ಪೊಲೀಸರ ದಾಳಿ: ಏಳು ಜನರ ಬಂಧನ
Team Udayavani, Jul 3, 2019, 2:38 PM IST
ಗಂಗಾವತಿ: ಅಕ್ರಮಕ್ಕೆ ಬಳಸಿದ ವಾಹನ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿರುವುದು.
ಗಂಗಾವತಿ: ಅಕ್ರಮ ಫಿಲ್ಟರ್ ಮರಳು ದಂಧೆ ನಡೆಸುವವರ ಮೇಲೆ ದಾಳಿ ನಡೆಸಿ ಅಕ್ರಮಕ್ಕೆ ಬಳಸುತ್ತಿದ್ದ ಜೆಸಿಬಿ ಯಂತ್ರ, 7 ಟ್ರ್ಯಾಕ್ಟರ್, ಒಂದು ಬುಲೆರೋ ವಾಹನ ಸಮೇತ 7 ಜನರನ್ನು ಬಂಧಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.
ತಾಲೂಕಿನ ವೆಂಕಟಗಿರಿ ಬಂಡ್ರಾಳ ಮಧ್ಯೆ ಉಪ್ಪಾರ ಬಸಪ್ಪ ಎಂಬುವವರ ಹೊಲದಲ್ಲಿ ಹಲವು ತಿಂಗಳಿಂದ ಅಕ್ರಮವಾಗಿ ಫಿಲ್ಟರ್ ಮರಳು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಕ್ರಮ ನಡೆಸುತ್ತಿದ್ದ ಜಾಗ ಪತ್ತೆ ಮಾಡಿ ರವಿವಾರ ರಾತ್ರಿ ದಾಳಿ ನಡೆಸಲಾಗಿದೆ. ಟ್ರ್ಯಾಕ್ಟರ್, ಜೆಸಿಬಿ ಹಾಗೂ ಬುಲೆರೋ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ದಾಳಿಯಲ್ಲಿ ಗ್ರಾಮೀಣ ಸಿಪಿಐ ದೀಪಕ ಭೂಸರಡ್ಡಿ, ಪಿಎಸ್ವೈ ಪ್ರಕಾಶ ಮಾಳೆ ಸೇರಿ ಹಲವು ಪೊಲೀಸರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ