ಕೋರ್ಟ್‌ ಆದೇಶದಿಂದ ಬಾಲಕಿಯರ ರಕ್ಷಣೆ


Team Udayavani, May 13, 2019, 4:21 PM IST

kopp-3

ಕೊಪ್ಪಳ: ಬಾಲ್ಯ ವಿವಾಹ ತಡೆಯುವಲ್ಲಿ ಹಲವು ಅಧಿಕಾರಿಗಳು-ಪಾಲಕರ ನಡುವೆ ಜಗಳ ಆಗುವುದನ್ನು ನೋಡಿದ್ದೀರಾ. ಆದರೆ ಇಲ್ಲೊಂದು ಗ್ರಾಮದಲ್ಲಿ ಮಕ್ಕಳಿಗೆ ಬಾಲ್ಯ ವಿವಾಹ ಮಾಡಬೇಡಿ ಎಂದು ಮನವಿ ಮಾಡಿದರೂ ನಿರ್ಲಕ್ಷ ್ಯ ವಹಿಸಿದ ಪಾಲಕರಿಗೆ ಬಿಸಿ ಮುಟ್ಟಿಸಲು ಕೋರ್ಟ್‌ನಿಂದ ಆದೇಶ ತರುವ ಮೂಲಕ ಅಧಿಕಾರಿಗಳು ಮೂವರು ಅಪ್ರಾಪ್ತೆಯರ ವಿವಾಹ ತಡೆದಿದ್ದಾರೆ.

ಹೌದು.. ತಾಲೂಕಿನ ಕುಣಕೇರಿ ತಾಂಡಾದಲ್ಲಿ ಐವರು ಅಪ್ರಾಪ್ತೆಯರಿಗೆ ಮದುವೆ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪಾಲಕರಿಗೆ ತಿಳಿವಳಿಕೆ ನೀಡಿ ಬಾಲಕಿಯರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸುವಂತೆ ಮನವಿ ಮಾಡಿ ನೋಟಿಸ್‌ ನೀಡಿದ್ದರೂ ಪಾಲಕರು ನಿರ್ಲಕ್ಷ್ಯ ವಹಿಸಿದ್ದರಿಂದ ಅಧಿಕಾರಿಗಳು ನ್ಯಾಯಾಲಯದ ಆದೇಶದೊಂದಿಗೆ ಮಕ್ಕಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಇಬ್ಬರು ಮಕ್ಕಳ ವಶಕ್ಕೆ ಪಡೆದಿದ್ದಕ್ಕೆ ಘೇರಾವ್‌: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಲೀಲಾ ವನ್ನೂರು, ಯಮನಮ್ಮ, ರವಿ ಬಡಿಗೇರ, ವಿಜಯ ಬಡೆಗೇರ, ಶಿಶು ಅಭಿವೃದ್ಧಿ ಯೋಜನೆ ಕಚೇರಿಯ ಜಯಶ್ರೀ, ಸುಮಂಗಲಾ, ಚೈಲ್ಡ್ಲೈನ್‌ನ ರಾಘವೇಂದ್ರ, ಸುನೀಲ್ ಮತ್ತು ಪಿಎಸ್‌ಐ ಗುರುರಾಜ ಕಟ್ಟಿಮನಿ ಸೇರಿ ಇತರೆ ಅಧಿಕಾರಿಗಳ ತಂಡ ಇಬ್ಬರು ಬಾಲಕಿಯರನ್ನು ವಶಕ್ಕೆ ಪಡೆದು ವಾಪಾಸ್ಸಾಗುವ ವೇಳೆ ಜನರು ಪೊಲೀಸರ ವಾಹನಕ್ಕೆ ಘೇರಾವ್‌ ಹಾಕಿದ್ದರು. ಅಧಿಕಾರಿಗಳ ಬಳಿ ಇದ್ದ ಇಬ್ಬರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿತ್ತು.

ಕೋರ್ಟ್‌ ಆದೇಶ: ಆದರೆ, ಇನ್ನೂ ಮೂವರು ಬಾಲಕಿಯರನ್ನು ಕುಟುಂಬಸ್ಥರು ಅನ್ಯ ಗ್ರಾಮಗಳಿಗೆ ಕಳುಹಿಸಿದ್ದರು. ಅಲ್ಲದೇ ಗ್ರಾಮದಲ್ಲಿನ ಜಾತ್ರೆಯಲ್ಲಿ ಮದುವೆ ಮಾಡುವುದಾಗಿ ಮತ್ತೆ ಜಿಲ್ಲಾಡಳಿತಕ್ಕೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ನ್ಯಾಯಾಧೀಶರಿಂದ ಮಕ್ಕಳ ರಕ್ಷಣೆಗೆ ಆದೇಶದೊಂದಿಗೆ ಗ್ರಾಮಕ್ಕೆ ತೆರಳಿ ಶನಿವಾರ ಮಧ್ಯ ರಾತ್ರಿಯೇ ಮೂವರು ಬಾಲಕಿಯರನ್ನು ವಶಕ್ಕೆ ಪಡೆದು ಬಾಲ್ಯ ವಿವಾಹದಿಂದ ಮಕ್ಕಳನ್ನು ಪಾರು ಮಾಡಿದ್ದಾರೆ.

ವಾಗ್ವಾದ: ಮೂವರು ಮಕ್ಕಳನ್ನು ವಶಕ್ಕೆ ಪಡೆಯುವಲ್ಲಿಯೂ ಪಾಲಕರು ವಿರೋಧ ವ್ಯಕ್ತಪಡಿಸಿ ಪೊಲೀಸರು ಹಾಗೂ ಅಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಆದರೆ ನ್ಯಾಯಾಧೀಶರು ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಗೆ ಲಿಖೀತ ಆದೇಶ ಮಾಡಿ ಬಾಲಕಿಯರ ರಕ್ಷಣೆ ಮಾಡುವ ಕುರಿತು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಹಲವು ಕಸರತ್ತು ನಡೆಸಿ ಅನ್ಯ ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದ ಮಕ್ಕಳನ್ನು ಶನಿವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಮಕ್ಕಳ ರಕ್ಷಣಾ ತಂಡದಲ್ಲಿ ಜಯಶ್ರೀ ಕೂಲಿ, ರವಿ ಬಡಿಗೇರ್‌, ಶರಣಪ್ಪ ಹಿರೇತೆಮ್ಮಿನಾಳ, ಶಾಂತಕುಮಾರ ಗೌರಿಪುರ ನಾನಾ ಕಸರತ್ತು ನಡೆಸಿ ಮಕ್ಕಳನ್ನು ಬಾಲ್ಯ ವಿವಾಹದಿಂದ ಪಾರು ಮಾಡಿದ್ದಾರೆ.

ಶನಿವಾರ ರಾತ್ರಿ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ. ಒಟ್ಟಿನಲ್ಲಿ ಕುಣಕೇರಿ ತಾಂಡಾದಲ್ಲಿ ಐವರು ಬಾಲಕಿಯರಿಗೆ ಮದುವೆ ಮಾಡಲು ಉದ್ದೇಶಿಸಿದ್ದ ಕುಟುಂಬಸ್ಥರಿಂದ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಪಾಲಕರ ಹೈಡ್ರಾಮಾದ ಮಧ್ಯೆಯೂ ಅಧಿಕಾರಿಗಳ ಕಾರ್ಯಕ್ಷಮತೆಗೆ ಪ್ರಶಂಸೆ ವ್ಯಕ್ತವಾಗಿದೆ.

Ad

ಟಾಪ್ ನ್ಯೂಸ್

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Kushtagi: ನಿರ್ಲಕ್ಷ್ಯಕ್ಕೆ ತುತ್ತಾದ ನಾಡಿನ ಶಾಸನ-ಕುರುಹು

17

Dotihal: ಪ್ರೌಢಶಿಕ್ಷಣ;ಬಾಲಕಿಯರಿಗೆ ಪ್ರಯಾಸದ ಪಯಣ

17

Kushtagi: ಕುಡಿವ ನೀರಿಗಾಗಿ ಕುಷ್ಟಗಿ ಜನರ ಪರದಾಟ

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

Koppala: Those who call themselves Hindutva should shut up..: Madhu Bangarappa

Koppala: ಹಿಂದುತ್ವ ಎನ್ನುವವರು ಮುಚ್ಕೊಂಡು ಇರಲಿ..: ಮಧು ಬಂಗಾರಪ್ಪ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

9-ckm

Mudigere: ಕಾಡು ಹಂದಿ ದಾಳಿಗೆ ರೈತನ ಕೈ ಬೆರಳು ತುಂಡು, ಅಧಿಕಾರಿಗಳ ನಿರ್ಲಕ್ಷ್ಯ

8-uv-fusion

Childhood: ಬೇಸಗೆಯ ಸುವರ್ಣ ಬಾಲ್ಯ; ಗೋಲಿ, ಮಂಡಕ್ಕಿ ಮತ್ತು ಅಪ್ಪನ ಏಟು!

23

Harapanahalli: ಅಡವಿ ಮಲ್ಲಾಪುರದಲ್ಲಿ ಸೌಲಭ್ಯಗಳ ಕೊರತೆ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.