ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ
Team Udayavani, May 21, 2022, 12:30 PM IST
ಕುಷ್ಟಗಿ: ತಾಲೂಕಿನ ತಾವರಗೇರಾಯ ರಾಯನಕೆರೆ ಇದೇ ಮೊದಲ ಬಾರಿಗೆ ಕೃತಿಕಾ ಮಳೆ ಮಳೆಗೆ ಭರ್ತಿಯಾಗಿದ್ದು, ಕೋಡಿಯ ಮೂಲಕ ಹೆಚ್ಚುವರಿ ನೀರು ಹರಿದಿದೆ. ಸಾರ್ವಜನಿಕರಲ್ಲಿ ಸಂತಸ ಮನೆ ಮಾಡಿದೆ.
ತಾವರಗೇರಾ ಪಟ್ಟಣಕ್ಕೆ ಹೊಂದಿಕೊಂಡಿರುವ ರಾಯನಕೆರೆ ಕುಡಿಯುವ ನೀರಿನ ಮೂಲವು ಹೌದು, ಕೆರೆ ಭರ್ತಿಯಾದರೆ ಅಂತರ್ಜಲಕ್ಕೆ ಕೊರತೆಯಾಗದು. ಈ ಕೆರೆ ಜನ ಜಾನುವಾರುಗಳಿಗೆ ಆಸರೆಯಾಗಿದ್ದು ಕೆರೆ ಬರಿದಾದರೆ ಈ ಭಾಗದಲ್ಲಿ ನೀರಿನ ಸಮಸ್ಯೆ ಉಲ್ಬಣಿಸುತ್ತದೆ. ಈ ರೀತಿಯಾಗಿ ರಾಯನಕೆರೆಗೂ ತಾವರಗೇರಾ ಪಟ್ಟಣಕ್ಕೂ ಅವಿನಾಭಾವ ಸಂಬಂಧ ಬೆಸೆದುಕೊಂಡಿದೆ.
ಸಣ್ಣ ನೀರಾವರಿ ಇಲಾಖೆಯ ಆಧೀನದ ರಾಯನಕೆರೆ 21.04 ಹೆಕ್ಟೇರ್ ವಿಸ್ತೀರ್ಣ ದ 48 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಕುಷ್ಟಗಿ ಯ ನಿಡಶೇಸಿ ಕೆರೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ದಿ ಮಾದರಿಯಲ್ಲಿ ರಾಯನಕೆರೆಯೂ ಅಭಿವೃದ್ಧಿ ಆಗಿರುವುದು ಗಮನಾರ್ಹ ವಾಗಿದೆ.
ಈ ಕೆರೆಯನ್ನು 2018- 19 ರಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೊಪ್ಪಳ ಗವಿಶ್ರೀ ಪ್ರೇರಣೆಯೊಂದಿಗೆ ಅಗಿನ ಪಿಎಸೈ ಶಿವರಾಜ್ ಸಜ್ಜನ್ ಸಾರಥ್ಯದಲ್ಲಿ ಸಮಾನಮನಸ್ಕ ಯುವ ಪಡೆಯೊಂದಿಗೆ ಈ ಕೆರೆಯ ಹೂಳು ಎತ್ತುವ ಕಾರ್ಯ ನಡೆದಿತ್ತು. ಈ ಕಾರ್ಯದಿಂದ ಕೆರೆಯ ನೀರಿನ ಸಾಮಾರ್ಥ್ಯ ಹೆಚ್ಚಿದೆ. ಕಳೆದ ವರ್ಷದಲ್ಲಿ ಕೆರೆ ಭರ್ತಿಯಾಗಿದ್ದ ಕೆರೆ ಈ ವರ್ಷವೂ ಮುಂಗಾರು ಹಂಗಾಮಿನಲ್ಲಿ ಭರ್ತಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೃತಿಕಾ ಕೃಪೆಯಿಂದ ಶುಕ್ರವಾರ ಕೆರೆ ತುಂಬಿ ಹರಿದಿದ್ದು ತಾವರಗೇರಾ ಜನತೆಯ ಸಂತಸಕ್ಕೆ ಕಾರಣವಾಗಿದೆ. ಈ ಸಂತಸದ ಹಿನ್ನೆಲೆಯಲ್ಲಿ ಕೆರೆಗೆ ಬಾಗಿನ ಸಮರ್ಪಿಸಲು ಮುಂದಾಗಿದ್ದಾರೆ.
–ಮಂಜುನಾಥ ಮಹಾಲಿಂಗಪುರ (ಕುಷ್ಟಗಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್