ಮಂಡಲಗೇರಿ ಶಾಲೆ ಶಿಕ್ಷಕ ವರ್ಗಾವಣೆ ವಿರೋಧಿಸಿ ಧರಣಿ
Team Udayavani, Jul 7, 2019, 10:48 AM IST
ಕುಕನೂರು: ಮಂಡಲಗೇರಿ ಶಿಕ್ಷಕ ನಾಗರಾಜ ಜಗತಾಪ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ವಾಹನ ಸಂಚಾರ ತಡೆದು ಪ್ರತಿಭಟಿಸಿದರು.
ಕುಕನೂರು: ತಾಲೂಕಿನ ಮಂಡಲಗೇರಿಯ ಸರ್ಕಾರಿ ಪ್ರೌಢಶಾಲೆ ಆಂಗ್ಲ ಭಾಷೆ ಶಿಕ್ಷಕ ನಾಗರಾಜ ಜಗತಾಪ ಅವರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ವಾಹನ ಅಡ್ಡಗಟ್ಟಿ ಪ್ರತಿಭಟಿಸಿದರು.
ಶಿಕ್ಷಕ ನಾಗರಾಜ ಜಗತಾಪ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ಜು.1ರಿಂದ ತರಗತಿ ಬಹಿಷ್ಕರಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಕ್ಷಕನ ವರ್ಗಾವಣೆ ರದ್ದತಿಗೆ ಕೈ ಜೋಡಿಸಬೇಕೆಂದು ಗ್ರಾಪಂಗೆ ಮನವಿ ಮಾಡಿದ್ದಾರೆ. ಮಕ್ಕಳ ಪ್ರತಿಭಟನೆಯಿಂದ ಮಂಡಲಗೇರಿ ಗ್ರಾಮದಲ್ಲಿ ವಾಹನ, ಬಸ್ಗಳ ಸಂಚಾರಕ್ಕೆ ಕೆಲ ಹೊತ್ತು ತೊಂದರೆ ಆಗಿತ್ತು. ನಂತರ ಪೊಲೀಸರ ನೇತೃತ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಲಾಯಿತು.
ಸ್ಥಳಕ್ಕಾಗಮಿಸಿದ ಬಿಇಒ ಶರಣಪ್ಪ ವಟಗಲ್ಲ, ಬಿಆರ್ಸಿ ಮಲ್ಲಿಕಾರ್ಜುನ ಬೇಲೇರಿ, ಎಸ್ಡಿಎಂಸಿ ಅಧ್ಯಕ್ಷ ವೀರಣ್ಣ ಮೇಟಿ ಮಕ್ಕಳ ಪ್ರತಿಭಟನೆ ತಿಳಿಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್