ಪ್ರಧಾನಿ ಆದರ್ಶ ಗ್ರಾಮ ಯೋಜನೆ ಕಾಮಗಾರಿ ವೀಕ್ಷಣೆ
ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು.
Team Udayavani, Jan 11, 2022, 5:50 PM IST
ಕನಕಗಿರಿ: ತಾಲೂಕಿನ ನಾಲ್ಕು ಗ್ರಾಮಗಳು ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಗೊಂಡಿದ್ದು, ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿವೆ ಎಂದು ತಾಪಂ ಇಒ ಕೆ.ವಿ. ಕಾವ್ಯರಾಣಿ ಹೇಳಿದರು. ಪಿಎಂ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಗೊಂಡ ಸಮೀಪದ ಬೊಮ್ಮಸಾಗರ ತಾಂಡಾ, ಇಂಗಳದಾಳ ಹಾಗೂ ಚಿರ್ಚನಗುಡ್ಡ ತಾಂಡಾಗಳಿಗೆ ಸೋಮವಾರ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.
ತಾಲೂಕಿನ ಬೊಮ್ಮಸಾಗರ, ಅಡವಿಬಾವಿ, ಇಂಗಳದಾಳ ಹಾಗೂ ಚಿರ್ಚನಗುಡ್ಡ ತಾಂಡಾಗಳು ಯೋಜನೆಗೆ ಆಯ್ಕೆಯಾಗಿವೆ. ತಲಾ ಒಂದು ಗ್ರಾಮದಲ್ಲಿ 40 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು.
ಕುಡಿಯುವ ನೀರು, ಗ್ರಾಮ ನೈರ್ಮಲಿಕರಣ, ಕಸ ವಿಲೇವಾರಿ, ಅಂಗನವಾಡಿ, ಶಾಲೆಗಳಲ್ಲಿ ಶೌಚಾಲಯ ದುರಸ್ತಿ, ಸ್ಮಾರ್ಟ್ ಕ್ಲಾಸ್ ಅಳವಡಿಕೆ, ಸಿಸಿ ರಸ್ತೆ ನಿರ್ಮಾಣ, ಸೌರ ವಿದ್ಯುತ್ ಮತ್ತು ಬೀದಿ ದೀಪಗಳ ನಿರ್ಮಾಣ ಸೇರಿ ಇತರೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೆಲ ಕಾಮಗಾರಿಗಳು ಮುಗಿದಿದ್ದು, ಉಳಿದಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಯೇ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯ ಉದ್ದೇಶವಾಗಿದೆ.
ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು. ಕಳಪೆ ಕಾಮಗಾರಿ ನಡೆದರೆ ಗಮನಕ್ಕೆ ತರುವಂತೆ ಗ್ರಾಮಸ್ಥರಿಗೆ ಹೇಳಿದರು. ಕೆಆರ್ಡಿಇಎಲ್ ಜೆ.ಇ. ದೇವರಾಜ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ವೀರಣ್ಣ ನಕ್ರಳ್ಳಿ, ಶರಣೇಗೌಡ ಪಾಟೀಲ, ಗ್ರಾಪಂ ಸದಸ್ಯ ಕೃಷ್ಣಪ್ಪ, ಚರ್ಚಿನಗುಡ್ಡ ತಾಂಡಾ ಗ್ರಾಪಂ ಸದಸ್ಯರಾದ ಹುಸೇನಸಾಬ್, ಪ್ರಮುಖರಾದ ಯಮನೂರಪ್ಪ ದಳಪತಿ, ರಾಮಚಂದ್ರಗೌಡ, ರಾಮಣ್ಣ ಆದಾಪುರ, ಬಸವರಾಜ, ಮಲ್ಲಿಕಾರ್ಜುನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ