ನೀರಾವರಿ ವಿಷಯದಲ್ಲಿ ರಾಜಕೀಯ ಸಲ್ಲ: ರಾಯರಡ್ಡಿ ಆಕ್ಷೇಪಕ್ಕೆ ಸಂಗಣ್ಣ ಕರಡಿ ತಿರುಗೇಟು


Team Udayavani, Jan 24, 2022, 7:58 PM IST

1-sddds

 ಕೊಪ್ಪಳ: ಸಿಂಗಟಾಲೂರು ಏತ ನೀರಾವರಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹನಿ ನೀರಾವರಿ ಬದಲಿಗೆ ಮಧ್ಯ ಪ್ರದೇಶ ಮಾದರಿ ನೀರಾವರಿ ಮಾಡಲು ದಿಟ್ಟ ಕ್ರಮ ಕೈಗೊಂಡಿದ್ದಾರೆ. ಆದರೆ ಇದಕ್ಕೆ ಮಾಜಿ ಸಚಿವ ಬಸವರಾಜ ರಾಯರಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ. ತಮ್ಮದೇ ಕಾಂಗ್ರೆಸ್‌ ಸರ್ಕಾರ ಇದ್ದಾಗ ಏಕೆ ನೀರಾವರಿ ಪೂರ್ಣಗೊಳಿಸಲಿಲ್ಲ. ಸುಮ್ಮನೇ ನೀರಾವರಿ ವಿಷಯದಲ್ಲಿ ರಾಜಕೀಯ ಮಾಡುವುದು ಸಲ್ಲ ಎಂದು ಸಂಸದ ಸಂಗಣ್ಣ ಕರಡಿ ಅವರು ರಾಯರಡ್ಡಿ ಆಕ್ಷೇಪಕ್ಕೆ ತಿರುಗೇಟು ನೀಡಿದ್ದಾರೆ.

ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ಬಲ ಭಾಗದಲ್ಲಿ ಸಂಪೂರ್ಣ ನೀರಾವರಿಯಾಗಿದೆ. ಅಲ್ಲಿನ ರೈತರು ಸಮೃದ್ಧಿ ಬೆಳೆ ಬೆಳೆಯುತ್ತಿದ್ದಾರೆ. ಗದಗ ಭಾಗದಲ್ಲಿಯೂ ಸಹ ಎಚ್‌.ಕೆ. ಪಾಟೀಲ್‌ ಅವರು ಕೆರೆಗಳಿಗೆ ನೀರು ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ಎಡ ಭಾಗದಲ್ಲಿನ ಮುಂಡರಗಿ, ಕೊಪ್ಪಳ ಜಿಲ್ಲೆಯ ಜನರು ನೀರಾವರಿ ಸೌಲಭ್ಯವನ್ನೇ ಕಂಡಿಲ್ಲ. ಈ ಭಾಗ ಸಂಪೂರ್ಣ ನೀರಾವರಿ ವಂಚಿತವಾಗಿದೆ. ಈ ಮೊದಲು ಸಿಂಗಟಾಲೂರು ಏತ ನೀರಾವರಿಯಡಿ ಕೊಪ್ಪಳ ಜಿಲ್ಲೆಯು ಸೇರಿರಲಿಲ್ಲ. ನಾವು ನಿರಂತರ ಹೋರಾಟ ಮಾಡಿದ ಫಲವಾಗಿ ಕೊಪ್ಪಳ ಜಿಲ್ಲೆಗೂ ಆ ಯೋಜನೆ ವಿಸ್ತರಣೆ ಮಾಡಿದರು. ಆದರೆ ಬಲದಂಡೆ ಭಾಗ ಕಾಲುವೆ ನೀರಾವರಿಯಾಗಿ ಯಶಸ್ವಿಯಾಗಿ ನಡೆಯುತ್ತಿದೆ. ಎಡ ಭಾಗದ ರೈತರು ಹತ್ತಾರು ವರ್ಷಗಳಿಂದ ನೀರಾವರಿ ವಂಚಿತರಾಗಿದ್ದಾರೆ. ಈ ವಿಚಾರ ರಾಯರಡ್ಡಿ ಅವರಿಗೆ ಗೊತ್ತಿಲ್ಲವೇ ಎಂದಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಸರ್ಕಾರವೇ ಅಧಿ ಕಾರದಲ್ಲಿತ್ತಲ್ಲ. ಆಗ ಏಕೆ ರಾಯರಡ್ಡಿ ಅವರು ಸಿಂಗಟಾಲೂರು ಏತ ನೀರಾವರಿ ಬಗ್ಗೆ ಮಾತನಾಡಲಿಲ್ಲ. ಸರ್ಕಾರದಲ್ಲಿ ಅವರೂ ಮಂತ್ರಿಯಾಗಿದ್ದವರು. ಆಗ ನೀರಾವರಿ ವಿಷಯವು ಇವರ ಗಮನಕ್ಕೆ ಬರಲಿಲ್ಲವೇಕೆ? ಬಲ ಭಾಗಕ್ಕೆ ಕಾಲುವೆ ನೀರು ಮಾಡಿ, ಎಡ ಭಾಗದಲ್ಲಿ ಹನಿ ನೀರಾವರಿ ಯೋಜನೆ ಜಾರಿಗೊಳಿಸಿದ್ದರು. ಆದರೆ ಹನಿ ನೀರಾವರಿ ಎಲ್ಲಿಯೂ ಯಶಸ್ವಿಯಾಗಿಲ್ಲ. ರಾಮತಾಳ ಸೇರಿದಂತೆ ಹಲವು ಹನಿ ನೀರಾವರಿ ಯೋಜನೆಯು ವಿಫಲವಾಗಿವೆ. ರೈತರ ಜಮೀನಿನಲ್ಲಿ ಹಾಕಿದ್ದ ಪೈಪ್‌ ಗಳೂ ಈಗ ಇಲ್ಲದಂತಾಗಿವೆ. ಕೆಲವೊಂದು ಕಡೆ ಪೈಪ್‌ ಗಳನ್ನೇ ಹಾಕಿಲ್ಲ. ಹಾಗಾಗಿ ಸಿಎಂ ಬೊಮ್ಮಾಯಿ ಅವರು ಸ್ವತಃ ನೀರಾವರಿ ಸಚಿವರಾಗಿದ್ದವರು. ನೀರಾವರಿ ಬಗ್ಗೆ ತುಂಬಾ ಅನುಭವ ಇದೆ. ಸಿಂಗಟಾಲೂರು ಏತ ನೀರಾವರಿ ಬಗ್ಗೆ ಅವರಿಗೆ ತುಂಬ ಜ್ಞಾನವಿದೆ. ನಮ್ಮ ಕಮಿಟ್‌ಮೆಂಟ್‌ಗೆ ಸಿಎಂ ಒಪ್ಪಿ ಹನಿ ನೀರಾವರಿ ಬದಲಿಗೆ ಎಂಪಿ ಮಾದರಿ ನೀರಾವರಿ ಯೋಜನೆಯನ್ನಾಗಿ ಮಾಡಿದ್ದಾರೆ. ಇದಕ್ಕೆ ರಾಯರಡ್ಡಿ ಎಂಪಿ ಮಾದರಿ ಯಶಸ್ವಿಯಾಗಲ್ಲ. ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ರಾಯರಡ್ಡಿ ಅವರು ನೀರಾವರಿ ಬಗ್ಗೆ ಜ್ಞಾನ ಇದ್ದವರು. ಸುಮ್ಮನೆ ರಾಜಕೀಯ ಕಾರಣಕ್ಕೆ ಮಾತನಾಡುವುದು ಸರಿಯಲ್ಲ. ರಾಜಕೀಯ ಮಾತನಾಡಲು ಬೇರೆ ವೇದಿಕೆಗಳಿವೆ. ನೀರಾವರಿ ವಿಚಾರದಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ರಾಯರಡ್ಡಿ ಹೇಳಿಕೆಗೆ ಗರಂ ಆಗಿದ್ದಾರೆ.

ಮಧ್ಯ ಪ್ರದೇಶದಲ್ಲಿ ಚೇಂಬರ್‌ ಮೂಲಕ ನೀರು ಹರಿಸುವ ಯೋಜನೆ ಯಶಸ್ವಿಯಾಗಿದೆ. ಅಲ್ಲಿನ ನೀರಾವರಿ ವ್ಯವಸ್ಥೆಯ ಬಗ್ಗೆ ತಜ್ಞರು ತೆರಳಿ ಅಧ್ಯಯನ ಮಾಡಿ, ಅದನ್ನು ಇಲ್ಲಿ ಅನುಷ್ಠಾನ ಮಾಡಲಿದ್ದಾರೆ. ಮೊದಲು ಪೈಪ್‌ಗ್ಳ ಮೂಲಕ ರೈತರ ಜಮೀನಿಗೆ ನೀರು ಹರಿದು ಬರಲಿ. ನಂತರ ಹನಿ ನೀರಾವರಿ ಯೋಜನೆಯಡಿ ರೈತರಿಗೆ ಈಗಾಗಲೇ ಡ್ರಿಪ್‌ ಪೈಪ್‌ಗ್ಳನ್ನು ಸರ್ಕಾರವು ವಿವಿಧ ಯೋಜನೆಯಡಿಯಲ್ಲಿ ಕೊಡುತ್ತಿದೆ. ಅದರಲ್ಲಿ ರೈತರು ಈ ಸೌಲಭ್ಯ ಪಡೆದುಕೊಳ್ಳಲಿದ್ದಾರೆ. ಅಗತ್ಯವಿದ್ದರೆ ಸರ್ಕಾರವೂ ಮತ್ತೆ ನೆರವಾಗಲಿದೆ. ಸುಮ್ಮನೆ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ ಎಂದು ರಾಯರಡ್ಡಿ ಅವರ ಹೇಳಿಕೆಗೆ ಸಂಸದ ಸಂಗಣ್ಣ ಕರಡಿ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.