ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಪಂಗೆ ಮುತ್ತಿಗೆ
ಯಾರು ಹೇಳಿದರೂ ಪ್ರತಿಭಟನಾ ಸ್ಥಳದಿಂದ ಕದಲದ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ
Team Udayavani, Jun 7, 2019, 9:39 AM IST
ಕುಕನೂರು: ಸಮರ್ಪಕ ನೀರು ಪೂರೈಸುವಂತೆ ಆಗ್ರಹಿಸಿ ರಾಜೂರು ಗ್ರಾಮದ ಆಶ್ರಯ ಕಾಲೋನಿ ನಿವಾಸಿಗಳು ಗ್ರಾಪಂಗೆ ಮುತ್ತಿಗೆ ಹಾಕಿ ಖಾಲಿ ಕೊಡ ಹಿಡಿದು ಪ್ರತಿಭಟಿಸಿದರು.
ಕುಕನೂರು: ಸಮರ್ಪಕವಾಗಿ ನೀರು ಪೂರೈಸದ ಹಿನ್ನೆಲೆಯಲ್ಲಿ ತಾಲೂಕಿನ ರಾಜೂರು ಗ್ರಾಮದ ಆಶ್ರಯ ಕಾಲೋನಿಯ ಗ್ರಾಮ ಪಂಚಾಯತ್ಗೆ ಮುತ್ತಿಗೆ ಹಾಕಿದ ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.
ನಿತ್ಯ ಮಹಿಳೆಯರು, ಮಕ್ಕಳು ಸೇರಿದಂತೆ ಗ್ರಾಮಸ್ಥರು ಕೊಡ ಹಿಡಿದು ಗ್ರಾಮದ ಹೊರವಲಯದಲ್ಲಿರುವ ತೋಟದ ಪಂಪ್ಸೆಟ್ಗಳಿಗೆ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ನಿತ್ಯ ಶಾಲೆಗೆ ಹೋಗುವ ಮಕ್ಕಳನ್ನು ನೀರಿಗಾಗಿ ಕಳಿಸಲಾಗುತ್ತಿದೆ. ಈಗಾಗಲೇ ಹಲವು ಭಾರೀ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯತ್ನ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ಅಳಲು ತೋಡಿಕೊಂಡಿದ್ದೇವೆ. ಆದರೂ ಸಹ ನೀರಿನ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಗ್ರಾಪಂ ವಿಫಲವಾಗುತ್ತಿದೆ ಎಂದು ದೂರಿದರು.
ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿ ವರ್ಗದವರು ಗಮನ ಹರಿಸುತ್ತಿಲ್ಲ. ಕಾಲೋನಿಗೆ ಸಮೀಪ ಇರುವ ನೀರಿನ ಟ್ಯಾಂಕರ್ಗೆ ನೀರು ಪೂರೈಸಿ ನೀರು ಸರಬರಾಜು ಮಾಡಿದರೆ ಆಶ್ರಯ ಕಾಲೋನಿಯ ನೀರಿನ ಸಮಸ್ಯೆಗೆ ಸ್ಪಂದನೆ ಸಿಕ್ಕಂತ್ತಾಗುತ್ತದೆ. ಟ್ಯಾಂಕರ್ ಮೂಲಕ ಪೂರೈಸಿದ ನೀರು ಸಾಕಾಗುವುದಿಲ್ಲ. ಸಮಸ್ಯೆ ಇಮ್ಮಡಿ ಆಗುವ ಮೊದಲು ಸಂಬಂಧಪಟ್ಟವರು ಕೂಡಲೇ ನೀರಿನ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಿಡಿಒ ಮಲ್ಲಪ್ಪ ಜತ್ತಿ, ಕಾಲೋನಿಯ ನೀರಿನ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿದ್ದೇವೆ. ನೀರಿನ ಸಮಸ್ಯೆ ದ್ವಿಗುಣ ಆಗದಂತೆ ಕಂದಾಯ ಇಲಾಖೆ ಸಹ ನಿತ್ಯ ನಾಲ್ಕೈದು ಟ್ಯಾಂಕರ್ ನೀರಿನ ಪೂರೈಕೆಗೆ ಮುಂದಾಗಿದೆ. ಶಾಶ್ವತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಆಶ್ರಯ ಕಾಲನಿ ನಿವಾಸಿಗಳಾದ ಸಂಗಮ್ಮ ಚಿಲ್ಕಮುಖೀ, ದೇವಮ್ಮ ಉಪ್ಪಾರ, ಸುಮಂಗಲಾ ಕವಲೂರು, ಅಕ್ಕಮ್ಮ ಅಂಗಡಿ, ಸುಮಾ ಬಡ್ಡಿ, ಪಾರ್ವತಮ್ಮ ಭಜಂತ್ರಿ, ಸುಭದ್ರವ್ವ ಹರಿವಗೇರಿ, ಮಲ್ಲಮ್ಮ ಮಂಡ್ಲಿಗೇರಿ, ಗಿರಿಜಮ್ಮ ಹೂಗಾರ, ಲಲಿತಮ್ಮ ಅರಿಕೇರಿ, ಹನುಮಂತ ಉಪ್ಪಾರ, ಮಲ್ಲಪ್ಪ ಚಿಲ್ಕಮುಖೀ, ಚನ್ನಬಸಪ್ಪ ಮುಂಡರಗಿ, ಫಕೀರಸಾಬ್ ನದಾಫ್, ಶ್ರೀಶೈಲ್ ಅಂಗಡಿ, ಸಂಗಯ್ಯ ಹಿರೇಮಠ, ಕೊಟೇಶ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು