ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

•ನಿಧಿ ಆಸೆಯಿಂದ ವೃಂದಾವನ ಹಾನಿಗೊಳಿಸಿದ ಕಿಡಿಗೇಡಿಗಳು •ಸ್ಮಾರಕ ಸಂರಕ್ಷಣೆ ಎಲ್ಲರ ಹೊಣೆ

Team Udayavani, Jul 21, 2019, 12:41 PM IST

kopala-tdy-1

ಗಂಗಾವತಿ: ವೃಂದಾವನ ಧ್ವಂಸಗೊಳಿಸಿದ್ದನ್ನು ಖಂಡಿಸಿ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿದರು.

ಗಂಗಾವತಿ: ತಾಲೂಕಿನ ನವವೃಂದಾವನ ಗಡ್ಡಿಯಲ್ಲಿರುವ ವ್ಯಾಸರಾಜರ ವೃಂದಾವನವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳ ಕ್ರಮ ಖಂಡಿಸಿ ಬ್ರಾಹ್ಮಣ ಸಮಾಜದವರು ಹಾಗೂ ಇತರ ಸಮಾಜದವರು ಪ್ರತಿಭಟನಾ ಮೆರವಣಿಗೆ ನಡೆಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡ ಶ್ರೀರಾಮನಗರದ ಸತ್ಯನಾರಾಯಣರಾವ್‌ ದೇಶಪಾಂಡೆ ಮಾತನಾಡಿ, ವಿಜಯನಗರದ ಅರಸರ ಗುರುಗಳಾಗಿದ್ದ ವ್ಯಾಸರಾಜ ಗುರುಗಳು ಸರ್ವ ಸಮಾಜಕ್ಕೂ ಬೇಕಾದ ಯತಿಗಳಾಗಿದ್ದರು. ಆದ್ದರಿಂದಲೇ ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣದೇವರಾಯ ಅವರ ಕುಹಾ ದೋಷ ನಿವಾರಿಸಿದವರು. ಇಂತಹ ಯತಿಗಳ ವೃಂದಾವನ ಸ್ಮಾರಕವಾಗಿದ್ದು, ಇದರ ರಕ್ಷಣೆ ಎಲ್ಲರ ಹೊಣೆಯಾಗಿದೆ. ಬ್ರಾಹ್ಮಣ ಸಮಾಜ ಇಂತಹ ಕತ್ಯಗಳ ಬಗ್ಗೆ ವ್ಯಾಪಕ ಪ್ರತಿಭಟನೆ ಮಾಡಬೇಕು. ಹಿರಿಯರು ಯುವಕರಿಗೆ ಮಾರ್ಗದರ್ಶನ ಮಾಡುತ್ತಿಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ಶೇ. 80ರಷ್ಟಿದ್ದರೂ ಬ್ರಾಹ್ಮಣ ಸಮಾಜ ಸಂಘಟಿತವಾಗುತ್ತಿಲ್ಲ. ದುಷ್ಕರ್ಮಿಗಳು ಇದನ್ನೇ ವೈಫಲ್ಯ ಎಂದು ಕೊಂಡು ಮೇಲಿಂದ ಮೇಲೆ ದಾಳಿ ಮಾಡುತ್ತಿದ್ದು ಈಗಲೇ ಜಾಗೃತಿಯಾಗಬೇಕಿದೆ. ಸರಕಾರ ತನಿಖೆ ನಡೆಸಿ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಮಾತನಾಡಿ, ಹಿಂದೂ ಧರ್ಮ ಸಂರಕ್ಷಣೆ ಮಾಡಿದವರಲ್ಲಿ ಪೂಜ್ಯ ವ್ಯಾಸರಾಜರು ಒಬ್ಬರಾಗಿದ್ದು ಇಂತಹ ಪುಣ್ಯಪುರುಷರ ವೃಂದಾವನ ನಾಶ ಮಾಡುವ ಮೂಲಕ ದುಷ್ಕರ್ಮಿಗಳು ಮಹಾ ಪಾಪ ಮಾಡಿದ್ದಾರೆ. ಇವರನ್ನು ಪೊಲೀಸ್‌ ಇಲಾಖೆ ಪತ್ತೆ ಮಾಡಿ ಬಂಧಿಸಬೇಕು ಎಂದರು.

ಪ್ರತಿಭಟನೆ ಮೆರವಣಿಗೆ ವೆಂಕಟೇಶ್ವರ ಗುಡಿಯಿಂದ ಶ್ರೀಕಷ್ಣದೇವರಾಯ ವತ್ತದವರೆಗೆ ಜರುಗಿತು. ಪ್ರತಿಭಟನೆಯಲ್ಲಿ ರೈತ ಹೋರಾಟಗಾರ ತಿಪ್ಪೇರುದ್ರಸ್ವಾಮಿ, ಜೋಗದ ಹನುಮಂತಪ್ಪ ನಾಯಕ, ಸಂಘ ಪರಿವಾರದ ನೀಲಕಂಠ ನಾಗಶೆಟ್ಟಿ, ನಗರಸಭೆ ಸದಸ್ಯ ವಾಸುದೇವ ನವಲಿ, ಎಸ್‌.ಬಿ.ಎಚ್. ನಾರಾಯಣರಾವ್‌, ವಿಜಯ ಹೇರೂರು, ರಾಘವೇಂದ್ರಶೆಟ್ಟಿ, ಮಂಜುನಾಥ ಪತ್ತಾರ, ನ್ಯಾಯವಾದಿ ಪ್ರಹ್ಲಾದರಾವ್‌ ನವಲಿ, ಶರದ್‌ ದಂಡಿನ್‌, ಯಲಬುರ್ಗಾ ರಾಮರಾಮರಾವ್‌, ಪತ್ರಕರ್ತರಾದ ನವಲಿ ರಾಮಮೂರ್ತಿ, ಪ್ರಸನ್ನ ದೇಸಾಯಿ, ಹರೀಶ ಕುಲಕರ್ಣಿ, ವೆಂಕಟೇಶ ಜಂತಗಲ್, ವೀರಾಪೂರ ಕೃಷ್ಣ, ಪ್ರತೀಮಾ ನವಲಿ, ಸತೀಶ ದಂಡೀನ್‌ ಸೇರಿ ಕನಕಗಿರಿ, ಕಾರಟಗಿ, ಶ್ರೀ ರಾಮನಗರದ ಬ್ರಾಹ್ಮಣ ಸಮಾಜದ ನೂರಾರು ಜನರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.