ಕೆರೆ ಪುನಶ್ಚೇತನಕ್ಕೆ ಸಾರ್ವಜನಿಕರ ಒತ್ತಡ


Team Udayavani, Apr 9, 2019, 3:19 PM IST

kopp-2
ಕುಷ್ಟಗಿ: ತಾಲೂಕಿನಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಿಡಶೇಸಿ ಕೆರೆ, ತಾವರಗೇರಾದ ರಾಯನ ಕೆರೆ ಅಭಿವೃದ್ಧಿ ಕಾರ್ಯದ ಬೆನ್ನಲ್ಲೆ ತಾಲೂಕಿನ ಉಳಿದ ಕೆರೆಗಳ ಪುನಶ್ಚೇತನಕ್ಕಾಗಿ ಸಾರ್ವಜನಿಕರಿಂದ ಒತ್ತಡ, ಬೇಡಿಕೆ ವ್ಯಕ್ತವಾಗಿದೆ.
ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿ 21 ನೀರಾವರಿ ಕೆರೆಗಳು, 20 ಜೀನುಗು ಕೆರೆಗಳಿದ್ದು ತಾಲೂಕಿನಲ್ಲಿ 7 ಜಿಪಂ ಕೆರೆಗಳಿದ್ದು ಒಟ್ಟಾರೆಯಾಗಿ 48 ಕೆರೆಗಳಿವೆ. ಈ ಬೇಸಿಗೆಯ ಹೊತ್ತಿಗೆ ಪುರ, ನಾರಿನಾಳ, ಹುಲಿಯಾಪುರ ಹಾಗೂ ಜುಮ್ಲಾಪುರ ಕೆರೆಗಳಲ್ಲಿ ಮಾತ್ರ ನೀರಿದೆ. ಉಳಿದೆಲ್ಲವೂ ಕೆರೆ ಬತ್ತಿದ್ದು, ಕೆರೆ ಅಂಗಳದಲ್ಲಿ ಹನಿ ನೀರಿಲ್ಲ. ಈ ಪರಿಸ್ಥಿತಿಯಲ್ಲಿ ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಕ್ಷೀಣಿಸಿದ್ದು, ತಾಲೂಕಿನಾದ್ಯಂತ ಜಲ ಸಮಸ್ಯೆ ಶುರುವಾಗಿದೆ. ಸರ್ಕಾರ ನೀರಿನ ಸಮಸ್ಯೆಗೆ ಕೊಳವೆಬಾವಿ ಕೊರೆಸುವುದು, ಖಾಸಗಿ ಕೊಳವೆ ಮೂಲಕ ನೀರು ಪೂರೈಕೆ, ಟ್ಯಾಂಕರ್‌ ಮೂಲಕ ನೀರು ಪೂರೈಸುವ ಮೂಲಕ ಬಿಡುಗಡೆಯಾಗಿರುವ ಅನುದಾನ ಖರ್ಚು ಮಾಡುತ್ತಿದ್ದು, ಆದರೆ ತಾಲೂಕಿನ ಕೆರೆಗಳ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕೆಂದು ಒಕ್ಕೊರಲಿನ ಕೂಗು ಕೇಳಿ ಬರುತ್ತಿದೆ.
50 ಲಕ್ಷ ರೂ.: ತಾಲೂಕಿನ ತಳವಗೇರಾ ಹೊರವಲಯದಲ್ಲಿರುವ ಜಿನಗು ಕೆರೆ, ಹಳ್ಳದ ಪ್ರವಾಹಕ್ಕೆ ಕಳಪೆ ವೇಸ್ಟ್‌ವೇರ್‌ ಕೊಚ್ಚಿ ಹೋಗಿದ್ದು, ಸದ್ಯ ಮಳೆಯಾದರೂ ಹನಿ ನೀರು ನಿಲ್ಲದ ಪರಿಸ್ಥಿತಿ ಸದರಿ ಜಿನಗು ಕೆರೆಗೆ ಆಗಿದೆ. ಕೆರೆಯ ಸುತ್ತಮುತ್ತಲು, ಅಚ್ಚುಕಟ್ಟು ಪ್ರದೇಶದಲ್ಲಿ ಮುಳ್ಳು ಬೆಳೆದಿದ್ದು, ನೀರಾವರಿ ಇಲಾಖೆ ನಿರ್ಲಕ್ಷಿಸಿರುವುದು ಕೆರೆಯ ವಾಸ್ತವ ಸ್ಥಿತಿಯನ್ನು ಸಾಕ್ಷೀಕರಿಸುತ್ತಿದೆ. ಕೆರೆಯ ದುಸ್ಥಿತಿ ಕುರಿತು ಮಾಹಿತಿ ಪಡೆದಿದ್ದ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಅವರು, ಕೆರೆ ಪುನಶ್ಚೇತನಕ್ಕೆ ಕ್ರಮ ಕೈಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಕೆರೆಯ ಪುನಶ್ಚೇತನ ಅಂದಾಜು ವೆಚ್ಚ 50 ಲಕ್ಷ ರೂ. ಅಂದಾಜು ವೆಚ್ಚದ ಕ್ರಿಯಾಯೋಜನೆ ಸರ್ಕಾರಕ್ಕೆ
ಸಲ್ಲಿಸಲಾಗಿದೆ. ತಾಲೂಕಿನ ವಣಗೇರಾದಲ್ಲಿ ಸಣ್ಣ ನೀರಾವರಿ ಇಲಾಖೆಯ ಜಿನಗು ಕೆರೆ ಸಹ ಕಳಪೆಯಾಗಿದ್ದರಿಂದ ಹಳ್ಳದ ರಭಸಕ್ಕೆ ಕೊಚ್ಚಿ ಹೋಗಿದ್ದು, ಕೆರೆ ಅಸ್ತಿತ್ವ ಇಲ್ಲದಂತಾಗಿದೆ.
ಕೆರೆ ಮುಚ್ಚುವಷ್ಟು ಮುಳ್ಳು ಕಂಟಿ ಬೆಳೆದಿದ್ದು ಈ ಕೆರೆಗೂ ಪುನಶ್ಚೇತನಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರಿಂದ ಆಗ್ರಹ ವ್ಯಕ್ತವಾಗಿದೆ. ತಾಲೂಕಿನ ನಿಡಶೇಸಿ ಕೆರೆ, ತಾವರಗೇರಾದ ರಾಯನಕೆರೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆದಿದೆ.
ಕೆರೆ ಹೂಳೆತ್ತುವ ಕಾರ್ಯದಿಂದ ಮಳೆಗಾಲದಲ್ಲಿ ನೀರು ನಿಂತು ಅಂತರ್ಜಲ ವೃದ್ಧಿಸುವ ವಿಶ್ವಾಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಪುರ ಕೆರೆ ಪುನಶ್ಚೇತನಕ್ಕೆ ಎಲ್‌ಟಿ ಕಂಪನಿ ಮುಂದೆ ಬಂದಿದೆ. ಈ ಬೆಳವಣಿಗೆಯ ಮಧ್ಯೆ ತಾಲೂಕಿನ ಉಳಿದ ಕೆರೆಗಳು ಪುನಶ್ಚೇತನ ಭಾಗ್ಯ ಕಾಣಲಿ ಎನ್ನುವ ಆಶಯ ವ್ಯಕ್ತವಾಗಿದೆ.
ತಳವಗೇರಾ ಜಿನಗು ಕೆರೆ ಕೆರೆ ವಿಸ್ತೀರ್ಣ 16.11 ಎಕರೆ ಮುಳಗುಡೆ ಪ್ರದೇಶವಿದ್ದು, 2.3 ಎಂಸಿಎಫ್‌ಟಿ ನೀರು ನಿಲ್ಲುವ ಸಾಂದ್ರತೆ ಪ್ರದೇಶವಿದೆ. 58 ಮೀಟರ್‌ ವೇಸ್ಟ್‌ವೇರ್‌ ಹಾಗೂ 405 ಮೀಟರ್‌ ಉದ್ದ, 4.9 ಮೀಟರ್‌ ಎತ್ತರ ಹಾಗೂ 2.50 ಮೀಟರ್‌ ಅಗಲದ ಏರಿ ಪುನರ್‌ ನಿರ್ಮಾಣಕ್ಕೆ ಅಂದಾಜು ವೆಚ್ಚದ ಕ್ರಿಯಾ ಯೋಜನೆ ಸರ್ಕಾರಕ್ಕೆ ಪ್ರಸ್ತಾವನೆಯ ವರದಿ ಸಲ್ಲಿಸಲಾಗಿದೆ. ತಾಲೂಕಿನ ವಣಗೇರಾ, ಕಲಕೇರಿ, ಎಸ್‌. ಗಂಗನಾಳ ಜಿನಗು ಕೆರೆ ಪುನಶ್ಚೇತನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ
ಸಲ್ಲಿಸಲಾಗುವುದು.
ರಾಜಶೇಖರ ಕಟ್ಟಿಮನಿ, ಜೆಇ ಸಣ್ಣ ನೀರಾವರಿ ಇಲಾಖೆ
ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.