10ರಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟ ಹೋರಾಟ
Team Udayavani, Jul 9, 2020, 4:10 PM IST
ಕೊಪ್ಪಳ: ಸುದ್ದಿಗೋಷ್ಠಿಯಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಕೌಶಲ್ಯಾ ಮಾತನಾಡಿದರು.
ಕೊಪ್ಪಳ: ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ. ಗೌರವಧನ ಖಾತ್ರಿ ಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜು. 10ರಿಂದ ರಾಜ್ಯಾದ್ಯಂತ ತಮ್ಮ ಕಾರ್ಯ ಸ್ಥಗಿತಗೊಳಿಸಿ ಮನೆಯಲ್ಲಿಯೇ ಅನಿರ್ದಿಷ್ಟ ಹೋರಾಟ ನಡೆಸಲಿದ್ದೇವೆ ಎಂದು ಜಿಲ್ಲಾ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಕೌಶಲ್ಯ ಗೌಡರ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12,000 ರೂ. ಸೇರಿದಂತೆ ಹಲವು ಬೇಡಿಕೆ ಕುರಿತು ಜನವರಿಯಲ್ಲೇ ಬೆಂಗಳೂರಿನಲ್ಲಿ ಹೋರಾಟ ಮಾಡಲಾಗಿತ್ತು. ಆಗ ಸರ್ಕಾರ ಹಾಗೂ ಸಚಿವರು ಬೇಡಿಕೆ ಈಡೇರಿಕೆ ಭರವಸೆ ನೀಡಿದ್ದರು. ಆದರೆ ಕೋವಿಡ್-19
ಹರಡಿದ ಸಂಬಂಧ ನಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಮಗೆ ಎಲ್ಲೆಡೆ ಹೂವಿನ ಸುರಿಮಳೆ, ಚಪ್ಪಾಳೆ ತಟ್ಟಿ ಸನ್ಮಾನ ಮಾಡುತ್ತಿದ್ದಾರೆ. ಆದರೆ ಈ ಸನ್ಮಾನ, ಚಪ್ಪಾಳೆಯಿಂದ ಹೊಟ್ಟೆ ತುಂಬಲ್ಲ. ನಮ್ಮ ಬದುಕು ಸಹ ಕಷ್ಟದ ಸ್ಥಿತಿಯಲ್ಲಿದೆ. ಕೂಡಲೇ ನಮ್ಮ ಬೇಡಿಕೆ
ಈಡೇರಿಸಿ ಎಂದು ಒತ್ತಾಯಿಸಿದರು.
ಕಳೆದ ಜನವರಿ ತಿಂಗಳ ನಂತರ ಸರ್ಕಾರಕ್ಕೆ ಹತ್ತಾರು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದಕ್ಕೂ ಸ್ಪಂದನೆಯಿಲ್ಲ. ನಮ್ಮನ್ನು ಇಷ್ಟೊಂದು ಕೀಳಾಗಿ ನೋಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಜಿಲ್ಲೆಯ ಹಳ್ಳಿ ಹಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರ ಸುತ್ತಾಟ ನಡೆಯುತ್ತದೆ. ಆದರೆ ಅವರಿಗೆ ಪ್ರತಿದಿನ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಮಾಸ್ಕ್, ಸ್ಯಾನಿಟೈಸರ್ ಪಡೆಯಬೇಕಿದೆ. ಕನಿಷ್ಟ ಒಂದು ವಾರಕ್ಕಾಗುವಷ್ಟು ಸಾಮಗ್ರಿ ಕೊಡುವಂತೆ ಮನವಿ ಮಾಡಿದರೂ ಆರೋಗ್ಯ ಇಲಾಖೆ ಸ್ಪಂದಿಸುತ್ತಿಲ್ಲ. ನಮ್ಮ ಬಳಿ ದಾಸ್ತಾನು ಕೊರತೆಯಿದೆ ಎಂದು ಹೇಳುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಮುಂದಿಟ್ಟು ಜು. 10ರಿಂದ ರಾಜ್ಯಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ಕರ್ತವ್ಯ ಸ್ಥಗಿತ ಮಾಡಿ ಮನೆಯಿಂದಲೇ ಅನಿ ರ್ದಿಷ್ಟ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ