ಅರ್ಧ ಗಂಟೆಯಲ್ಲೇ ಮುಗಿಯಿತು ಪ್ರಗತಿ ಪರಿಶೀಲನೆ

•ಮಕ್ಕಳ ತೂಕ ಮತ್ತು ಎತ್ತರದ ಬಗ್ಗೆ ಗಮನ ಹರಿಸಲು ಸೂಚನೆ •ಅಂಗನವಾಡಿ ಕೇಂದ್ರಗಳಲ್ಲಿ ಶುಚಿ ಶೌಚಾಲಯ ನಿರ್ಮಾಣ ಮಾಡಿ: ಉಮಾ ಮಹದೇವನ್‌

Team Udayavani, Jun 7, 2019, 2:39 PM IST

kopala-tdy-3..

ಕೊಪ್ಪಳ: ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್‌ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕೊಪ್ಪಳ: ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು. ಅವರ ತೂಕದಲ್ಲಿ ಹೆಚ್ಚಳವಾಗಬೇಕು. ಈ ಬಗ್ಗೆ ಅಂಗನವಾಡಿ ನೌಕರರು ಕಾಳಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ (ಪಂ.ರಾಜ್‌) ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವರದಿ ಪಡೆದು ಅವರು ಮಾತನಾಡಿದರು.

ಎಲ್ಲ ಅಂಗನವಾಡಿಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿದ ಅವರು, ಮಾತೃಶ್ರೀ ಯೋಜನೆ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಮಕ್ಕಳ ತೂಕ ಮತ್ತು ಎತ್ತರದ ಬಗ್ಗೆ ಗಮನ ಹರಿಸಬೇಕು ಎಂದರು.

ಅಂಗನವಾಡಿ ಕೇಂದ್ರಗಳಲ್ಲಿ ಶುಚಿ ಶೌಚಾಲಯ ನಿರ್ಮಾಣವಾಗಬೇಕು. ಅಲ್ಲದೇ ಸ್ವಚ್ಛತೆಯ ವಾತಾವರಣವನ್ನು ಸಹ ಕಲ್ಪಿಸಿಕೊಡಬೇಕು. ಗೋಶಾಲೆಗಳ ಜಾನುವಾರುಗಳಿಗೆ ಮೇವು ಸಿಗುತ್ತಿದೆಯೇ ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿದರು.

ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರು ಮಾತನಾಡಿ, ತೀವ್ರ ಬರದ ಹಿನ್ನೆಲೆ ಕೊಪ್ಪಳ ಜಿಲ್ಲೆಯಲ್ಲಿ ಏಳು ಗೋಶಾಲೆಗಳನ್ನು ಹಾಗೂ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಗೋಶಾಲೆಯಲ್ಲಿ 300 ರಿಂದ 400 ಜಾನುವಾರಗಳಿವೆ. ಪ್ರತಿನಿತ್ಯ ಜಾನುವಾರುಗಳಿಗೆ ಮೇವು ಒದಗಿಸಲಾಗುತ್ತಿದೆ. ಇನ್ನೂ ಸುಮಾರು 13 ವಾರಗಳಷ್ಟು ಮೇವು ಲಭ್ಯವಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ ಮಾತನಾಡಿ, ಇಲಾಖೆಯಿಂದ 47 ವಸತಿ ಶಾಲೆಗಳು ಸ್ವಂತ ಹಾಗೂ 09 ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಇನ್ನೂ ನಾಲ್ಕು ಕಟ್ಟಡಗಳು ನಿರ್ಮಾಣ ಹಂತದಲ್ಲಿವೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾತನಾಡಿ, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಮಾತೃಶ್ರೀ ಯೋಜನೆಯಡಿ ಅರ್ಜಿಗಳು ಬಂದಿದ್ದು, ಅವುಗಳಿಗೆ ಶೀಘ್ರ ಸೌಲಭ್ಯ ಒದಗಿಸಲಾಗುವುದು. 80 ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ನಿವೇಶನಗಳನ್ನು ಗುರುತಿಸಲಾಗಿದೆ. ಅನುದಾನ ಮಂಜೂರಾದ ಕೂಡಲೇ ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಸ್ಥಾಪಿಸಲಾಗುವುದು ಎಂದರು.

ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸುತ್ತಿರುವ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗೆ ತಲಪಬೇಕು. ಯೋಜನೆ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಅನುದಾನದ ಕೊರತೆ ಹಾಗೂ ಸಂಬಂಧಿಸಿದ ಇಲಾಖೆಯಿಂದ ಹಾಸ್ಟಲ್, ಶಾಲೆ, ಕಾಲೇಜು, ಅಂಗನವಾಡಿ ಸ್ಥಾಪಿಸಲು ಅವಶ್ಯವಿರುವ ಜಮೀನು ಮಂಜೂರು ಸಮಸ್ಯೆಗಳಿದ್ದಲ್ಲಿ ಕೂಡಲೇ ಮಾಹಿತಿ ನೀಡಬೇಕು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಡಿಸಿ ಪಿ. ಸುನೀಲ್ ಕುಮಾರ್‌, ಜಿಪಂ ಸಿಇಒ ಆರ್‌.ಎಸ್‌. ಪೆದ್ದಪ್ಪಯ್ಯ, ಎಡಿಸಿ ಬಾಲಚಂದ್ರ, ಎಸಿ ಸಿ.ಡಿ. ಗೀತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

ಕಾಟಾಚಾರಕ್ಕೆ ನಡೆಯಿತೇ ಕಾರ್ಯದರ್ಶಿ ಸಭೆ ?:

ಜಿಲ್ಲೆಯಲ್ಲಿ ಬರದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಳೆ ಆಗುತ್ತಿಲ್ಲ. ಜನ ಜಾನುವಾರು ಮೇವಿಗೆ ಪರದಾಡುವಂತ ಸ್ಥಿತಿಯಿದೆ. ಕುಡಿಯುವ ನೀರಿನ ಸಮಸ್ಯೆಯಂತೂ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಸಮಸ್ಯೆ ಆಲಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್‌ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ಆಗಮಿಸಿ, ನಂತರ ಕೊಪ್ಪಳಕ್ಕೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಕೇವಲ ಅರ್ಧ ಗಂಟೆಯಲ್ಲಿ ಸಭೆ ಮುಕ್ತಾಯ ಮಡಿ ಪುನಃ ಬೆಂಗಳೂರಿಗೆ ತೆರಳಿದ್ದಾರೆ. ಮಧ್ಯಾಹ್ನ 12.30ಕ್ಕೆ ಆರಂಭವಾದ ಪ್ರಗತಿ ಪರಿಶೀಲನಾ ಸಭೆಯು 1 ಗಂಟೆ ವೇಳೆಗೆ ಮುಕ್ತಾಯವಾಗಿದೆ. ಜಿಲ್ಲೆಯಲ್ಲಿ ನೀರಿನ ಸಮಸ್ಯೆ, ಮೇವು, ಜಾನುವಾರು, ಬರ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸುದೀರ್ಘ‌ ಚರ್ಚಿಸಿ ಇತ್ಯರ್ಥ ಮಾಡಲೇ ಇಲ್ಲ ಎಂಬ ಮಾತು ಸಭೆಯಲ್ಲಿ ಕೇಳಿ ಬಂದಿತು. ಪ್ರಗತಿ ಪರಿಶೀಲನೆಗೆ ಬೆಂಗಳೂರಿನಿಂದ ಬಂದಿದ್ದ ಅವರು ಸಭೆ ಮುಗಿಸಿ ಅರ್ಧ ಗಂಟೆಯಲ್ಲೇ ವಾಪಸ್‌ ಆಗಿದ್ದಾರೆ. ಇನ್ನೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆಗೆ ಗೈರಾಗಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.