ಒಟಿಪಿ ಇರಲಿ ಬಯೋಮೆಟ್ರಿಕ್‌ ಬೇಡ


Team Udayavani, Jun 19, 2020, 3:35 PM IST

ಒಟಿಪಿ ಇರಲಿ ಬಯೋಮೆಟ್ರಿಕ್‌ ಬೇಡ

ಸಾಂದರ್ಭಿಕ ಚಿತ್ರ

ಗಂಗಾವತಿ: ಕೋವಿಡ್‌-19 ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಳೆದ ಮೂರು ತಿಂಗಳಿಂದ ಪಡಿತರ ಕಾರ್ಡುದಾರರಿಗೆ ಮೊಬೈಲ್‌ ಒಟಿಪಿ ಮೂಲಕ ಆಹಾರಧಾನ್ಯ ವಿತರಣೆಗೆ ಆಹಾರ ಇಲಾಖೆ ಕ್ರಮ ಕೈಗೊಂಡಿತ್ತು. ಆದರೀಗ ಸರ್ವರ್‌ನಲ್ಲಿ ತಾಂತ್ರಿಕ ತೊಂದರೆ ನೆಪವೊಡ್ಡಿ ಬಯೋಮೆಟ್ರಿಕ್‌ ಪಡೆದು ಜೂನ್‌ ತಿಂಗಳ ಪಡಿತರ ವಿತರಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೋವಿಡ್‌-19 ರೋಗ ಉಲ್ಬಣಗೊಳ್ಳುತ್ತಿರುವ ಮಧ್ಯೆ ಆಹಾರ ಇಲಾಖೆ ಅಧಿಕಾರಿಗಳ ಈ ಕ್ರಮದಿಂದ ಜನರು ಭಯಗೊಳ್ಳುವಂತಾಗಿದೆ. ಒಟಿಪಿ ಮೂಲಕ ಆಹಾರ ಧಾನ್ಯ ವಿತರಿಸಬೇಕು. ವಲಸೆ ಹೋಗಿದ್ದವರು ಮರಳಿ ಬಂದಿರುವ ಕಾರಣ ಸಾಮಾಜಿಕ ಅಂತರ ಕಾಪಾಡಿಕೊಂಡು ಮೊಬೈಲ್‌ ನಂಬರ್‌ಗೆ ಒಟಿಪಿ ಬರುವಂತೆ ಮಾಡಿ ಪಡಿತರ ವಿತರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸರತಿ ಸಾಲಿನಲ್ಲಿ ನಿಂತು ಬಯೋಮೆಟ್ರಿಕ್‌ ಒತ್ತುವ ಸಂದರ್ಭದಲ್ಲಿ ಪ್ರತಿಯೊಬ್ಬರು ಸ್ಯಾನಿಟೈಜರ್‌ ಹಚ್ಚಿಕೊಳ್ಳುತ್ತಿಲ್ಲ. ಕೊರೊನಾ ಸೋಂಕು ತಗುಲಿದ ವ್ಯಕ್ತಿಯೇನಾದರೂ ಬಯೋಮೆಟ್ರಿಕ್‌ ಕೊಟ್ಟರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಸರಕಾರ ಮೊದಲಿನಂತೆ ಒಟಿಪಿ ಮೂಲಕ ಪಡಿತರ ವಿತರಿಸಬೇಕು. ಬಯೋಮೆಟ್ರಿಕ್‌ ಮೂಲಕ ಪಡಿತರ ವಿತರಿಸುವಂತೆ ಆದೇಶ ಮಾಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೊವೀಡ್‌-19 ತೀವ್ರ ಹರಡುತ್ತಿರುವ ಈ ಸಂದರ್ಭದಲ್ಲಿ ಒಟಿಪಿ ಮೂಲಕ ಪಡಿತರ ವಿತರಿಸುವ ಪದ್ಧತಿ ಕೈ ಬಿಟ್ಟು ಬಯೋಮೆಟ್ರಿಕ್‌ ಮೂಲಕ ಪಡಿತರವಿತರಿಸಲು ಆದೇಶಿಸಿರುವುದು ಸರಿಯಲ್ಲ. ಹೀಗಾಗಿ ಪರಸ್ಪರ ಮುಟ್ಟುವಂತಾಗಿ ಕೋವಿಡ್ ಹರಡುವ ಸಾಧ್ಯತೆಯಿದೆ. ಒಟಿಪಿ ಮೂಲಕ ಪಡಿತರ ವಿತರಿಸಬೇಕು. ಸರ್ವರ್‌ ತಾಂತ್ರಿಕ ನೆಪವೊಡ್ಡಿ ಬಯೋಮೆಟ್ರಿಕ್‌ ಪುನಃ ಜಾರಿ ಮಾಡಿದರೆ ದೊಡ್ಡ ಅನಾಹುತವಾಗುವ ಸಾಧ್ಯತೆಯಿದೆ. –ಬಿಪಿಎಲ್‌ ಕಾರ್ಡ್‌ದಾರರು.

ಸರ್ವರ್‌ ತಾಂತ್ರಿಕ ತೊಂದರೆಯಿಂದ ಪಡಿತರ ವಿತರಣೆ ವಿಳಂಬವಾಗುವ ಕುರಿತು ಮಾಹಿತಿ ಇದೆ. ಬಯೋಮೆಟ್ರಿಕ್‌ ಪದ್ಧತಿ ಮೂಲಕ ಪಡಿತರ ವಿತರಣೆ ಆದೇಶ ಮಾಡಿಲ್ಲ. ಸರ್ವರ್‌ ತೊಂದರೆ ಸರಿಪಡಿಸಿ ಒಟಿಪಿ ಪದ್ಧತಿಯಂತೆ ಪಡಿತರ ವಿತರಿಸಬೇಕು. ಕೋವಿಡ್‌-19 ಹರಡದಂತೆ ಸಾಮಾಜಿಕ ಅಂತರ ಕಾಪಾಡಿ ಒಟಿಪಿ ಪಡೆದು ಪಡಿತರ ವಿತರಿಸಲು ಕೂಡಲೇ ಆದೇಶ ಹೊರಡಿಸಲಾಗಿದೆ.- ನಾರಾಯಣ ರೆಡ್ಡಿ, ಉಪ ನಿರ್ದೇಶಕರು, ಜಿಲ್ಲಾ ಆಹಾರ ಇಲಾಖೆ

 

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.