ನಾಡಕಚೇರಿ ವ್ಯವಸ್ಥೆ ‘ನೆಟ್’ಗಿಲ್ಲ !
Team Udayavani, Sep 23, 2018, 4:40 PM IST
ತಾವರಗೇರಾ: ಪಟ್ಟಣದ ನಾಡ ಕಚೇರಿಯ ಅಂರ್ತಜಾಲ ಸಂಪರ್ಕ ಕಡಿತಗೊಂಡಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ನಾಡ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ವಿವಿಧ ಗ್ರಾಮಗಳ ಜನತೆ ಬರಿಗೈಯಲ್ಲಿ ವಾಪಸ್ ತೆರಳಿದರು. ನಾಡ ಕಚೇರಿಯವರು ಬಿಎಸ್ಎನ್ಎಲ್ ಬಿಲ್ ಪಾವತಿಸದಿರುವುದಕ್ಕೆ ಬಿಎಸ್ಎನ್ಎಲ್ ಅಧಿಕಾರಿಗಳು ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಇದರಿಂದ ನಿತ್ಯ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಲು ಬರುವ ಹೋಬಳಿ ವ್ಯಾಪ್ತಿಯ ನಾಗರಿಕರು ಪರದಾಡುವಂತಾಗಿದೆ. ಕಚೇರಿಗೆ ಬರುವ ನೂರಾರು ಜನಕ್ಕೆ ಇಲ್ಲಿನ ಸಿಬ್ಬಂದಿ ವಿವಿಧ ಕಾರಣ ಕೊಟ್ಟು ವಾಪಸ್ ಕಳುಹಿಸುತ್ತಿರುವಯದು ಶನಿವಾರ ಕಂಡು ಬಂದಿತು.
2013 ರಿಂದ ನಮ್ಮ ಕಚೇರಿಗೆ ಕಲ್ಪಿಸಿರುವ ನೆಟ್ ಸಂಪರ್ಕದ ಬಿಲ್ನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಾವತಿ ಮಾಡಲಾಗುತ್ತಿತ್ತು. ಆದರೆ ಈ ತಿಂಗಳ ಬಿಲ್ ಪಾವತಿ ಆಗಿಲ್ಲ. ಆದ ಕಾರಣ ನಮಗೆ ಬಿಲ್ ಪಾವತಿ ಮಾಡಲು ಬಿಎಸ್ಎನ್ಎಲ್ ಕಚೇರಿಯಿಂದ ಕರೆ ಮಾಡಲಾಗಿತ್ತು. ಈಗಾಗಲೇ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಇಲ್ಲಿನ ಬಿಎಸ್ಎನ್ಎಲ್ ಅಧಿಕಾರಿಗಳು ರಾಯಚೂರು ಕಚೇರಿ ಮೇಲಾಧಿಕಾರಿಗಳ ಜೊತೆ ಮಾತನಾಡಿ ಎಂದು ಹೇಳುತ್ತಾರೆ. ಸೋಮವಾರದೊಳಗೆ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು.
∙ಹಸನಸಾಬ್ ಗುಳೇದಗುಡ್ಡ, ನಾಡ ತಹಶೀಲ್ದಾರ್ ತಾವರಗೇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ