ಹಿರೇಹಳ್ಳ ಹಾನಿಗೆ ಬೇಕಿದೆ ಶಾಶ್ವತ ಪರಿಹಾರ

ಪ್ರತಿ ವರ್ಷದ ಮಳೆಗೆ ಜಮೀನು, ಬೆಳೆ ಹಾನಿ ; ನೀರಾವರಿ ಇಲಾಖೆ ನಿರ್ವಹಣೆ ವೈಫಲ್ಯ ಕಾರಣ

Team Udayavani, Oct 18, 2022, 4:34 PM IST

21

ಕೊಪ್ಪಳ: ಮಿನಿ ಜಲಾಶಯ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಕಿನ್ನಾಳ ಹಿರೇಹಳ್ಳ ಜಲಾಶಯದಿಂದ ಬಿಡುಗಡೆ ಮಾಡುವ ನೀರಿನಿಂದ ಹಳ್ಳದ ದಂಡೆಯ ಸಾವಿರಾರು ರೈತರ ಜಮೀನಿನ ಮಣ್ಣು ಸೇರಿದಂತೆ ಬೆಳೆಯೂ ನೀರಿನಲ್ಲಿ ಕೊಚ್ಚಿ ಹೋಗುತ್ತಿದೆ. ಇದರಿಂದ ರೈತರ ವೇದನೆ ಅಷ್ಟಿಷ್ಟಲ್ಲ. ಇದಕ್ಕೆ ಸರ್ಕಾರ, ಜಿಲ್ಲಾಡಳಿತ ಶಾಶ್ವತ ಪರಿಹಾರ ವ್ಯವಸ್ಥೆ ಮಾಡಲಿ ಎಂದೆನ್ನುತ್ತಿದೆ ರೈತಾಪಿ ವಲಯ.

ಹೌದು. ತಾಲೂಕಿನ ಕಿನ್ನಾಳ ಹಿರೇಹಳ್ಳ ಜಲಾಶಯ ಮಿನಿ ಡ್ಯಾಂ ಎಂದೇ ಖ್ಯಾತಿ ಪಡೆದಿದೆ. ಇದು ಕೊಪ್ಪಳ ಭಾಗದ ಲಕ್ಷಾಂತರ ಜನರ ಜೀವನಾಡಿಯಾಗಿದೆ. 1.96 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಈ ಡ್ಯಾಂ ಕಳೆದ ಕೆಲವು ವರ್ಷಗಳಿಂದ ಭಾರಿ ಸುದ್ದಿಯಾಗುತ್ತಿದೆ.

ಗವಿಶ್ರೀಗಳ ಸಂಕಲ್ಪ

ಬರದ ನಾಡಿನಲ್ಲಿ ಜಲಸಂರಕ್ಷಣೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಕೊಪ್ಪಳದ ಶ್ರೀಗವಿಸಿದ್ದೇಶ್ವರ ಸ್ವಾಮೀಜಿ ಅವರು ಹಳ್ಳದ 26 ಕಿ.ಮೀ. ಸ್ವಚ್ಛಗೊಳಿಸಿದ್ದರು. ಶ್ರೀಗಳ ಆಶಯದಂತೆ ಜಿಲ್ಲಾಡಳಿತ ಹಳ್ಳದುದ್ದಕ್ಕೂ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ ಮಾಡಿದೆ. ನೀರು ಸೇತುವೆಯ ಒಡಲಲ್ಲಿ ಸಂಗ್ರಹವಾಗಿ ಬೇಸಿಗೆ ವೇಳೆ ರೈತರಿಗೆ ಆಸರೆಯಾಗಲಿದೆ ಎನ್ನುವುದು ಇದರ ಉದ್ದೇಶವಾಗಿದೆ.

ಶಾಶ್ವತ ಪರಿಹಾರ ವ್ಯವಸ್ಥೆ ಮಾಡಲಿ

ಪ್ರತಿವರ್ಷವೂ ನೀರು ಹರಿಬಿಟ್ಟಾಗ ರೈತರು ಜಮೀನು ಹಾನಿಯಾಗುತ್ತಿದ್ದು, ರೈತರನ ನೋವು ಹೇಳತೀರದಾಗಿದೆ. ಸರ್ಕಾರ ಕೊಡುವ ಪುಡಿಗಾಸಿಗೆ ಕೈಯೊಡ್ಡುವ ಸ್ಥಿತಿ ಎದುರಾಗುತ್ತಿದೆ. ಹಾಗಾಗಿ ಹಳ್ಳದ ಎಡ-ಬಲ ಭಾಗದಲ್ಲಿನ ರೈತರ ಜಮೀನನ್ನು ಸರ್ಕಾರ, ಜಿಲ್ಲಾಡಳಿತವು ನೀರು ಹರಿಯುವ ವ್ಯಾಪ್ತಿಯನ್ನು ಗುರುತಿಸಿ ಸ್ವಾಧೀನ ಮಾಡಿಕೊಂಡು ಸರ್ಕಾರದ ನಿಯಮಗಳಡಿ ಪರಿಹಾರ ವಿತರಿಸಲಿ ಎನ್ನುವ ಒತ್ತಾಯ ರೈತಾಪಿ ವಲಯದಿಂದ ಕೇಳಿ ಬಂದಿದೆ. ಇಲ್ಲವೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ, ರೈತರ ಹಿತರಕ್ಷಣೆ ಮಾಡಲಿ ಎನ್ನುವ ಒತ್ತಾಯ ಕೇಳಿ ಬಂದಿದೆ. ಪ್ರತಿವರ್ಷವೂ ಮಳೆ ಬಂದಾಗ ಹಳ್ಳದಿಂದ ನೀರು ಹರಿಬಿಡಲಾಗುತ್ತದೆ. ಹೀಗೆ ಪ್ರತಿ ವರ್ಷವೂ ಹಳ್ಳದ ಭಾಗದ ರೈತರು ಜಿಲ್ಲಾಡಳಿತದ ಮುಂದೆ ಮಂಡೆಯೂರಿ ಪರಿಹಾರಕ್ಕೆ ಗೋಗರೆಯುವ ಪರಿಸ್ಥಿತಿ ಎದುರಾಗುತ್ತದೆ. ಇದೆಲ್ಲವನ್ನು ಅರಿತು ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಇವೆಲ್ಲಗಳ ಅವಲೋಕನ ಮಾಡಿ, ಜಿಲ್ಲಾಡಳಿತದ ಸಮನ್ವಯದಿಂದ ವಿಸ್ತೃತ ವರದಿ ಸಿದ್ಧಪಡಿಸಿ ಸರ್ಕಾರದ ಮುಂದೆ ಪ್ರಬಲ ವಾದ ಮಾಡಿ ಪರಿಹಾರ ಇಲ್ಲವೇ ಭೂ ಸ್ವಾಧೀನಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಯತ್ನಿಸಲಿ ಎಂದು ರೈತ ಸಮೂಹ ಒತ್ತಾಯಿಸುತ್ತಿದೆ.

ಗೇಟಗಳ ನಿರ್ವಹಣೆಯಲ್ಲಿ ವಿಫಲ

ಕೆಲವು ವರ್ಷಗಳಿಂದ ಅತಿಯಾದ ಮಳೆಯಿಂದ ಹಿರೇಹಳ್ಳ ಡ್ಯಾಂಗೆ ಅಧಿ ಕ ಪ್ರಮಾಣದ ನೀರು ಹರಿದು ಬರುತ್ತಿದ್ದು, ಬೃಹತ್‌ ನೀರಾವರಿ ಇಲಾಖೆ ಅಧಿಕಾರಿಗಳು ವೈಜ್ಞಾನಿಕವಾಗಿ ಹಳ್ಳದ ಪಾತ್ರಕ್ಕೆ ನೀರು ಹರಿ ಬಿಡುತ್ತಿಲ್ಲ. ನೀರು ಬಂದಾಕ್ಷಣ ಏಕಾ ಏಕಿ ಹರಿ ಬಿಡುವುದು. ಇಲ್ಲದಿದ್ದರೆ ಏಕಾಏಕಿ ನೀರು ನಿಲ್ಲುಗಡೆ ಮಾಡುತ್ತಿದ್ದಾರೆ. ಇನ್ನು ಹಳ್ಳದುದ್ದಕ್ಕೂ ನಿರ್ಮಿಸಿದ ಸೇತುವೆಗಳ ಗೇಟ್‌ಗಳನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ಮಳೆಗಾಲಕ್ಕೂ ಮುನ್ನ ಗೇಟ್‌ಗಳ ಸ್ಥಿತಿಗತಿಯನ್ನು ಒಮ್ಮೆಯೂ ಬಂದು ನೋಡುತ್ತಿಲ್ಲ. ಸೇತುವೆ ಭರ್ತಿಯಾಗಿ ಹರಿಯುವ ವೇಳೆ ಗೇಟ್‌ ತೆಗೆಯುವ ಪ್ರಯತ್ನ ಮಾಡುತ್ತಾರೆ. ಆದರೆ ನಿರ್ವಹಣೆಯಿಲ್ಲದ ಗೇಟ್‌ ಗಳು ಮೇಲೆ ಬರಲ್ಲ. ಅಲ್ಲದೇ ಬೃಹದಾಕಾರದ ಗೇಟ್‌ ಅಳವಡಿಕೆ ಮಾಡಿದ್ದು, ಅವುಗಳನ್ನು ವೈಜ್ಞಾನಿಕ ಮಾದರಿಯಲ್ಲಿ ಎತ್ತುವ ಕೆಲಸ ನಡೆಯಬೇಕಿದೆ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸುಮ್ಮನಾಗುತ್ತಾರೆ. ಇದರಿಂದ ಅತಿಯಾದ ನೀರು ಸೇತುವೆ ಮೇಲೆ ಹರಿದು ಹಿರೇಹಳ್ಳದ ಎಡ-ಬಲ ಭಾಗದ ರೈತರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಜಮೀನು ಹಾನಿ ಮಾಡುತ್ತಿದೆ. ಬಿತ್ತಿದ ಬೆಳೆ, ಕೈಗೆ ಬಂದ ಫಸಲು ನೀರಿನಲ್ಲಿ ಕೊಚ್ಚಿ ಹೋಗುತ್ತಿದೆ. ಕಳೆದ ವರ್ಷ, ಈ ವರ್ಷ ನಡೆದ ಹಳ್ಳದ ಅವಾಂತರವೇ ಇದಕ್ಕೆ ಸಾಕ್ಷಿಯಾಗಿದೆ. ಹಳ್ಳದ ವ್ಯಾಪ್ತಿಯ ರೈತರಿಗೆ ಇದು ಬರಸಿಡಿಲು ಬಡಿದಂತಾಗುತ್ತಿದೆ.

ಹಿರೇಹಳ್ಳದ ಜಲಾಶಯದಿಂದ ಹಳ್ಳದ ಪಾತ್ರಕ್ಕೆ ನೀರು ಹರಿಬಿಟ್ಟಾಗ ರೈತರ ಜಮೀನು ಹಾನಿಯಾಗಿರುವ ವಿಷಯ ನನ್ನ ಗಮನಕ್ಕಿದೆ. ಹಾನಿಯ ಕುರಿತಂತೆ ಅದಕ್ಕೆ ಶಾಶ್ವತ ಪರಿಹಾರಕ್ಕೆ ಏನು ವ್ಯವಸ್ಥೆ ಮಾಡಬೇಕು ಎನ್ನುವ ಕುರಿತಂತೆ ವರದಿ ಸಲ್ಲಿಸುವಂತೆ ಹಿರೇಹಳ್ಳದ ಜಲಾಶಯದ ಅಧಿಕಾರಿಗಳಿಗೆ, ಸಣ್ಣ ನೀರಾವರಿಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹಳ್ಳದ ಎಡ-ಬಲ ಭಾಗದಲ್ಲಿ ಭೂ ಸ್ವಾಧೀನ ಮಾಡುವುದು ಸುಲಭದ ವಿಷಯವಲ್ಲ. ಅದಕ್ಕೆ ಪರಿಹಾರ ಹೆಚ್ಚು ಬೇಕಾಗುತ್ತದೆ. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.  –ಸುಂದರೇಶ ಬಾಬು, ಜಿಲ್ಲಾಧಿಕಾರಿ

ಹಿರೇಹಳ್ಳದ ನೀರಿನಿಂದ ನಮ್ಮ ಹಳ್ಳದ ದಂಡೆಯ ಎಡ-ಬಲ ಭಾಗದ ರೈತರ ಜಮೀನು ಹಾನಿಯಾಗುತ್ತಿದೆ. ಕೈಗೆ ಬಂದ ಬೆಳೆಯು ನೀರಿನಲ್ಲಿ ಕೊಚ್ಚಿ ಹೋಗುತ್ತಿದೆ. ರೈತರ ಜಮೀನಿನ ಮೇಲ್ಪದರೇ ಕೊಚ್ಚಿ ಹೋಗಿ ಬಿತ್ತನೆಗೂ ಅವಕಾಶವಿಲ್ಲದಂತಾಗುತ್ತಿದೆ. ಪ್ರತಿವರ್ಷ ರೈತರು ಹಾನಿಗೆ ಪರಿಹಾರ ಕೇಳುವ ಬದಲು ಸರ್ಕಾರ, ಜಿಲ್ಲಾಡಳಿತವೇ ಶಾಶ್ವತ ಪರಿಹಾರ ವ್ಯವಸ್ಥೆ ಮಾಡಲಿ. ಹಳ್ಳದ ಭಾಗದಲ್ಲಿ ಭೂಸ್ವಾ ಧೀನ ಮಾಡಿ ಅವರಿಗೆ ಸರ್ಕಾರದ ನಿಯಮದಡಿ ಪರಿಹಾರ ಕೊಟ್ಟರೆ ಅವರ ಕಷ್ಟ ತೀರಿದಂತಾಗಲಿದೆ. ನಾವೂ ಜಿಲ್ಲಾಧಿಕಾರಿ ಸೇರಿ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದೇವೆ.  -ಈಶಪ್ಪ ಮಾದಿನೂರು, ಹಿರೇಸಿಂದೋಗಿ ರೈತ ಮುಖಂಡ

-ದತ್ತು ಕಮ್ಮಾರ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.