ಗರ್ಭಿಣಿ ಸಾವು: ವೈದ್ಯರ ವಿರುದ್ಧ ಆಕ್ರೋಶ


Team Udayavani, Dec 2, 2019, 2:47 PM IST

kopala-tdy

ಕೊಪ್ಪಳ: ನಗರದ ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಮೃತ ಮಹಿಳೆಯ ಸಂಬಂಧಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ರವಿವಾರ ನಡೆದಿದೆ.

ಮೂಲತಃ ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಕೋಗಳಿ ತಾಂಡಾದ, ಸದ್ಯ ಕೊಪ್ಪಳ ತಾಲೂಕಿನ ಗಿಣಗೇರಿ ಗ್ರಾಮದಲ್ಲಿ ನೆಲೆಸಿರುವ ಜ್ಯೋತಿಬಾಯಿ ಕುಮಾರ್‌ ನಾಯಕ್‌ ಮೃತಟ್ಟಿದ್ದಾರೆ. ಜ್ಯೋತಿಬಾಯಿ ತುಂಬು ಗರ್ಭಿಣಿಯಾಗಿದ್ದರಿಂದ ರವಿವಾರಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆಕೊಡಿಸಲಾಗಿತ್ತು. ಆಸ್ಪತ್ರೆಗೆ ಒಳಗೆ ನಡೆದುಕೊಂಡೇ ಬಂದಿದ್ದ ಮಹಿಳೆ ಏಕಾಏಕಿಮೃತಪಡಲು ಹೇಗೆ ಸಾಧ್ಯವೆಂದು ಮಹಿಳೆ ಕಡೆಯ ಸಂಬಂಧಿಕರು  ವೈದ್ಯರೊಂದಿಗೆ ವಾಗ್ವಾದ ನಡೆಸಿದರು.

ವೈದ್ಯರು ಮಾತ್ರ ರಕ್ತದ ಕೊರತೆಯಿಂದ ಗರ್ಭಿಣಿ ಮೃತಪಟ್ಟಿದ್ದಾಳೆಂದು ಹೇಳಿದ್ದು, ದಾಖಲೆಯಲ್ಲಿ ಎಚ್‌ಬಿ ರಕ್ತದ ಪ್ರಮಾಣ 11.6 ಎಂದು ಮೊದಲು ನಮೂದು ಮಾಡಿದ್ದಾರೆ. ಗರ್ಭಿಣಿ ಮೃತಪಟ್ಟ ಬಳಿಕ ದಾಖಲೆಯಲ್ಲಿ ರಕ್ತದ ಪ್ರಮಾಣ 2.06ಎಂದು ತಿದ್ದುಪಡಿ ಮಾಡಿದ್ದಾರೆ. ವೈದ್ಯರು ತಮ್ಮ ತಪ್ಪು ಮುಚ್ಚಿಕೊಳ್ಳಲು ರಕ್ತದಕೊರತೆಯಿದೆ ಎಂದಿದ್ದು, ಇವರ ನಿರ್ಲಕ್ಷ್ಯದಿಂದಲೇ ಗರ್ಭಿಣಿ ಮೃತಪಟ್ಟಿದ್ದಾಳೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.

ಮೊದಲೆಲ್ಲ ರಕ್ತ ಪರೀಕ್ಷೆ ನಡೆಸಿದಾಗ ಎಚ್‌ಬಿ 11 ಪಾಯಿಂಟ್‌ನಷ್ಟು ಬರುತ್ತಿತ್ತು. ಈಗ ಏಕಾಏಕಿ 2.06 ಪಾಯಿಂಟ್‌ ಹಂತಕ್ಕೆಕಡಿಮೆಯಾಗಲು ಹೇಗೆ ಸಾಧ್ಯ? ಗರ್ಭಿಣಿಗೆ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿಲ್ಲ. ಸರಿಯಾಗಿ ಸ್ಪಂದಿಸಿಲ್ಲ. ಅವರ ನಿರ್ಲಕ್ಷ್ಯವೇ ಇದಕ್ಕೆಲ್ಲಕಾರಣ. ಇದನ್ನು ಮುಚ್ಚಿಕೊಳ್ಳಲು ರಕ್ತದ ಕೊರತೆಯಿಂದೆ ಎಂದು ಹೇಳಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆಂದು ಆಪಾದಿಸಿದರು.

ಆಸ್ಪತ್ರೆಯ ಮುಖ್ಯ ದ್ವಾರದ ಗೇಟ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗೇಟ್‌ ತೆಗೆಸುವ ಮೂಲಕ ಪಾಲಕರಿಗೆ ಸಾಂತ್ವನ ಹೇಳುವ ಪ್ರಯತ್ನ ನಡೆಸಿದರು.

ಸ್ಥಳಕ್ಕೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಎಸ್‌.ಬಿ. ದಾನರಡ್ಡಿ ಆಗಮಿಸಿ ಕುಟುಂಬಸ್ಥರೊಂದಿಗೆ ಮಾತನಾಡಿದರಲ್ಲದೇ, ಗರ್ಭಿಣಿಯ ಚಿಕಿತ್ಸೆ ವಿಧಾನ ಏನಾಗಿದೆ ಎನ್ನುವುದನ್ನು ಪರಿಶೀಲಿಸುವೆ. ನಮ್ಮವರು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳುವೆ ಎಂದರು.

ಆಸ್ಪತ್ರೆಯಲ್ಲಿ ಆಕ್ರಂದನ: ಆಸ್ಪತ್ರೆಯಲ್ಲಿ ಗರ್ಭಿಣಿ ಮೃತಪಟ್ಟಿರುವ ಸುದ್ದಿತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂದನಮುಗಿಲು ಮುಟ್ಟುವಂತಿತ್ತು. ಪಾಲಕರ ರೋದನ ಕರಳು ಕಿತ್ತು ಬರುವಂತಿತ್ತು. ಆಸ್ಪತ್ರೆಯಲ್ಲಿನ ಅವರ ನರಳಾಟನೋಡದಂತಹ ಸ್ಥಿತಿಯಿತ್ತು. ಆದರೂಇತರೆ ಬಂಧುಬಳಗದವರು ಸಮಾಧಾನ ಮಾಡಲು ಪ್ರಯತ್ನಿಸುತ್ತಿದ್ದರು.

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.