ಕಾಲುವೆಗೆ ನೀರು ಹರಿಸುವ ಸಂದರ್ಭದಲ್ಲಿ ಎಡದಂಡೆ ಕಾಲುವೆ ದುರಸ್ತಿಗೆ ಭೂಮಿಪೂಜೆ ರೈತರ ಆಕ್ರೋಶ
Team Udayavani, Jun 26, 2020, 12:36 PM IST
ಗಂಗಾವತಿ: ಮುಂಗಾರು ಭತ್ತದ ಬೆಳೆ ಸಲುವಾಗಿ ಕಾಲುವೆಗೆ ನೀರು ಹರಿಸುವ ಸಂದರ್ಭದಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ಒಳಮೈ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ಮಾಡುತ್ತಿರುವುದಕ್ಕೆ ಅಚ್ಚುಕಟ್ಟು ಪ್ರದೇಶದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕೈದು ವರ್ಷಗಳಿಂದ ಅಚ್ಚುಕಟ್ಟು ರೈತರು ಸರಿಯಾದ ಬೆಳೆ ಬೆಳೆದಿಲ್ಲ. ಈ ಭಾರಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಡ್ಯಾಂ ಒಳಹರಿವು ನಿತ್ಯ ಹೆಚ್ಚಾಗುತ್ತಿದೆ. ಜುಲೈ ಮೊದಲ ವಾರ ಕಾಲುವೆಗಳಿಗೆ ನೀರು ಹರಿಸುವ ಸಂದರ್ಭದಲ್ಲಿ ಡ್ಯಾಂ ನಿಂದ 47 ಮೈಲ್ ವರೆಗೆ ಎಡದಂಡೆ ಕಾಲುವೆ ಒಳಮೈ ಭದ್ರಪಡಿಸುವ ಕಾಮಗಾರಿಗೆ 63.19. ಕೋಟಿ ರೂಪಾಯಿ ಮಂಜೂರು ಮಾಡಿ ಈಗ ಕಾಮಗಾರಿ ಆರಂಭಕ್ಕೆ ಭೂಮಿಪೂಜೆ ಅವೈಜ್ಞಾನಿಕವಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.
ಕಾಮಗಾರಿ ಬೇಡ: ಕಳೆದ ಎರಡು ವರ್ಷಗಳ ಹಿಂದೆ ತುಂಗಭದ್ರಾ ಎಡದಂಡೆ ಕಾಲುವೆಯ ಒಳಮೈ ಭದ್ರಪಡಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಪುನಃ ಈಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕಾಲುವೆ ದುರಸ್ತಿ ಮಾಡುವ ಅಗತ್ಯವಿಲ್ಲ. ಗುತ್ತಿಗೆದಾರರ ಜೇಬು ತುಂಬಿಸಲು ಕಾಮಗಾರಿ ನಾಮಕಾವಸ್ತೆಗಾಗಿ ಭೂಮಿ ಪೂಜೆ ಮಾಡಲಾಗಿದೆ. ಕೋಟ್ಯಾಂತರ ರೂಪಾಯಿ ನೀರುಪಾಲು ಮಾಡುವ ಸರಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ. ಸದ್ಯ ಕಾಮಗಾರಿ ಮಾಡದೇ ಕ್ಲೋಸರ್ ಸಂದರ್ಭದಲ್ಲಿ ಕಾಮಗಾರಿ ಮಾಡಬೇಕು. ಜುಲೈನಲ್ಲಿ ಕಾಲುವೆಗೆ ನೀರು ಹರಿಸದಿದ್ದರೆ ರೈತರು ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಮುಖಂಡರಾದ ಚಾಮರಸಪಾಟೀಲ್ ಬೆಟ್ಟದೂರು ಉದಯವಾಣಿ ಗೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ