ಗಂಗಾವತಿ: ಬೃಹತ್ ಮರ ತೆರವಿಗೆ ಮೀನಾಮೇಷ; ಅಧಿಕಾರಿಗಳ ನಿರ್ಲಕ್ಷ್ಯ
ಮತ್ತೊಂದು ಅನಾಹುತಕ್ಕೆ ಕಾದಿರುವ ಮರ
Team Udayavani, Nov 29, 2022, 1:01 PM IST
ಗಂಗಾವತಿ: ಕಳೆದ ವಾರ ಕಲ್ಮಠದ ಬಳಿ ಬೃಹತ್ ಮರ ಬಿದ್ದು 12 ಬೈಕ್ ಜಖಂಗೊಂಡು ಒರ್ವ ವ್ಯಕ್ತಿಗೆ ತೀವ್ರ ಗಾಯಗಳಾದ ಘಟನೆ ಮರೆಯುವ ಮುನ್ನವೇ ಅದೇ ಸ್ಥಳದಲ್ಲಿದ್ದ ಮತ್ತೊಂದು ಬೃಹತ್ ಮರ ನೆಲಕ್ಕುರುಳುವ ಸಾಧ್ಯತೆ ಇದ್ದು, ಸ್ಥಳೀಯ ನಾಗರೀಕರು ಮರ ಉರುಳಿ ಬೀಳುವ ಕುರಿತು ನಗರಸಭೆ, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬೃಹತ್ ಮರಗಳು 50 ವರ್ಷಗಳ ಹಿಂದಿನದ್ದಾಗಿದ್ದು, ಕಳೆದ ವಾರ ಮರದ ಬುಡದಲ್ಲಿ ಮಣ್ಣಿನ ಕೊರತೆ ಮತ್ತು ಮರದ ಕೆಳಗೆ ಕುಡಿಯುವ ನೀರಿನ ಪೈಪ್ ಇರುವುದರಿಂದ ಮರದ ಬೇರುಗಳು ಸಡಿಲಗೊಂಡು ಮರ ಏಕಾಏಕಿ ಕೆಳಗೆ ಬಿದ್ದಿದ್ದು, ಇದರಿಂದ 12 ಬೈಕ್ ಜಖಂಗೊಂಡು ಒರ್ವ ವ್ಯಕ್ತಿಗೆ ಗಾಯವಾದ ಘಟನೆ ನಡೆದಿತ್ತು.
ಈಗ ಇನ್ನೊಂದು ಬೃಹತ್ ಗಾತ್ರದ ಮರ ಬೀಳುವ ಹಂತದಲ್ಲಿದ್ದು, ಮುಂದಾಗುವ ಅನಾಹುತ ತಪ್ಪಿಸುವ ಸಲುವಾಗಿ ಸಾರ್ವಜನಿಕರು ಮರ ಕಡಿದು ಹಾಕುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್