ಕುಷ್ಟಗಿ: ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಮನವಿ
Team Udayavani, Oct 31, 2022, 3:32 PM IST
ಕುಷ್ಟಗಿ: ಸೀಮಿತ ಅವಧಿಯಲ್ಲಿ ಸೇವೆ ಮಾಡುವ ಶಾಸಕರಿಗೆ, ಸಂಸದರಿಗೆ ಪಿಂಚಣಿ ವ್ಯವಸ್ಥೆ ಇದೆ. ಆದರೆ ಸರ್ಕಾರದ ಭಾಗವಾಗಿ 30-40 ವರ್ಷಗಳ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ನಿಶ್ಚಿತ ಪಿಂಚಣಿ ಯಾಕಿಲ್ಲ ಎಂದು ಎನ್ ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಿವರಾಮು ಪ್ರಶ್ನಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರ ಸಂಘದ ‘ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಘೋಷಣೆಯೊಂದಿಗೆ ವಿಜಯ ಸಂಕಲ್ಪ ಯಾತ್ರೆ ಕುಷ್ಟಗಿಗೆ ಆಗಮಿಸಿದ ಸಂದರ್ಭದಲ್ಲಿ ಎನ್ ಪಿಎಸ್ ನೌಕರರನ್ನು ಉದ್ದೇಶಿಸಿ ಸಭೆಯಲ್ಲಿ ಮಾತನಾಡಿದರು.
ಸೇವೆಯಲ್ಲಿರುವ ಎನ್ ಪಿಎಸ್ ನೌಕರರ ಜೀವನ ಸಂಧ್ಯಾ ಕಾಲದ ಬೇಡಿಕೆಯಾಗಿದ್ದು, ಜೀವನದ ಕೊನೆಯ ಘಟ್ಟದಲ್ಲಿ ಗೌರವಯುತವಾಗಿ ಬದುಕಲು ಸಹಾಯವಾಗಲಿದೆ. ಎನ್. ಪಿ.ಎಸ್. ಅನಾನುಕೂಲದ ಹಿನ್ನೆಲೆಯಲ್ಲಿ ರಾಜಸ್ಥಾನ, ಛತ್ತೀಸ್ ಘಡ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಎನ್ಪಿಎಸ್ ರದ್ದು ಪಡಿಸಿವೆ.
ಅದೇ ಮಾದರಿ ಕರ್ನಾಟಕದಲ್ಲಿಯೂ ಎನ್ಪಿಎಸ್ ಯಾಕೆ ರದ್ದುಗೊಳಿಸಿಲ್ಲ? ಎನ್ ಪಿಎಸ್ ನೌಕರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮು ಪ್ರಶ್ನಿಸಿದರು. ಇದು ಸರ್ಕಾರಕ್ಕೆ ಅಂತಿಮ ಗಡವು, ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದರು.
ಸರ್ಕಾರಿ ನೌಕರರ ನಿವೃತ್ತಿ ಜೀವನವನ್ನು ಅಭದ್ರತೆಗೆ ತಳ್ಳುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವಂತೆ ಸರ್ಕಾರಿ ನೌಕರರು ಬೀದಿಗೆ ಇಳಿದಿದ್ದೇವೆ. ಡಿಸೆಂಬರ್ 19 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅವಿರತ ಹೋರಾಟ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಶಾಂತರಾಮು ತಿಳಿಸಿದರು.
ಎನ್ ಪಿಎಸ್ ನೌಕರರ ಹೋರಾಟ ಬೆಂಬಲಿಸಿದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ಎನ್ ಪಿಎಸ್ ನೌಕರರ ಈ ಬೇಡಿಕೆ ನ್ಯಾಯಯುತವಾಗಿದೆ. ಈ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು.
ಪ್ರಧಾನ ಕಾರ್ಯದರ್ಶಿ ನಾಗನಗೌಡ, ಕುಷ್ಟಗಿ ತಾಲೂಕು ನೌಕರ ಸಂಘದ ಅಧ್ಯಕ್ಷ ಬಾಲಜ್ಜ ಬಳಿಗಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕುದರಿ, ಕುಷ್ಟಗಿ ತಾಲೂಕು ಅಧ್ಯಕ್ಷ ಶರಣಪ್ಪ ವಡ್ಡರ, ಉಪಾಧ್ಯಕ್ಷ ಬಸವರಾಜ ಸಂಕನಾಳ, ರುದ್ರೇಶ್ ಬೂದಿಹಾಳ ಶಿವಪ್ಪ ವಾಗ್ಮೋರೆ ಶರಣಪ್ಪ, ಭರಮಪ್ಪ ಪರಸಪೂರ್ ಶಂಕರ್ ಉಪ್ಪಾರ್ ಶರಣಗೌಡ ಸೇರಿದಂತೆ ಕಂದಾಯ, ಜೆಸ್ಕಾಂ, ಪಂಚಾಯತ್ ರಾಜ್ ನೌಕರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್