ಗಂಗಾವತಿ: ಹೊಸಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಅಂಗಡಿ ಬಂದ್ ಗೆ ಆಗ್ರಹಿಸಿ ಪ್ರತಿಭಟನೆ


Team Udayavani, May 23, 2022, 5:39 PM IST

ಗಂಗಾವತಿ: ಹೊಸಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಅಂಗಡಿ ಬಂದ್ ಗೆ ಆಗ್ರಹಿಸಿ ಪ್ರತಿಭಟನೆ

ಗಂಗಾವತಿ: ನಗರದ ಸಮೀಪದಲ್ಲಿರುವ ಹೊಸಳ್ಳಿ ಗ್ರಾಮದಲ್ಲಿ 12 ಈ ಮದ್ಯ ಅಕ್ರಮ ಮಾರಾಟ ಮಾಡುವ ಅಂಗಡಿಗಳಿದ್ದು ಇವುಗಳಿಗೆ ಗಂಗಾವತಿಯಲೈಸನ್ಸ್ ಇರುವ ಮದ್ಯ ಮಾರಾಟಗಾರರು ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದು ಕೂಡಲೇ 12 ಮದ್ಯ ಮಾರಾಟ ಮಾಡುವ ಅಕ್ರಮ ಅಂಗಡಿಗಳನ್ನು ಬಂದ್ ಮಾಡಿಸಬೇಕು ಜೊತೆಗೆ ಗಂಗಾವತಿಯಲ್ಲಿ ಮದ್ಯವನ್ನು ಅಕ್ರಮವಾಗಿ ಸರಬರಾಜು ಮಾಡುವವರ ಅಬಕಾರಿ ಗುತ್ತಿಗೆದಾರರ ಲೈಸೆನ್ಸ್ ರದ್ದು ಮಾಡುವಂತೆ ಹೊಸಳ್ಳಿ ಗ್ರಾಮಸ್ಥರು ಸೋಮವಾರ ಅಬಕಾರಿ ಇಲಾಖೆ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ  ಹೊಸಳ್ಳಿ ಶಂಕರಗೌಡ ಮಾತನಾಡಿ ಗ್ರಾಮದಲ್ಲಿ ಅನಧಿಕೃತ ಮದ್ಯ ಮಾರಾಟ ದಿಂದಾಗಿ ದಿನದಿಂದ ದಿನಕ್ಕೆ ಶಾಂತಿ ನೆಮ್ಮದಿ ಹಾಳಾಗುತ್ತಿದೆ. ಈ ಕುರಿತು ಹಲವು ಬಾರಿ ಇಲಾಖೆಗೆ ಹಾಗೂ ಪೊಲೀಸ್ ಇಲಾಖೆ ಶಾಸಕರು ಸಂಸದರು ಜಿಲ್ಲಾಧಿಕಾರಿಗಳಿಗೂ ಪತ್ರ ಸಲ್ಲಿಸಿದರು ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದೆ  ನಿರ್ಲಕ್ಷ ಧೋರಣೆ ಅನುಸರಿಸುವುದು ಸೂಕ್ತವಲ್ಲ. ಇಲಾಖೆಯ ಮುಖ್ಯಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು .ಗಂಗಾವತಿಯಲ್ಲಿ ಪ್ರಮುಖ ಅಬಕಾರಿ ಗುತ್ತಿಗೆದಾರರ ಅಂಗಡಿಯಿಂದ ಹೊಸಳ್ಳಿಗೆ ಮದ್ಯ ಸರಬರಾಜು ಆಗುತ್ತಿದ್ದು ಕೂಡಲೇ ಅದನ್ನು ತಡೆದು ಮದ್ಯ ಸರಬರಾಜು ಮಾಡಿರುವ ಲೈಸೆನ್ಸ್ ರದ್ದು ಮಾಡಬೇಕು.

ಯಾವುದೇ ಕಾರಣಕ್ಕೂ ಅನಧಿಕೃತ ಮದ್ಯ ಮಾರಾಟ ವಾಗದಂತೆ ಎಚ್ಚರಿಕೆವಹಿಸಬೇಕು. ಮಾರಾಟಗಾರರನು ಪಂಚಾಯಿತಿಗೆ ಕರೆಸಿ ತಿಳಿಹೇಳಿದರೂ  ಅಕ್ರಮ ಮದ್ಯ ಮಾರಾಟವನ್ನು ಮುಂದುವರಿಸಿದ್ದಾರೆ. ಗಂಗಾವತಿಯಲ್ಲಿ ಲೈಸೆನ್ಸ್ ಇರುವ ಮದ್ಯದಂಗಡಿಯ ಮಾಲೀಕರು ಬಹಿರಂಗವಾಗಿ ಗ್ರಾಮಾಂತರ ಪ್ರದೇಶಗಳಿಗೆ ಮದ್ಯವನ್ನು ಅಕ್ರಮವಾಗಿ ಸರಬರಾಜು ಮಾಡಿ ಲಕ್ಷಾಂತರ ರೂ ಆದಾಯ ಗಳಿಸುತ್ತಿದ್ದಾರೆ. ಸಣ್ಣ ಸಣ್ಣ ಯುವಕರ ಆರೋಗ್ಯದ ಮೇಲೆ ಗ್ರಾಮೀಣ ಭಾಗದಲ್ಲಿ ಮದ್ಯ ಮಾರಾಟದಿಂದ ಪರಿಣಾಮವಾಗಿದ್ದು ಕೂಡಲೇ ಜಿಲ್ಲಾಡಳಿತ ಮದ್ಯದ ಅಕ್ರಮ ಮಾರಾಟ ನಿಲ್ಲಿಸಬೇಕು . ವಾರದೊಳಗೆ ಕಠಿಣಕ್ರಮ ಜರುಗಿಸದೇ ಇದ್ದಲ್ಲಿ ಅಬಕಾರಿ ಹಾಗೂ ಪೊಲೀಸ್ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಹೊಸಳ್ಳಿ ಗ್ರಾಮದ  ಮುಖಂಡರಾದ ಕಲ್ಗುಡಿ ಮರಿಯಪ್ಪ ಹೊಸಳ್ಳಿ, ದುರ್ಗಪ್ಪ ಮೋರಿ, ಗಾಳಿ ಮಾರಪ್ಪ ,ಮರಿಯಪ್ಪ ಜಿ ಆರ್, ಶಿವಪ್ಪ ಬಲಕುಂದಿ, ನಾಗಪ್ಪ ಗ್ರಾ. ಪಂ. ಸದಸ್ಯ ಗ್ರಾಪಂ ಉಪಾಧ್ಯಕ್ಷ  ಹನುಮಂತಪ್ಪ ನಾಯಕ್ , ಗುರುಪಾದಯ್ಯ ಸ್ವಾಮಿ ದಳಪತಿ, ದಾದಾ ಸಾಂಗ್ ಶಿವಪ್ಪ ,ಚಂದ್ರಪ್ಪ ಚಲವಾದಿ ಗ್ರಾಮದ ಮುಖಂಡರಿದ್ದರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.