಿಯೂ ಅನಿಷ್ಟ ಆಚರಣೆಗಳ ಬಗ್ಗೆ ಜನ ಜಾಗೃತಿ ಹೊಂದಿ ಎಲ್ಲರೂ ಸಹೋದರ ಬಾಳ್ವೆಯಿಂದ ಮುನ್ನಡೆಗಬೇಕಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.