ಪ್ರತಿ ಮನೆಗೂ ಶೀಘ್ರ ಶುದ್ಧ ಕುಡಿಯುವ ನೀರು: ಹಿಟ್ನಾಳ
ಯಾವುದೇ ಚುನಾವಣೆಗಳು ಇಲ್ಲದ ಹೊತ್ತಲ್ಲೂ ನಾವು ಪ್ರತಿ ಹಳ್ಳಿಯ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ.
Team Udayavani, Jan 29, 2022, 6:27 PM IST
ಕೊಪ್ಪಳ: ಶೀಘ್ರವೇ ಕ್ಷೇತ್ರದ ಪ್ರತಿ ಮನೆಗೂ ಜೆಜೆಎಂ ಮೂಲಕ ಶುದ್ಧ ಕುಡಿಯುವ ನೀರು ದೊರೆಯಲಿದ್ದು, ಬೇಕಾದಾಗ ನೀರು ಸಿಗುವ ಸೌಲಭ್ಯವಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು.
ತಾಲೂಕಿನ ಗೊಂಡಬಾಳ ಜಿಪಂ ವ್ಯಾಪ್ತಿಯ ಹಾಲವರ್ತಿ, ಕುಣಿಕೇರಿ, ಕುಣಿಕೇರಿ ತಾಂಡಾ, ಲಾಚನಕೇರಿ, ಕರ್ಕಿಹಳ್ಳಿ, ಚಿಕ್ಕಬಗನಾಳ, ಹಿರೇಕಾಸನಕಂಡಿ, ಅಲ್ಲಾನಗರ ಗ್ರಾಮಗಳಲ್ಲಿ ವಿವಿಧ ಯೋಜನೆಯಡಿ 8.69 ಕೋಟಿ ರೂ.ನಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕುಣಿಕೇರಿ ಸೇರಿದಂತೆ ಅನೇಕ ದೊಡ್ಡ ಗ್ರಾಮಗಳ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಾಗುವುದು. ಅವುಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿ ಕೆಲಸ ಮಾಡಲು ಶ್ರಮಿಸುತ್ತಿದೆ. ಕುಣಿಕೇರಿಯ ಇನ್ನೊಂದು ಕೆರೆ ಪುನಃಶ್ಚೇತನಕ್ಕೆ ಒತ್ತು ಕೊಟ್ಟು ಕೆರೆ ತುಂಬಿಸುವ ಯೋಜನೆಯಲ್ಲಿ ಸೇರಿಸಲಾಗುವುದು.
ಯಾವುದೇ ಚುನಾವಣೆಗಳು ಇಲ್ಲದ ಹೊತ್ತಲ್ಲೂ ನಾವು ಪ್ರತಿ ಹಳ್ಳಿಯ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿನ ಸಮಸ್ಯೆ ಆಲಿಸುತ್ತಿರುವುದು ನಮ್ಮ ಮೇಲೆ ಜನರಆಶೀರ್ವಾದದ ಹೊರೆ ಇದೆ. ಅವರ ಋಣ ತೀರಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದು, ಸರಕಾರ ನೆಪ ಹೇಳದೆ ಅನುದಾನ ನೀಡಬೇಕಿದೆ ಎಂದರು.
ಈ ವೇಳೆ ಗ್ರಾಪಂ ಅಧ್ಯಕ್ಷ ಫಕೀರಶೆಟ್ರ ಮುಂಡರಗಿ, ಉಪಾಧ್ಯಕ್ಷೆ ಈರಮ್ಮ ಮಡಿವಾಳರ, ಜಿಪಂ ಮಾಜಿ ಸದಸ್ಯ ಗೂಳಪ್ಪ ಹಲಗೇರಿ, ತಾಪಂ ಮಾಜಿ ಅಧ್ಯಕ್ಷ ಬಾಲಚಂದ್ರನ್, ಮುಖಂಡರಾದ ಹನುಮಂತಪ್ಪ ಜಲವ ನಿ, ನವೋದಯ ವಿರುಪಣ್ಣ, ಪಂಪಣ್ಣ ಪೂಜಾರ, ಹನುಮೇಶ ಹೊಸಳ್ಳಿ, ಸಲೀಂ ಅಳವಂಡಿ, ಗವಿಸಿದ್ದನಗೌಡ್ರ ಪಾಟೀಲ್, ಆನಂದ ಕಿನ್ನಾಳ, ಹನುಮೇಶ ಹೊಸಳ್ಳಿ, ಪಂಪಣ್ಣ ಪೂಜಾರ, ಮುದಿಯಪ್ಪ ಆದೋನಿ, ಹೇಮಣ್ಣ ದೇವರಮನಿ, ಹುಸ್ಮಾನ್ ಸಾಬ್, ಮಂಜುನಾಥ ಜಿ. ಗೊಂಡಬಾಳ, ಹನುಮಂತಪ್ಪ ಬೀಡನಾಳ, ಎಇಇ ವಿಲಾಸ ಬೋಸ್ಲೆ, ವೆಂಕನಗೌಡ್ರ ಮಾ.ಪಾ., ಶರಣಪ್ಪ ಚೌಡಕಿ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ