ಮಹದಾಯಿಗಾಗಿ ಬೀದಿಗಿಳಿದವರನ್ನು ಸಿಎಂ ನೋಡಲಿ : ತಂಗಡಗಿ

ಬಿಎಸ್‌ವೈರಿಂದ ರಾಜಕೀಯ ಚುನಾವಣಾ ಗಿಮಿಕ್

Team Udayavani, Oct 18, 2019, 4:35 PM IST

Shivaraj-tangadi

ಕೊಪ್ಪಳ: ಮಹದಾಯಿಗಾಗಿ ಉತ್ತರ ಕರ್ನಾಟಕ ರೈತರು ಬೆಂಗಳೂರಿನಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಹಾರಾಷ್ಟ್ರದ ಜನತೆ ಕಣ್ಣಿಗೆ ಕಂಡಿದ್ದಾರೆ. ಅವರಿಗೆ ನೀರು ಬಿಡುವ ಸುಳ್ಳು ಭರವಸೆ ನೀಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಲೇವಡಿ ಮಾಡಿದರು.

ಕನಕಗಿರಿ ತಾಲೂಕಿನ ಕನ್ನೇರಮಡು ಗ್ರಾಮದಲ್ಲಿ ಸದ್ಭಾವನಾ ಯಾತ್ರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈಗ ಮಹಾರಾಷ್ಟ್ರದಲ್ಲಿ ವಿಧಾನ ಸಭಾ ಚುನಾವಣೆ ನಡೆಯುತ್ತಿವೆ. ಸಿಎಂ ಜನರ ಮತ ಸೆಳೆಯಲು ನೀರು ಬಿಡುವ ವಿಚಾರ ಪ್ರಸ್ತಾಪಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರದವರೇ ನಮ್ಮ ರಾಜ್ಯಕ್ಕೆ ನೀರು ಬಿಡುವ ವೇಳೆ ದುಡ್ಡು ಪಡೆದು ನೀರು ಬಿಟ್ಟಂಥ ಉದಾಹರಣೆ ಇವೆ. ಸಿಎಂ ಇದನ್ನು ತಿಳಿದುಕೊಳ್ಳಲಿ ಎಂದರು.

ರಾಜ್ಯದಲ್ಲಿ ಮಹದಾಯಿಗಾಗಿ ನಿರಂತರ ಹೋರಾಟ ನಡೆಯುತ್ತಲೇ ಇದೆ. ನೂರಾರು ರೈತರು ಬೆಂಗಳೂರಿನಲ್ಲಿ ಬೀದಿಯಲ್ಲಿ ಕುಳಿತು ಧರಣಿ ನಡೆಸುತ್ತಿದ್ದಾರೆ. ಬಿಎಸ್‌ವೈ ಅವರಿಗೆ ಇಲ್ಲಿನ ರೈತರ ಧರಣಿ ಕಣ್ಣಿಗೆ ಕಾಣುತ್ತಿಲ್ಲ. ಆದರೆ ಮಹಾರಾಷ್ಟ್ರಕ್ಕೆ ನೀರು ಬಿಡುವ ವಿಚಾರ ಅವರ ಗಮನಕ್ಕೆ ಬಂದಿದೆ. ಈಗ ಏಲ್ಲಿ ಹೋದರು ಉಕ ಭಾಗದ ಸಂಸದರು, ಅವರೆಲ್ಲ ಮಂತ್ರಿಗಳಾಗಿದ್ದಾರಲ್ಲ ಅವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಮಹದಾಯಿಗಾಗಿ ರಸ್ತೆಗಿಳಿದು ರೈತರು ಧರಣಿ ಮಾಡುತ್ತಿದ್ದಾರೆ. ಅವರನ್ನು ಯಾರೂ ಕೇಳುವವರು ಇಲ್ಲದಂತಾಗಿದೆ. ಉಕ ಜನತೆ ನೆರೆ ಹಾನಿಗೆ ಮನೆಗಳನ್ನೇ ಕಳೆದುಕೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ನೆರೆ ಹಾನಿ ಸಂಬಂಧ ರಾಜ್ಯ ಸರ್ಕಾರ ಕೇಳಿದ ಪರಿಹಾರವನ್ನು ಕೇಂದ್ರವು ಶೇ.3 ರಷ್ಟು ಪರಿಹಾರ ಕೊಟ್ಟಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದರು.

ಮಹಾರಾಷ್ಟ್ರದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣೆ ಇರುವ ಸಂಬಂಧ ಗಿಮಿಕ್‌ಗಾಗಿ ನೀರು ಬಿಡುವ ವಿಚಾರ ಪ್ರಸ್ತಾಪಿಸಿದ್ದಾರೆ. ಮೊದಲು ನಮಗೆ ನೀರು ಇಡಿದಿಟ್ಟು ನಮ್ಮಲ್ಲಿನ ಸಾಧ್ಯತೆಗಳನ್ನು ತಿಳಿದು ಅವರಿಗೆ ನೀರು ಬಿಡಲಿ. ಬಿಜೆಪಿಯವರು ಏನು ಬೇಕಾದ್ರೂ ಮಾಡ್ತಾರೆ. ಏನೂ ಬೇಕಾದ್ರೂ ಮಾತನ್ನಾಡುತ್ತಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು ಒಂದು ರೀತಿ ಸುಳ್ಳೇ ಅವರ ಜಾಯಮಾನ, ಸುಳ್ಳೇ ಅವರ ಮನೆ ದೇವರು ಎಂದು ಲೇವಡಿ ಮಾಡಿದರು.

ಇನ್ನೂ ಮಹಾರಾಷ್ಟ್ರಕ್ಕೆ ನೀರು ಬಿಟ್ಟರೆ ನಮಗೆ ಪ್ರತ್ಯೇಕ ರಾಜ್ಯ ಎಂದಿರುವ ಉಮೇಶ ಕತ್ತಿ ಅವರು ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ತಂಗಡಗಿ, ನಾವು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಕೇಳುತ್ತಿಲ್ಲ. ಅದಕ್ಕೆ ವಿರೋಧವಿದೆ. ಅಖಂಡ ಕರ್ನಾಟಕ ನಮ್ಮ ನಿಲುವು, ಇದರಲ್ಲಿ ಎರಡು ಮಾತಿಲ್ಲ ಎಂದರು.

ಪ್ರಸ್ತುತ ಬಿಜೆಪಿ ಒಂದು ದೇಶ ಒಂದು ಕಾನೂನು ಎನ್ನುವ ಕೆಲಸ ಆರಂಭಿಸಿದೆ. ಕಾಶ್ಮೀರಕ್ಕೆ ನೀಡಿದ 370 ಮೀಸಲಾತಿ ರದ್ದು ಮಾಡಿದೆ. ಅದರಂತೆ ಮುಂದೆ ಕಲ್ಯಾಣ ಕರ್ನಾಟಕಕ್ಕೆ ನೀಡಿದ 371(ಜೇ) ಮೀಸಲಾತಿ ರದ್ದಾದರೂ ಅಚ್ಚರಿಪಡಬೇಕಿಲ್ಲ. ಕಾಶ್ಮೀರದ ಜನರನ್ನ ಬಂಧನದಲ್ಲಿಟ್ಟಂತೆ ಈ ಭಾಗದ ಜನರನ್ನೂ ಜೈಲಿಗೆ ಹಾಕಿದರೂ ಅಚ್ಚರಿ ಪಡಬೇಕಿಲ್ಲ ಎಂದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.