ಹಾಕಿದ್ದ ದಿನವೇ ಕೊಚ್ಚಿಹೋಯ್ತು ಸಿಮೆಂಟ್ ಕಾಂಕ್ರೀಟ್
Team Udayavani, Jun 13, 2020, 6:25 AM IST
ಕಾರಟಗಿ: ಪಟ್ಟಣದ ಡಾ| ರಾಜ್ ಕಲಾ ಮಂದಿರದ ಬಳಿಯ ಚಿನಿವಾಲ ಆಸ್ಪತ್ರೆಯ ಮುಂಭಾಗದ ರಸ್ತೆಗೆ ಕಾಂಕ್ರೀಟ್ ಮಾಡಿದ್ದ ದಿನವೇ ಮಳೆ ಸುರಿದಿದ್ದು, ಸಿಮೆಂಟ್ ಕೊಚ್ಚಿಕೊಂಡು ಹೋಗಿ ಕಲ್ಲುಗಳು ಮೇಲೆದ್ದಿವೆ. ಇದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಮೂರ್ನಾಲ್ಕು ವರ್ಷಗಳ ಹಿಂದೆ ಡಾ| ರಾಜ್ ಕಲಾಮಂದಿರದ ಬಳಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿತ್ತು. ಆದರೆ ಚಿನಿವಾಲ ಆಸ್ಪತ್ರೆಯ ಮುಂಭಾಗದಲ್ಲಿ ಕಾಂಕ್ರೀಟ್ ಮಾಡುವುದನ್ನು ತಾಂತ್ರಿಕ ಕಾರಣಗಳಿಂದ ಬಿಡಲಾಗಿತ್ತು. ಕಳೆದ 8 ದಿನಗಳ ಹಿಂದೆ ಸಿಸಿ ನಿರ್ಮಿಸಲು ರಸ್ತೆಯ ಮಣ್ಣನ್ನು ಅಗೆದು ನಂತರ ಮರಂ ಹಾಕಿ ರೋಲರ್ನಿಂದ ಸಮತಟ್ಟು ಮಾಡಲಾಗಿತ್ತು. ಎರಡು ದಿನಗಳ ಹಿಂದೆ ಈ ರಸ್ತೆಗೆ ಕಾಂಕ್ರೀಟ್ ಹಾಕುತ್ತಿದ್ದಾಗ ಮಳೆ ಪ್ರಾರಂಭವಾಗಿದ್ದರೂ ಗುತ್ತಿಗೆದಾರರು ಕಾಂಕ್ರೀಟ್ ಹಾಕಿ ಹೋಗಿದ್ದಾರೆ. ಆದರೆ ನಂತರ ರಭಸದಿಂದ ಸುರಿದ ಮಳೆಗೆ ಸಿಮೆಂಟ್ ಕಿತ್ತು ಹೋಗಿದೆ. ಪುರಸಭೆ ಆಡಳಿತ ಕಾಮಗಾರಿ ವೀಕ್ಷಿಸಿ ಪುನಃ ಕಾಂಕ್ರೀಟ್ ಹಾಕಿಸಿ ರಸ್ತೆಯನ್ನು ಸಮತಟ್ಟಾಗಿ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಳೆ ಬರುವ ಸಮಯದಲ್ಲಿ ಕಾಂಕ್ರೀಟ್ ಹಾಕಬಾರದಾಗಿತ್ತು. ರಸ್ತೆ ನಿರ್ಮಿಸುವುದು ಗುತ್ತಿಗೆದಾರನ ಹೊಣೆ. ಕಾಂಕ್ರೀಟ್ ಹಾಕಿದ ಸ್ಥಳ ಪರಿಶೀಲಿಸಿ ಸಮರ್ಪಕವಾಗಿ ರಸ್ತೆ ನಿರ್ಮಿಸಲು ಗುತ್ತಿಗೆದಾರರಿಗೆ ಸೂಚಿಸಲಾಗುವುದು. ರಸ್ತೆ ನಿರ್ಮಿಸಿದ ನಂತರ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿ ಬಿಲ್ ಪಾವತಿಗೆ ಅನುಮತಿ ನೀಡಲಾಗುವುದು. -ಎನ್. ಶಿವಲಿಂಗಪ್ಪ, ಪುರಸಭೆ ಮುಖ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’