ಶಿಕ್ಷಕ ವರ್ಗಾವಣೆ ವಿರೋಧಿಸಿ ಪ್ರತಿಭಟನೆ
•ಹಿರೇಸಿಂದೋಗಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದಲೇ ಧರಣಿ•ತರಗತಿಗೆ ಗೈರು ಹಾಜರಾಗಿ ಪ್ರತಿಭಟನೆ
Team Udayavani, Jul 3, 2019, 10:26 AM IST
ಕೊಪ್ಪಳ: ಹಿರೇ ಸಿಂದೋಗಿಯ ಪ್ರೌಢಶಾಲೆ ವಿದ್ಯಾರ್ಥಿಗಳು ಶಿಕ್ಷಕರ ವರ್ಗಾವಣೆ ವಿರೋಧಿಸಿ ಧರಣಿ ನಡೆಸಿದರು.
ಕೊಪ್ಪಳ: ತಾಲೂಕಿನ ಹಿರೇಸಿಂದೋಗಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸೋಮರಡ್ಡಿ ಡಂಬ್ರಳ್ಳಿ ಅವರನ್ನು ವರ್ಗಾವಣೆ ಮಾಡಿದ್ದನ್ನುವಿರೋಧಿಸಿ ವಿದ್ಯಾರ್ಥಿಗಳು ಮಂಗಳವಾರ ಶಾಲಾ ಮೈದಾನದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ಶಿಕ್ಷಕ ಸೋಮರಡ್ಡಿ ಅವರು ನಮಗೆ ಉತ್ತಮ ಪಾಠ ಮಾಡುತ್ತಾರೆ. ಕಳೆದ 16 ವರ್ಷಗಳಿಂದ ಅವರು ಇಲ್ಲಿನ ವಿದ್ಯಾರ್ಥಿಗಳಿಗೆ ತಿದ್ದಿ ಬುದ್ದಿ ಹೇಳಿ ಭವಿಷ್ಯ ರೂಪಿಸುತ್ತಿದ್ದಾರೆ. ಅವರನ್ನು ಹೆಚ್ಚುವರಿ ಪಟ್ಟಿಯಲ್ಲಿ ತೋರಿಸಿ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆದಿದೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ತುಂಬ ತೊಂದರೆಯಾಗಲಿದೆ. ಕೂಡಲೇ ಅವರನ್ನು ಇದೇ ಶಾಲೆಯಲ್ಲಿ ಮುಂದುವರಿಸಬೇಕು ಎಂದು ವಿದ್ಯಾರ್ಥಿಗಳೇ ಶಾಲಾ ಆವರಣದಲ್ಲಿ ಧರಣಿ ಕುಳಿತು ತಮ್ಮ ಅಸಮಾಧಾನ ಹೊರ ಹಾಕಿದರು.
ಶಿಕ್ಷಕ ಸೋಮರಡ್ಡಿ ಕನ್ನಡ ಬೋಧನೆ ಮಾಡುತ್ತಿದ್ದಾರೆ. ಅವರ ಬೋಧನೆಯಿಂದ ಇಲ್ಲಿ ನೂರಾರು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಂಡಿದ್ದಾರೆ. ಕನ್ನಡದಲ್ಲಿ 10ನೇ ತರಗತಿಯಲ್ಲಿ 125ಕ್ಕೆ 125 ಅಂಕ ಪಡೆದಿದ್ದಾರೆ. ಹಲವು ವಿದ್ಯಾರ್ಥಿಗಳು ಇಂದಿಗೂ ನೆನೆಯುತ್ತಾರೆ. ಅಂತಹ ಶಿಕ್ಷಕರನ್ನು ಏಕಾಏಕಿ ಹೆಚ್ಚುವರಿ ಪಟ್ಟಿಯಲ್ಲಿ ತೋರಿಸಿ ವರ್ಗಾವಣೆ ಮಾಡುವುದು ಸರಿಯಲ್ಲ ಎಂದು ಕೊಠಡಿಯೊಳಗೆ ಪ್ರವೇಶ ಮಾಡದೇ ಬಾಗಿಲಲ್ಲೇ ತಮ್ಮ ಬ್ಯಾಗ್ ಇಟ್ಟು ಪ್ರತಿಭಟನಾ ಧರಣಿ ನಡೆಸಿದರು. ವಿದ್ಯಾರ್ಥಿಗಳು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ವಿಷಯ ಸಂಪನ್ಮೂಲ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಮನವಿ ಆಲಿಸಿದರು. ಅಲ್ಲದೇ,
ಗ್ರಾಮಸ್ಥರೂ ಶಿಕ್ಷಕನ್ನು ವರ್ಗಾವಣೆ ಮಾಡುವುದು ತರವಲ್ಲ. ಅವರನ್ನೇ ಶಾಲೆಯಲ್ಲಿ ಮುಂದುವರಿಸಬೇಕು. ಅಲ್ಲದೇ, ಈ ಕಾರಣದಿಂದ ಶಾಲಾ ಮುಖ್ಯೋಪಾಧ್ಯಾಯರಿಗೆ ಒತ್ತಡ ತರಬಾರದು. ಒಂದು ವೇಳೆ ವರ್ಗಾವಣೆ ಮಾಡಲೇಬೇಕು ಎಂದಿದ್ದರೆ ಅವರ ಸ್ಥಾನಕ್ಕೆ ಮತ್ತೋರ್ವ ಶಿಕ್ಷಕನ್ನು ನೇಮಕ ಮಾಡಿದ ಬಳಿಕವಷ್ಟೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಅಧಿಕಾರಿ ತಂಡಕ್ಕೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಧರಣಿ ಅಲ್ಲಿಗೆ ಶಾಂತವಾಯಿತು. ಅಧಿಕಾರಿಗಳು ಡಿಡಿಪಿಐ ಅವರ ಮುಂದೆ ಈ ವಿಷಯ ಪ್ರಸ್ತಾಪಿಸಿ ಮುಂದಿನ ಕ್ರಮ ವಹಿಸುವ ಕುರಿತು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’