2000 ಆಶ್ರಯ ಮನೆಗಳಿಗೆ ಶೀಘ್ರ ಮುಕ್ತಿ

ದಶಕದಿಂದ ನನೆಗುದಿಗೆ ಬಿದ್ದಿರುವ ಮನೆಗಳು

Team Udayavani, May 27, 2022, 4:19 PM IST

22

ಕೊಪ್ಪಳ: ಜಿಲ್ಲೆಯಲ್ಲಿ ಭಾರಿ ಸದ್ದು ಮಾಡಿದ್ದ ನಗರಸಭೆ ವ್ಯಾಪ್ತಿಯಲ್ಲಿನ ಹಿರೇಸಿಂದೋಗಿ ರಸ್ತೆಯಲ್ಲಿನ 2000 ಸಾವಿರ ಆಶ್ರಯ ಮನೆ ಹಂಚಿಕೆಯ ಪ್ರಕ್ರಿಯೆ ಅಂತೂ ಇಂತು ಕೊನೆಯ ಹಂತಕ್ಕೆ ಬಂದಿದೆ. ದಶಕಗಳಿಂದ ಮನೆಗೆ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಲ್ಲಿ ಕಮರಿ ಹೋಗಿದ್ದ ಆಸೆ ಮತ್ತೆ ಚಿಗುರೊಡೆದಿದೆ.

ಹೌದು. ನಗರಸಭೆ ವ್ಯಾಪ್ತಿಯಲ್ಲಿ ಬಡವರಿಗೆ ಸೂರು ಕಲ್ಪಿಸಬೇಕೆಂದು ಈ ಹಿಂದೆ ಕೊಪ್ಪಳ ಶಾಸಕರಾಗಿದ್ದ ಸಂಗಣ್ಣ ಕರಡಿ ಅವರು ತಾಲೂಕಿನ ಹಿರೇಸಿಂದೋಗಿಯ ರಸ್ತೆಯಲ್ಲಿ 2000 ಆಶ್ರಯ ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳ ಹಂಚಿಕೆಗೆ ವ್ಯವಸ್ಥೆ ಮಾಡಿದ್ದರು. ಆದರೆ ರಾಜಕೀಯ ಕಾರಣಕ್ಕೆ, ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ದಶಕದಿಂದಲೂ ಫಲಾನುಭವಿಗಳಿಗೆ ಮನೆ, ನಿವೇಶನ ಹಂಚಿಕೆಯ ಆಗಿರಲಿಲ್ಲ. ಈಗ ಹಂಚಿಕೆ ಕೊನೆ ಹಂತ ತಲುಪುತ್ತಿದೆ.

ಈ ಹಿಂದೆ ನಗರದ ನಿವಾಸಿಗಳು ನಮಗೆ ಕಡಿಮೆ ದರದಲ್ಲಿ ಸರ್ಕಾರದಿಂದ ನಿವೇಶನ ಅಥವಾ ಮನೆ ದೊರೆಯಲಿದೆ ಎನ್ನುವ ಕನಸು ಕಟ್ಟಿಕೊಂಡು ಸಾಲ ಸೂಲ ಮಾಡಿ, ದಿನವೂ ದುಡಿದ ಕೂಲಿ ಹಣ ಕೂಡಿಟ್ಟು ನಗರಸಭೆಗೆ ತಮ್ಮ ಪಾಲಿನ ವಂತಿಗೆ ಕಟ್ಟಿದ್ದರು. ಫಲಾನುಭವಿಗಳ ವಂತಿಗೆ ಪಡೆದಿದ್ದ ನಗರಸಭೆಯು ಸಿಂದೋಗಿ ರಸ್ತೆಯಲ್ಲಿ ಜಮೀನು ಖರೀದಿ ಮಾಡಿ ಮನೆ ಹಂಚುವ ಪ್ರಕ್ರಿಯೆ ಆರಂಭಿಸಿತ್ತು.

ಆದರೆ ಆರಂಭದಲ್ಲಿ ಸರ್ಕಾರಕ್ಕೆ ಇದ್ದ ಇಚ್ಚಾಶಕ್ತಿ ಕ್ರಮೇಣ ಕಡಿಮೆಯಾಯಿತು. ಬದಲಾದ ರಾಜಕೀಯ ವಿದ್ಯಮಾನಗಳಲ್ಲಿ ಸರ್ಕಾರ ಸಹ ಆಶ್ರಯ ಮನೆಗಳತ್ತ ಕಾಳಜಿಯನ್ನೇ ಕೊಡದೇ ನಿರ್ಲಕ್ಷ್ಯ ಧೋರಣೆ ತಾಳಿತು. ಆರಂಭದಲ್ಲಿ ಮನೆಗಳ ನಿರ್ಮಾಣಕ್ಕೆ ಸರ್ಕಾರ ಸ್ವಲ್ಪ ಹಣ ಬಿಡುಗಡೆ ಮಾಡಿ ಬಳಿಕ ಅನುದಾನವನ್ನೇ ಕೊಡಲಿಲ್ಲ. ಇದರಿಂದ ನಿರ್ಮಿತಿ ಕೇಂದ್ರ ಸಹ ಸರ್ಕಾರ ಕೊಟ್ಟ ಅನುದಾನದಲ್ಲಿ ಅರೆಬರೆ ಮನೆ ನಿರ್ಮಾಣ ಮಾಡಿ ಕೈ ಚೆಲ್ಲಿತು. ಸರ್ಕಾರ ಅನುದಾನ ಕೊಟ್ಟರೆ ಉಳಿದ ಕಾರ್ಯ ಪೂರೈಸುವ ಭರವಸೆ ನೀಡಿ ಜಾರಿಕೊಂಡಿತು. ಹೀಗಾಗಿ ಫಲಾನುಭವಿಗಳು ಮನೆಗಳು ಸಿಗಲಿವೆ. ನಮಗೊಂದು ಸೂರು ದೊರೆಯಲಿದೆ ಎಂಬ ಕನಸು ಕಂಡಿದ್ದವರಿಗೆ ಭಾರಿ ನಿರಾಶೆ ಮೂಡಿಸಿತು. ಇದರಿಂದ ನೊಂದು ಬೆಂದು ಹೋಗಿದ್ದರು. ಮನೆ ಅಥವಾ ನಿವೇಶನ ಹಂಚಿಕೆ ಮಾಡಿ ಎಂದು ನಗರಸಭೆ, ಜಿಲ್ಲಾಧಿಕಾರಿ ಕಚೇರಿ ಮುಂದೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಹೋರಾಟ ಮಾಡಿಯೂ ಸುಸ್ತಾಗಿದ್ದರು.

ಒಂದೆಡೆ ಫಲಾನುಭವಿಗಳ ಆಯ್ಕೆಯೂ ನಡೆದಿತ್ತು. ಫಲಾನುಭವಿಗಳ ಆಯ್ಕೆ ಸರಿಯಿಲ್ಲ ಎನ್ನುವ ಆಪಾದನೆಯೂ ಕೇಳಿ ಕೋರ್ಟ್‌ ಹಂತದಲ್ಲಿಯೂ ಕೆಲವೊಂದು ಪ್ರಕರಣ ದಾಖಲಾಗಿ ವರ್ಷಗಳ ಕಾಲ ವಿಚಾರಣೆ ನಡೆಯಿತು. ಮನೆಯ ಕನಸು ಕಂಡಿದ್ದ ಫಲಾನುಭವಿಗಳ ಕನಸೇ ಕಮರಿ ಹೋಗಿತ್ತು. ಏಕೆಂದರೆ ಬರೊಬ್ಬರಿ 10 ವರ್ಷಗಳೇ ಗತಿಸಿದೆ. ಆದರೆ ಇಲ್ಲಿವರೆಗೂ ಮನೆಗಳ ಹಂಚಿಕೆ ಪ್ರಕ್ರಿಯೆ ನಡೆದಿಲ್ಲ.

ಈಗ ನಗರಸಭೆ, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಅಧಿಕಾರಿಗಳ ಶ್ರಮ ಹಾಗೂ ಜನಪ್ರತಿನಿಧಿಗಳ ನಿರಂತರ ಪ್ರಯತ್ನದಿಂದ ಪ್ರಸ್ತುತ ಹಿರೇಸಿಂದೋಗಿ ರಸ್ತೆಯಲ್ಲಿ ಸದ್ಯ ಯಾವ ಸ್ಥಿತಿಯಲ್ಲಿ ಮನೆಗಳು ನಿರ್ಮಾಣವಾಗಿವೆಯೋ ಅದೇ ಸ್ಥಿತಿಯಲ್ಲೇ ಹಂಚಿಕೆಯಾಗಿರುವ ಮನೆಗಳ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲು ನಗರಾಭಿವೃದ್ಧಿ ಕೋಶವು ನಿರ್ಧರಿಸಿದೆ. ಈ ಹಿಂದೆ ನಗರಸಭೆಯ ಸಾಮಾನ್ಯ ಸಭೆಯಲ್ಲೂ ಇದು ಸದ್ದು ಮಾಡಿ ಮನೆ ಹಂಚಿಕೆಗೆ ಒತ್ತಾಯವೂ ಕೇಳಿ ಬಂದಿದ್ದವು.

ಪ್ರಸ್ತುತ 2000 ಮನೆಗಳ ಜಮೀನನ್ನು ಜಿಲ್ಲಾಡಳಿತವೇ ಕೆಜೆಪಿ ಮಾಡಿ ಸರ್ಕಾರದ ದಾಖಲೆಗಳ ಪ್ರಕಾರ ಲೆಔಟ್‌ ಸಿದ್ಧಪಡಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲು ಸಿದ್ಧತೆಯಲ್ಲಿ ತೊಡಗಿದೆ. 2000 ಮನೆಗಳ ಪೈಕಿ ಮೊದಲ ಹಂತದಲ್ಲಿ 1600 ಮನೆ ಅಥವಾ ನಿವೇಶನಗಳ ಹಂಚಿಕೆಗೆ ಯೋಜಿಸಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿ ಫಲಾನುಭವಿಯಾಗಿ ಆಯ್ಕೆಯಾಗಿರುವ ಜನತೆಗೆ ಎಲ್ಲಿಲ್ಲದ ಖುಷಿ ತರಿಸಿದೆ. ಕೊನೆಗೂ 10 ವರ್ಷಗಳ ಹೋರಾಟದ ಫಲವಾಗಿ ನಮ್ಮ ಕನಸಿನ ಗೂಡು ಕೈ ಸೇರಲಿದೆ ಎನ್ನುವ ಆಸೆ ಚಿಗುರಿದೆ.

ನಗರಸಭೆ ವ್ಯಾಪ್ತಿಯ ಹಿರೇಸಿಂದೋಗಿ ರಸ್ತೆಯಲ್ಲಿನ 2000 ಮನೆಗಳ ಹಕ್ಕುಪತ್ರಗಳ ಹಂಚಿಕೆ ಪ್ರಕ್ರಿಯೆ ಇನ್ನು 15 ದಿನಗಳಲ್ಲೇ ನಡೆಯಲಿದೆ. ಮೊದಲು 1600 ಹಕ್ಕುಪತ್ರ ವಿತರಣೆ ಮಾಡಲಿದ್ದೇವೆ. ಈಗಿರುವ ಸ್ಥಿತಿಯಲ್ಲೇ ಅವುಗಳ ಹಂಚಿಕೆ ನಡೆಯಲಿದೆ. ಕೆಲವೊಂದು ವ್ಯಾಜ್ಯ ಕೋರ್ಟ್‌ ಹಂತದಲ್ಲಿವೆ. ಜಿಲ್ಲಾಡಳಿತದ ನಿರಂತರ ಪ್ರಯತ್ನದ ಫಲವಾಗಿ ಆಶ್ರಯ ಪ್ಲಾಟಿನ ಎಲ್ಲ ಸಮಸ್ಯೆ ಇತ್ಯರ್ಥವಾಗಿದೆ. ಶೀರ್ಘ‌ ಫಲಾನುಭವಿಗಳ ಕೈಗೆ ಹಕ್ಕುಪತ್ರ ಸೇರಲಿದೆ. ಗಂಗಪ್ಪ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ, ಕೊಪ್ಪಳ

-ದತ್ತು ಕಮ್ಮಾರ

 

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.