ರೈತರಿಗೆ ಕಳಪೆ ಭತ್ತದ ಬೀಜ ಪೂರೈಕೆ


Team Udayavani, Nov 19, 2019, 4:40 PM IST

kopala-tdy-1

ಗಂಗಾವತಿ: ಬೇಸಿಗೆಯಲ್ಲಿ ಭತ್ತ ನಾಟಿ ಮಾಡಲು ರೈತರು ಈಗಾಗಾಗಲೇ ಭತ್ತದ ಸಸಿ ಮಡಿ ಹಾಕುವ ಕಾರ್ಯ ಆರಂಭಿಸಿದ್ದಾರೆ. ಸಾಣಾಪೂರ, ಆನೆಗೊಂದಿ, ಬಸಾಪೂರ ಸೇರಿ ಆನೆಗೊಂದಿ, ವಿಜಯನಗರ ಕಾಲುವೆ ಪ್ರದೇಶ ರೈತರು ಖಾಸಗಿ ಕಂಪನಿಯಿಂದ ಭತ್ತದ ಬೀಜ ಖರೀದಿ ಮಾಡಿದ್ದು, ಸಸಿ ಮಡಿ ಮೊಳಕೆ ಒಡೆಯದೇ ರೈತರು ಆತಂಕಗೊಂಡಿದ್ದಾರೆ.

ಬೀಜ ಪೂರೈಕೆ ಮಾಡಿದ ಕಂಪನಿ ರೈತರಿಗೆ ಮೋಸ ಮಾಡಿದ್ದು ಕೃಷಿ ಇಲಾಖೆಯ ಗಮನಕ್ಕಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಬೇಸಿಗೆ ಹಂಗಾಮಿನಲ್ಲಿ 100-120 ದಿನಗಳ ಒಳಗೆ ಕಟಾವಿಗೆ ಬರುವ ಭತ್ತವನ್ನು ರೈತರು ಪ್ರತಿ ವರ್ಷ ನಾಟಿ ಮಾಡುತ್ತಾರೆ. ಕಳೆದ ನಾಲ್ಕೆ ದು ವರ್ಷಗಳಿಂದ ಬೇಸಿಗೆಯಲ್ಲಿ ಭತ್ತ ಬೆಳೆದಿಲ್ಲವಾದ್ದರಿಂದ ರೈತರ ಹತ್ತಿರ ಬೇಸಿಗೆ ಭತ್ತದ ಬೀಜದ ಕೊರತೆಯಾಗಿದೆ.

ಇದನ್ನು ಮನಗಂಡ ಹೊಸ್ಕೇರಾ ಕ್ಯಾಂಪಿನ ಆಂಧ್ರಪ್ರದೇಶ ಮೂಲದ ವ್ಯಕ್ತಿಯ ಮಾಲೀಕತ್ವದ ಕಂಪನಿ ಬೇಸಿಗೆ ಭತ್ತದ ಬೀಜ ಪೂರೈಕೆ ಮಾಡಿದೆ. ಈ ಬೀಜಗಳು ಯಾವುದೇ ಬೀಜೋಪಚಾರಗಳಿಲ್ಲದೇ ಇರುವುದರಿಂದ ಸಸಿ ಮಡಿ ಹಾಕಿ ಹಲವು ದಿನಗಳಾದರೂ ಮೊಳಕೆ ಒಡೆದಿಲ್ಲ. ಸಸಿ ಮಡಿ ಹಾಕಲು ಪ್ರತಿ ಎಕರೆಗೆ ಸುಮಾರು 8ರಿಂದ 10 ಸಾವಿರ ರೂ. ಖರ್ಚು ಮಾಡಿದ ರೈತರು ಇದೀಗ ತಲೆಯ ಮೇಲೆ ಕೈ ಹೊತ್ತು ಕುಳಿತ್ತಿದ್ದಾರೆ. ಸಾಣಾಪೂರ, ಜಂಗ್ಲಿ ರಂಗಾಪೂರ, ತಿರುಮಲಾಪೂರ, ವಿರೂಪಾಪೂರಗಡ್ಡಿ, ಹನುಮನಹಳ್ಳಿ, ಗೂಗಿಬಂಡಿ ಸೇರಿ ಮುಂಗಾರಿನ ಭತ್ತ ಕಟಾವು ಮಾಡಿದ ಪ್ರದೇಶದ ರೈತರು ಖಾಸಗಿ ಕಂಪನಿಯ ಬೀಜ ಖರೀದಿ ಮಾಡಿದ್ದಾರೆ.

ಈ ಕಂಪನಿ 20 ಕೆಜಿ ತೂಕದ 1 ಲಕ್ಷ ಪ್ಯಾಕೆಟ್‌ ಬೀಜ ತಯಾರಿಸಿದ್ದು, ದಾವಣಗೆರೆ, ಹರಿಹರ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ಸಿರಗುಪ್ಪಾ, ಹೊಸಪೇಟೆ ಭಾಗದ ಡೀಲರ್‌ಗಳಿಗೆ ಬೀಜ ಪೂರೈಕೆ ಮಾಡಿದೆ. ಅಲ್ಲಿಯೂ ಸಸಿ ಮಡಿ ಮೊಳಕೆ ಒಡೆಯದಿರುವ ಕುರಿತು ಮಾಹಿತಿ ಇದೆ. ರೈತರಿಗೆ ಸರಿಯಾಗಿ ರಶೀದಿ ನೀಡಿದೇ ಬಿಳಿ ಪಟ್ಟಿಯಲ್ಲಿ ಬೀಜ ಮಾರಾಟ ಬಿಲ್‌ ನೀಡಿ ವಂಚನೆ ಮಾಡಲಾಗಿದೆ ಎನ್ನಲಾಗುತ್ತಿದೆ. ರೈತರು ಕೃಷಿ ಇಲಾಖೆಯ ಕೇಂದ್ರಗಳಲ್ಲಿ ಬೀಜ ಇಲ್ಲ ಎಂದು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಹೇಳುತ್ತಿದ್ದಾರೆ.

ಖಾಸಗಿ ಕಂಪನಿಗಳ ಬೀಜ ಖರೀದಿ ಮಾಡಿ ರೈತರು ಮೋಸ ಹೋಗಿದ್ದಾರೆ. ಆದರೂ ಕೃಷಿ ಇಲಾಖೆ ಮತ್ತು ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ಕೇಂದ್ರ ಮತ್ತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿಲ್ಲ. ಸದ್ಯ ನಕಲಿ  ಬೀಜ ಪೂರೈಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ. ರೈತರು ತಮ್ಮ ಕಷ್ಟವನ್ನು ಯಾರು ಹತ್ತಿರ ಹೇಳಿಕೊಳ್ಳಲಾಗುತ್ತಿಲ್ಲ.

 

-ಕೆ. ನಿಂಗಜ್ಜ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.