ಬಿಜೆಪಿ ಅಭ್ಯರ್ಥಿ ಪರ ವಿಎಸ್ ಎಸ್ ಎನ್ ಕಾರ್ಯದರ್ಶಿಯ ಪ್ರಚಾರ: ಕಾಂಗ್ರೆಸ್ ನಿಂದ ಆಕ್ಷೇಪ
Team Udayavani, Dec 8, 2021, 2:30 PM IST
ಗಂಗಾವತಿ: ರಾಯಚೂರು- ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಚಿಕ್ಕಜಂತಕಲ್ ವಿಎಸ್ ಎಸ್ ಎನ್ ಸೊಸೈಟಿಯ ಸೆಕ್ರೆಟರಿ ಪ್ರಚಾರ ಮಾಡುತ್ತಿದ್ದು ಇದನ್ನು ಕೂಡಲೇ ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಶಿವರಾಜ್ ತಂಗಡಗಿ ಒತ್ತಾಯಿಸಿದ್ದಾರೆ.
ಶೀಘ್ರವೇ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ವಿಎಸ್ ಎಸ್ ಎನ್ ಸೆಕ್ರೆಟರಿಯ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಚಿಕ್ಕಜಂತಕಲ್ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾ.ಪಂ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡು ವಿವಿಧ ಮುಖಂಡರು ಮತ್ತು ಮತದಾರರ ಬಳಿಗೆ ಸೆಕ್ರೆಟರಿ ಸತ್ಯನಾರಾಯಣ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಜೊತೆಗೆ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಆದ್ದರಿಂದ ಕೂಡಲೇ ಇವರನ್ನು ಬೇರೆ ಕಡೆ ವರ್ಗ ಮಾಡಬೇಕು ಅಥವಾ ಅಮಾನತು ನೆಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಕೇಂದ್ರ ನಮ್ಮ ಎಲ್ಲಾ ಬೇಡಿಕೆ ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಕೆ: ರೈತ ಸಂಘಟನೆ
ಪರಿಷತ್ ಚುನಾವಣೆಯ ಬಿಜೆಪಿ ಪ್ರಚಾರದ ಸಭೆಗಳಲ್ಲಿ ತಮ್ಮ ಪತ್ನಿಯ ಜತೆ ಸತ್ಯನಾರಾಯಣ ಪಾಲ್ಗೊಂಡು ಬಿಜೆಪಿ ಮುಖಂಡರೊಂದಿಗೆ ಚುನಾವಣೆ ಬಗ್ಗೆ ಮಾತನಾಡುತ್ತಿರುವ ವಿಡಿಯೊ ಮತ್ತು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ವೈರಲ್ ಆಗಿದೆ.
ವಿಎಸ್ ಎಸ್ ಎನ್ ಕಾರ್ಯದರ್ಶಿ ಸರಕಾರಿ ನೌಕರರಾಗಿದ್ದು ಚುನಾವಣೆಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಫೇಸ್ ಬುಕ್ ವಾಟ್ಸಾಪ್ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ವ್ಯಾಪಕವಾಗಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ