ಕೂಲಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 29, 2019, 2:04 PM IST
ದೋಟಿಹಾಳ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಆಗ್ರಹಿಸಿ ಕೂಲಿ ಕಾರ್ಮಿಕರು ಬಿಜಕಲ್ ಗ್ರಾಪಂ ಮುಂದೆ ಪ್ರತಿಭಟನೆ ನಡೆಸಿದರು.
ದೋಟಿಹಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗ್ರಹಿಸಿ ಕೂಲಿಕಾರರು ಬಿಜಕಲ್ ಗ್ರಾಪಂಗೆ ಮುತ್ತಿಗೆ ಪ್ರತಿಭಟನೆ ನಡೆಸಿದರು.
ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡನಗೌಡ ಪಾಟೀಲ ಬಿಜಕಲ್ ಮಾತನಾಡಿ, ಬಿಜಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿಕಾರರು ಫಾರಂ ನಂ.6 ಸಲ್ಲಿಸಿ 25 ದಿನಗಳಾದರು ಕೆಲಸ ನೀಡುತ್ತಿಲ್ಲ. ಸ್ಥಳೀಯವಾಗಿ ಕೆಲಸ ನೀಡದ ಹಿನ್ನೆಲೆಯಲ್ಲಿ ಬೆಂಗಳೂರು, ಗೋವಾ, ಮಂಗಳೂರಿಗೆ ಹೋಗುವುದು ಅನಿವಾರ್ಯವಾಗಿದೆ. ಇಲ್ಲಿ ಮಾಡಲು ಕೆಲಸ ಬೇಕಾದಷ್ಟಿದ್ದರೂ, ಕೆಲಸ ನೀಡುತ್ತಿಲ್ಲ. ಯಾವುದೇ ಕಾರಣಕ್ಕೂ ಈ ಯೋಜನೆಯಲ್ಲಿ ಯಂತ್ರಗಳಿಂದ ಕೆಲಸ ನಿರ್ವಹಿಸದೇ ಕೂಲಿಕಾರರಿಂದ ಕೆಲಸ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಗವಿಸಿದ್ದಪ್ಪ ಗಡಾದ್ ಮಾತನಾಡಿ, ಕೂಲಿಕಾರರರು ಬಾಕಿ ವೇತನ ಪಾವತಿಸಬೇಕು. 14ನೇ ಹಣಕಾಸು ಯೋಜನೆ ಖರ್ಚು ವೆಚ್ಚದ ಮಾಹಿತಿ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯ ಕ್ರಿಯಾ ಯೋಜನೆ ಮಾಹಿತಿ, ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ಮಾಹಿತಿ, 2014-15ರಿಂದ 2018-2019ನೇ ಸಾಲಿನ ಜಮಾ ಬಂದಿ, ಅಂಗವಿಕಲರ ಅನುದಾನ, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ನೀಡಿದ ಅನುದಾನದ ಸಂಪೂರ್ಣ ಮಾಹಿತಿಗೆ ಆಗ್ರಹಿಸಿದರು. ಇದೇ ವೇಳೆ ಬಸವರಾಜ್ ಬೆಳಗಲ್ಲ, ವಿರೂಪನಗೌಡ ಪಾಟೀಲ, ಭದ್ರಮ್ಮ ಗುಜಮಾಗಡಿ, ಹನಮವ್ವ ವಡ್ಡರ್, ಮಹಾಂತೇಶ ವಂಕಲಕುಂಟ, ಸಂಗಮೇಶ ಕೊಪ್ಪಳ, ಶಾವಂತ್ರೆವ್ವ ತಳವಾರ, ಮಾನಮ್ಮ ಬಡಿಗೇರ, ಪಾರ್ವತಿ ಹೂಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ