ತಿಂಗಳಾಂತ್ಯಕ್ಕೆ  ನೀರು ಹರಿಸಲು ಚಿಂತನೆ

ಮಳೆಗಾಲದಲ್ಲಿ ನೀರಿನ ಪೋಲು ತಡೆ ಸಾಧ್ಯ­ಸಸಿ ಬೇಗ ನಾಟಿಯಾದರೆ ಹೆಚ್ಚು ಇಳುವರಿ

Team Udayavani, Jun 16, 2021, 6:47 PM IST

205214-gvt-01a

ವರದಿ :ಕೆ.ನಿಂಗಜ್ಜ

ಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಭತ್ತದ ಬೆಳೆಗೆ ಜೂ. 30ರೊಳಗೆ ನೀರು ಹರಿಸುವ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ನೀರಾವರಿ ತಜ್ಞರು ಚಿಂತನೆ ಮಾಡುತ್ತಿದ್ದಾರೆ.

ಈ ಬಾರಿ ಉತ್ತಮ ಮಳೆಯಾಗುವ ಕುರಿತು ಹವಾಮಾನ ತಜ್ಞರು, ವಿಜ್ಞಾನಿಗಳು ಸಲಹೆ ನೀಡಿದ್ದು, ಈಗಾಗಲೇ ಡ್ಯಾಂನಲ್ಲಿ 10 ಟಿಎಂಸಿ ಅಡಿಗೂ ಅಧಿ ಕ ನೀರು ಸಂಗ್ರಹವಾಗಿರುವುದರಿಂದ ಬೇಗನೆ ಕಾಲುವೆಗಳಿಗೆ ನೀರು ಹರಿಸುವುದರಿಂದ ಮುಂಗಾರು ಭತ್ತವನ್ನು ಜುಲೈನಲ್ಲಿ ನಾಟಿ ಮಾಡಲು ಅನುಕೂಲವಾಗುತ್ತದೆ. ಇದರಿಂದ ಮಳೆಗಾಲದಲ್ಲಿ ತುಂಗಭದ್ರಾ ಡ್ಯಾಂ ಭರ್ತಿಯಾಗಿ ನದಿ ಮೂಲಕ ನೀರು ಪೋಲಾಗುವುದನ್ನು ತಡೆಯಲು ಸಾಧ್ಯ ಹಾಗೂ ಭತ್ತದ ಬೆಳೆ ಚಳಿಗೆ ಸಿಗದೇ ಉತ್ತಮ ಇಳುವರಿ ಬರುತ್ತದೆ. ಕ್ರಿಮಿಕೀಟಗಳ ಹಾವಳಿ ಇರುವುದಿಲ್ಲ. ಮಳೆಗಾಲದಲ್ಲಿ ಭತ್ತ ಚೆನ್ನಾಗಿ ಬೆಳೆಯಲು ಸಾಧ್ಯವಾಗುತ್ತದೆ.

ಕಳೆದ 10 ವರ್ಷಗಳ ಹಿಂದೆ ಪ್ರತಿ ವರ್ಷ ಮುಂಗಾರು ಬೆಳೆಗೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸದೇ ಕಾಲುವೆಗೆ ನೀರು ಹರಿಸಲಾಗುತ್ತಿತ್ತು. ಬೇಸಿಗೆ ಹಂಗಾಮಿನಲ್ಲಿ ಡ್ಯಾಂನಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಕಡ್ಡಾಯವಾಗಿ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ನೀರಿನ ಹಂಚಿಕೆ ಮಾಡಲಾಗುತ್ತಿತ್ತು. 10 ವರ್ಷಗಳಿಂದೀಚೆಗೆ ಮುಂಗಾರು ಮತ್ತು ಬೇಸಿಗೆ ಸಂದರ್ಭದಲ್ಲಿ ನೀರಾವರಿ ಸಲಹಾ ಸಭೆ ಕರೆಯಲಾಗುತ್ತದೆ.

ಡ್ಯಾಂ ನಿರ್ಮಾಣ ಆದಾಗಿನಿಂದ ಮುಂಗಾರು ಹಂಗಾಮಿನಲ್ಲಿ ಐಸಿಸಿ ಸಭೆ ನಡೆಸಿದ ಉದಾಹರಣೆ ಇಲ್ಲ ಎನ್ನುತ್ತಾರೆ. ಅಚ್ಚುಕಟ್ಟು ಪ್ರದೇಶದ ಹಿರಿಯ ರೈತರ ಮುಖಂಡರು.

ಎರಡು ವರ್ಷಗಳಿಂದ ಕೊರೊನಾ ಹಾವಳಿಯಿಂದಾಗಿ ಯಾವುದೇ ಬೆಳೆಗೂ ಸೂಕ್ತ ಬೆಲೆ ಸಿಗದೇ ರೈತರಿಗೆ ನಷ್ಟವುಂಟಾಗುತ್ತಿದೆ. ಈ ವರ್ಷ ಮುಂಗಾರು ಭತ್ತದ ನಾಟಿ ಕಾರ್ಯ ನದಿ ಪಾತ್ರ ಮತ್ತು ಪಂಪ್‌ಸೆಟ್‌ ಇರುವ ನೀರಾವರಿ ಪ್ರದೇಶದಲ್ಲಿ ನಡೆಯುತ್ತಿದೆ. ಡ್ಯಾಂ ನೀರಿನಿಂದ ಭತ್ತ ಬೆಳೆಯುವ ರೈತರು ಭತ್ತದ ಸಸಿ ಮಡಿ ಹಾಕುವ ಕಾರ್ಯ ಆರಂಭಿಸಿದ್ದು, ಜುಲೈ ಮೊದಲ ವಾರದಲ್ಲಿ ಕಾಲುವೆಗಳಿಗೆ ನೀರು ಹರಿಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಸಸಿ ಮಡಿ ಹಾಕುವ ಕಾರ್ಯ ಭರದಿಂದ ಮಾಡುತ್ತಿದ್ದಾರೆ.

ಇನ್ನೂ ಮಾರಿಲ್ಲ ಭತ್ತ: ಕೊರೊನಾ ಪರಿಣಾಮವಾಗಿ ಜಾತ್ರೆ, ಸಾಮೂಹಿಕ ಮದುವೆ, ಹೊಟೇಲ್‌, ಹಾಸ್ಟೆಲ್‌, ಮಠಗಳಲ್ಲಿ ದಾಸೋಹ ಬಂದ್‌ ಆಗಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿ ಮಾರಾಟವಾಗುತ್ತಿಲ್ಲ. ಇದರಿಂದ ಕಳೆದ ವರ್ಷದ ಮುಂಗಾರು, ಹಿಂಗಾರಿನಲ್ಲಿ ಬೆಳೆದ ಭತ್ತ ಶೇ. 60ರಷ್ಟು ಮಾರಾಟವಾಗಿಲ್ಲ. ಪುನಃ ಮುಂಗಾರು ಹಂಗಾಮಿನಲ್ಲಿ ರೈತರು ಭತ್ತ ನಾಟಿಗೆ ಸಜ್ಜಾಗಿದ್ದಾರೆ. ಕೃಷಿ ತಜ್ಞರು ವಿಜ್ಞಾನಿಗಳು ಬೆಳೆ ಪದ್ಧತಿ ಬದಲಾವಣೆ ಅಥವಾ ಕ್ರಾಪ್‌ ಹಾಲೀಡೇ ಮಾಡುವಂತೆ ಸಲಹೆ ನೀಡಿದರೂ ಪ್ರಯೋಜನವಾಗುತ್ತಿಲ್ಲ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.