ತಂಬಾಕು ನಿಯಂತ್ರಣ ಕಾಯ್ದೆ ಜಾಗೃತಿ ಮೂಡಿಸಿ


Team Udayavani, Feb 8, 2020, 4:48 PM IST

kopala-tdy-1

ಕುಷ್ಟಗಿ: ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ಕೊಪ್ಪಳ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಜಿಲ್ಲಾ ಸರ್ವೇಕ್ಷಣ ಅಧಿ ಕಾರಿಗಳ ಕಾರ್ಯಾಲಯ, ಕಂದಾಯ ಇಲಾಖೆ, ತಾಲೂಕು ಅರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮನ್ವ ಸಮಿತಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ತಾಲೂಕು ವೈದ್ಯಾಧಿಕಾರಿ ಡಾ| ಆನಂದ ಗೋಟೂರು ಮಾತನಾಡಿ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ತಾಲೂಕಿನಲ್ಲಿ ತಂಬಾಕು ನಿಯಂತ್ರಣ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ತಾಲೂಕಿನ ಎಲ್ಲ ಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಪ್ರದೇಶ ಎಂದು ಪ್ರಮಾಣೀಕರಿಸಲು ಅನುಸರಿಸಬೇಕಾದ ಕ್ರಮ ಹಾಗೂ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಬೇಕು ಎಂದರು.

ಗ್ರಾಮ ಪಂಚಾತಿಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರೂಪಿಸಿದ 2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪಟ್ಟಣ ಪಂಚಾಯತ್‌, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಉದ್ದಿಮೆ ಪರವಾನಗಿ ನೀಡುವಾಗ ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

ಎಲ್ಲ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಪ್ರದೇಶಗಳೆಂದು ಘೋಷಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಬೆಳಗ್ಗೆಯ ಪ್ರಾರ್ಥನೆಯ ವೇಳೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕು. ಅಲ್ಲದೇ ದುಶ್ಚಟಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತಂಬಾಕು ಕೋಶದ ಜಿಲ್ಲಾ ಸಲಹೆಗಾರ ಮೆಹಬೂಬ್‌ ಅಲಿ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇ-ಸಿಗರೇಟ್‌ ಉತ್ಪಾದನೆ, ಆಮದು, ರಫ್ತು, ಸಾಗಾಟ, ಮಾರಾಟ, ಸರಬರಾಜು, ಸಂಗ್ರಹ ಮತ್ತು ಜಾಹೀರಾತು ನಿಷೇಧ ಕಾಯ್ದೆಯನ್ನು 2019ರ ಸೆಪ್ಟೆಂಬರ್‌ನಿಂದ ಜಾರಿಗೆ ತಂದಿದೆ. ಇದರನ್ವಯ ಇ-ಸಿಗರೇಟ್‌ ಮಾರಾಟ ಮಾಡಿದಲ್ಲಿ 1 ವರ್ಷದವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ. ವರೆಗೆ ದಂಡ ಅಥವಾ ಈ ಎರಡನ್ನು ವಿಧಿ ಸುವ ಅವಕಾಶ ಇರುತ್ತದೆ ಎಂದರು.

ಕಾಯ್ದೆಯನ್ನು ಎರಡನೇ ಬಾರಿ ಉಲ್ಲಂಘಿಸಿದರೆ 3 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ವರೆಗೆ ದಂಡ ವಿ ಧಿಸಲು ಅವಕಾಶವಿದೆ. ಕಾಯ್ದೆಯ ಸೆಕ್ಷನ್‌ 5ರ ಅನುಸಾರ ಈ-ಸಿಗರೇಟ್‌ಗಳ ಸಂಗ್ರಹ ಮಾಡಿದ ವ್ಯಕ್ತಿಗೆ 6 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 50 ಸಾವಿರ ರೂ. ವರೆಗೆ ದಂಡ ಅಥವಾ ಈ ಎರಡನ್ನು ವಿಧಿಸುವ ಅವಕಾಶ ಇರುತ್ತದೆ ಎಂದು ಸಭೆಗೆ ವಿವರಿಸಿದರು.

ಶಿರಸ್ತೇದಾರ ರಜನಿಕಾಂತ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ್‌, ವಿ.ಬಿ. ದಾದ್ಮಿ, ಈರಪ್ಪ, ಮಹೆಬೂಬಅಲಿ, ಜ್ಯೋತಿ ಕಿತ್ತೂರ ಮತ್ತಿತರಿದ್ದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.