ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
ಸುಪ್ರೀಂ ಕೋರ್ಟ್ಗೆ ಮೀಸಲಾತಿ ಮುಂದುವರೆಸುವುದಾಗಿ ಅಫಿಡವಿಟ್ ಸಲ್ಲಿಸಿದೆ.
Team Udayavani, May 4, 2024, 6:00 PM IST
■ ಉದಯವಾಣಿ ಸಮಾಚಾರ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಬಿಜೆಪಿಯವರಿಗೆ ಕನಿಷ್ಠ ಜ್ಞಾನವಿಲ್ಲ. ಮುಸ್ಲಿಂರ ಮೀಸಲಾತಿ ವಿಚಾರದಲ್ಲಿ ಬಿಜೆಪಿಗರು ಹಸಿ ಸುಳ್ಳು ಹೇಳುತ್ತಿದ್ದು, ಆ ಪಕ್ಷ ಸುಳ್ಳು ಹೇಳುವ ಸಂಸ್ಥೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಗುಡುಗಿದರು.
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕರೂರು ಮತ್ತು ಸಿರಿಗೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರ ಪರ ಮತ ಪ್ರಚಾರ ನಡೆಸಿ ಸಚಿವರು ಮಾತನಾಡಿದರು.
ಚಿನ್ನಪ್ಪರೆಡ್ಡಿ ಅವರ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಮರಿಗೆ 20 ವರ್ಷಗಳ ಹಿಂದೆ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಈ ಮೀಸಲಾತಿಯನ್ನು ತೆಗೆಯಲು ಬಸವರಾಜ ಬೊಮ್ಮಾಯಿ ಸರ್ಕಾರ ಪ್ರಯತ್ನಿಸಿತ್ತು. ಬಳಿಕ ಬಸವರಾಜ ಬೊಮ್ಮಾಯಿ ಅವರ ಸರ್ಕಾರವೇ ಸುಪ್ರೀಂ ಕೋರ್ಟ್ಗೆ ಮೀಸಲಾತಿ ಮುಂದುವರೆಸುವುದಾಗಿ ಅಫಿಡವಿಟ್ ಸಲ್ಲಿಸಿದೆ. ಈಗಲೂ ಹಿಂದಿನಂತೆ ಮೀಸಲಾತಿ ಮುಂದುವರೆದಿದೆ. ಈ ವಿಚಾರದಲ್ಲಿ ಬಿಜೆಪಿಗರು ಸುಳ್ಳು ಹೇಳುತ್ತಿದ್ದಾರೆ ಎಂದರು.
ಸುಳ್ಳು ಹೇಳುವುದರಲ್ಲಿ ಬಿಜೆಪಿಯಲ್ಲಿ ಸ್ಪರ್ಧೆ ಪ್ರಾರಂಭಗೊಂಡಿದೆ. ಜನತೆ ಮುಂದೆ ವಾಸ್ತವ ಸತ್ಯವನ್ನು ಹೇಳಿ ಮತ ಕೇಳಲಿ. ಅದನ್ನು ಬಿಟ್ಟು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಹಿಂದುಳಿದ ವರ್ಗದ ಮೀಸಲಾತಿಯನ್ನು ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದೆ ಎಂದು ಸುಳ್ಳು ಹೇಳುತ್ತಾರೆ.
ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಾಗಲಿ ಅಥವಾ ಇಲಾಖಾ
ಮಂತ್ರಿಯಾಗಿ ನಾನು ಮೀಸಲಾತಿ ಬಗ್ಗೆ ಹೇಳಿದ್ದೀನಾ ? ಪ್ರಧಾನ ಮಂತ್ರಿಗಳಿಗೂ ಈ ಬಗ್ಗೆ ತಿಳಿವಳಿಕೆ ಇಲ್ಲವೇ ? ಈ ಬಗ್ಗೆ ಪತ್ರಿಕೆಗಳಲ್ಲಿ ಸುಳ್ಳಿನ ಜಾಹೀರಾತು ನೀಡುತ್ತಿದ್ದಾರೆ. ಈ ದೇಶ ಕಂಡಂತಹ ಮಹಾನ್ ಸುಳ್ಳಿನ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಕಿಡಿಕಾರಿದರು. ಅತೀ ಹೆಚ್ಚು ಸುಳ್ಳು ಹೇಳುವವರು ಬಳ್ಳಾರಿಯಲ್ಲಿದ್ದು, ಅದರಲ್ಲಿ ಓರ್ವ ಮಹಾಶಯ ನಮ್ಮ ಜಿಲ್ಲೆಗೆ ಬಂದು ಶಾಸಕರಾಗಿದ್ದಾರೆ. ನಿತ್ಯ ಜನಕ್ಕೆ ಸುಳ್ಳು ಹೇಳುವುದನ್ನೇ ಪರಿಪಾಠ ಮಾಡಿಕೊಂಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ವಾಗ್ಧಾಳಿ ನಡೆಸಿದರು.
ದೇಶಕ್ಕೆ ಮೋದಿ ಕೊಡುಗೆ ಏನು?
ಬಿಜೆಪಿ ಕೇಂದ್ರದಲ್ಲಿ ಅ ಕಾರಕ್ಕೆ ಬರುವ ಮುನ್ನ ಪೆಟ್ರೋಲ್ 50 ರೂ.ಗೆ ಕೊಡುತ್ತೇವೆ ಎಂದಿದ್ದರು. ಹತ್ತು ವರ್ಷಗಳ ಹಿಂದೆ 45 ರೂ.ಇದ್ದ ಪೆಟ್ರೋಲ್ ದರ 100 ರೂ.ಗೆ, 450 ರೂ.ಇದ್ದ ಅಡುಗೆ ಅನಿಲ 1100 ರೂ.ಗೆ ತಂದು ನಿಲ್ಲಿಸಿದ್ದರು. ಬಿಜೆಪಿಯವರು ಅಂಬಾನಿ, ಅದಾನಿ ಅವರನ್ನು ಮಾತ್ರ ಇನ್ನಷ್ಟು ಶ್ರೀಮಂತರನ್ನಾಗಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಇಡೀ ದೇಶದ ಜನರನ್ನು ಶ್ರೀಮಂತರನ್ನಾಗಿಸಲು ಮುಂದಾಗಿದೆ. ಗಡ್ಡ ಬಿಟ್ಟರೆ ವಿಶ್ವಗುರು ಆಗಲ್ಲ.
ದೇಶದ ರೈತರ, ಬಡವರು, ಮಧ್ಯಮ ವರ್ಗ ಹಾಗೂ ಕಾರ್ಮಿಕರಿಗೆ ಕೊಡುಗೆ ನೀಡಬೇಕು. ನಿಜಕ್ಕೂ ಈ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರಲ್ಲದೇ, ಬಿಜೆಪಿ ಅಭ್ಯರ್ಥಿಗಳು ಮೋದಿ ನೋಡಿ ವೋಟ್ ಹಾಕಿ ಅಂತೀರಾಲ್ಲಪ್ಪ, ನಿಮ್ಮ ಹೆಸರಲ್ಲಿ ವೋಟ್ ಕೇಳಲು ಧಮ್ಮು ಇಲ್ವಾ ಎಂದು ಸವಾಲು ಹಾಕಿದರು. ಮಾಜಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಿ.ಎಂ.ನಾಗರಾಜ್, ಗಣೇಶ್ ಪ್ರಸಾದ್, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ನಾಪುರ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್, ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ
Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ