ಕೆಲಸ ನೀಡಲು ಆಗ್ರಹಿಸಿ ಪ್ರತಿಭಟನೆ
•ಜೀವನ ನಿರ್ವಹಣೆಗೆ ಕನಿಷ್ಟ ಆದಾಯವೂ ಇಲ್ಲ•ಬರದಿಂದ ದುಡಿಯುವ ಕೈಗೆ ಕೆಲಸವಿಲ್ಲ
Team Udayavani, Jun 16, 2019, 12:05 PM IST
ದೋಟಿಹಾಳ: ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಲು ಆಗ್ರಹಿಸಿ ಗ್ರಾಮಸ್ಥರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೋಟಿಹಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ದಿನಗಳ ಆಧಾರದ ಮೇಲೆ ಕೂಲಿ ಕೆಲಸ ನೀಡದಿರುವುದನ್ನು ಖಂಡಿಸಿ ಗ್ರಾಮದ ಕೂಲಿ ಕಾರ್ಮಿಕರು ಗ್ರಾಪಂ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಗ್ರಾಮದ ಕೇಶಪ್ಪ ನೀಲಿ, ಒಂದು ತಿಂಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡುವಂತೆ ಪಿಡಿಒಗೆ ಒತ್ತಾಯಿಸಿದರೂ ಇದುವರೆಗೂ ಸರಿಯಾದ ರೀತಿಯಲ್ಲಿ ಕೆಲಸ ನೀಡಿಲ್ಲ. ಕೆಲಸ ಕೇಳಿದರೆ ಪಿಡಿಒ ಅವರು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು. ಎರಡ್ಮೂರು ದಿನಗಳಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡದ್ದಿದರೆ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಭೀಕರ ಬರದಿಂದ ಕೃಷಿ ಕಾರ್ಮಿಕರಿಗೆ ಉದ್ಯೋಗ ಇಲ್ಲದ್ದಂತಾಗಿದೆ. ಮಳೆಯಾಗದ ಕಾರಣ ಬಿತ್ತಿದ ಬೀಜ ಹಾಗೂ ಗೊಬ್ಬರಕ್ಕೆ ಹಾಕಿದ ಹಣ ನಷ್ಟವಾಗುವ ಲಕ್ಷಣಗಳಿವೆ. ಸದ್ಯ ಜೀವನ ನಿರ್ವಹಣೆಗೆ ಕನಿಷ್ಟ ಆದಾಯ ಇಲ್ಲವಾಗಿದೆ. ಹೀಗಾಗಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಬೇಕು ಎಂದು ಕಾರ್ಮಿಕ ಮಹಿಳೆ ಗಂಗಮ್ಮ ಜುಮಲಾಪೂರ ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಅಧ್ಯಕ್ಷ ಗೌಸುಸಾಬ್ ಕೊಣ್ಣೂರು, 2-3 ತಿಂಗಳಿನಿಂದ ಗ್ರಾಪಂ ಸಾಮಾನ್ಯ ಸಭೆ ನಡೆದಿಲ್ಲ. ಕಳೆದ ವಾರ ಸಾಮಾನ್ಯ ಸಭೆ ಕರೆದು ಸದಸ್ಯರು ಬಾರದೇ ಇರುವುದರಿಂದ ಸಭೆ ಮುಂದೂಡಲಾಗಿದೆ. ಹೊಸ ಕ್ರೀಯ ಯೋಜನೆ ಮಾಡಬೇಕಾದರೆ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಿ ಅನೂಮೋದನೆ ಪಡೆಯಬೇಕಾಗಿದೆ. 2-3 ದಿನಗಳಲ್ಲಿ ಸಭೆ ನಡೆಸಿ ಸದಸ್ಯರು ಜೊತೆ ಚರ್ಚೆ ಮಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್