ಗ್ರಾಮಕ್ಕೆ ನುಗ್ಗಿದ ಮಳೆ ನೀರು: 150 ಮನೆಗೂ ನೀರಿನಲ್ಲಿ ಜಲಾವೃತ
Team Udayavani, Oct 7, 2019, 4:42 PM IST
ಕುಷ್ಟಗಿ: ತಾಲೂಕಿನ ನಿಡಶೇಷಿ ವ್ಯಾಪ್ತಿಯಲ್ಲಿ ಸುರಿದ ಧಾರಕಾರ ಮಳೆಗೆ ನಾಲೆಯ ನೀರು ನಿಡಶೇಷಿ ಗ್ರಾಮಕ್ಕೆ ನುಗ್ಗಿದ್ದರಿಂದ 150ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.
ಗ್ರಾಮದ ಹೊರವಲಯದಲ್ಲಿ ನಾಲೆಗೆ ಕಿರು ಸೇತುವೆ ಪೈಪ್ ಅಳವಡಿಸಲಾಗಿತ್ತು. ಧಾರಕಾರ ಮಳೆಯಿಂದ ಪೈಪಿನ ಗಾತ್ರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ನೀರು ಗ್ರಾಮದೊಳಗೆ ನುಗ್ಗಿದೆ.
ಏಕಾ ಏಕಿ ನೆರೆ ನೀರು ಬಂದ ಕಾರಣ ಈ ಭಾಗದ ಜನರು ಭಯಭೀತರಾದರು. ಇದೀಗ ತೋಟಗಾರಿಕಾ ಇಲಾಖೆಯ ಫಾರ್ಮ್ ಆವರಣದ ಗೋಡೆ ಒಡೆದು ನೀರು ಬೇರೆ ಕಡೆ ಹರಿದು ಹೋಗುವ ವ್ಯವಸ್ಥೆ ಮಾಡಿರುವುದರಿಂದ ಗ್ರಾಮದೊಳಗೆ ನೀರು ನುಗ್ಗುವ ಪ್ರಮಾಣ ಕಡಿಮೆಯಾಗಿದೆ.
ಘಟನಾ ಸ್ಥಳಕ್ಕೆ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ