ಜಾತ್ರೆಗಳಿಂದ ಜನರಲ್ಲಿ ಸಾಮರಸ್ಯ: ಕರಡಿ

•ಧಾರ್ಮಿಕ ಚಟುವಟಿಕೆಗಳಲ್ಲಿ ಏಕಾಗ್ರತೆಯಿಂದ ಪಾಲ್ಗೊಂಡಾಗ ಸಿಗಲಿದೆ ನೆಮ್ಮದಿ

Team Udayavani, May 11, 2019, 1:57 PM IST

kopala-3-tdy..

ಯಲಬುರ್ಗಾ: ಮೊಗಿಬಸವೇಶ್ವರ ಜಾತ್ರೆ ಅಂಗವಾಗಿ ನಡೆದ ಉಪನ್ಯಾಸ ಹಾಗೂ ಜನಪದ ರಸಮಂಜರಿ ಕಾರ್ಯಕ್ರಮಕ್ಕೆ ಸಂಸದ ಸಂಗಣ್ಣ ಕರಡಿ ಚಾಲನೆ ನೀಡಿದರು.

ಯಲಬುರ್ಗಾ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆಗಳಿಂದ ಎಲ್ಲ ಸಮುದಾಯದ ಜನರಲ್ಲಿ ಸಾಮರಸ್ಯ ಮೂಡುತ್ತದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ಪಟ್ಟಣದ ಮೊಗಿಬಸವೇಶ್ವರ ಜಾತ್ರೆ ಅಂಗವಾಗಿ ನಡೆದ ಉಪನ್ಯಾಸ ಹಾಗೂ ಜನಪದ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ನಾವೆಲ್ಲರು ವಿವಿಧ ಕಾರಣಗಳಿಂದ ಒತ್ತಡದಲ್ಲಿ ಜೀವನ ಸಾಗಿಸುತ್ತಿದ್ದೇವೆ. ನಮ್ಮ ಮನಸ್ಸಿಗೆ ಸ್ವಲ್ಪ ನೆಮ್ಮದಿ ಸಿಗಬೇಕಾದರೆ ಧಾರ್ಮಿಕ ಚಟುವಟಿಕೆಗಳಲ್ಲಿ ಏಕಾಗ್ರತೆಯಿಂದ ಪಾಲ್ಗೊಂಡಾಗ ಮಾತ್ರ ಸಾಧ್ಯ. ಇದರಿಂದ ರಚನಾತ್ಮಕ ಚಿಂತನೆಗಳು ಮೂಡುವುದರ ಜತೆಗೆ ಬದಲಾವಣೆಗೆ ಪ್ರೇರಣೆಯಾಗುತ್ತದೆ ಎಂದು ಹೇಳಿದರು.

ಸಮಾಜ ಧರ್ಮದ ತಳಹದಿ ಮೇಲೆ ನಿಂತಿದೆ. ಧರ್ಮ ಜಾಗೃತಗೊಳಿಸಿದ ವಿಶ್ವಗುರು ಬಸವಣ್ಣನವರು ಜಗತ್ತು ಕಂಡ ಮಹಾನ್‌ ಮಾನವತವಾದಿಗಳಾಗಿದ್ದಾರೆ. ಮನುಷ್ಯರ ನಡುವೆ ಸಮಾನತೆ, ಸ್ವಾಮರಸ್ಯ ನೆಲೆಸುವಲ್ಲಿ ಶ್ರಮಿಸಿರುವ ಜಗಜ್ಯೋತಿ ಬಸವಣ್ಣನವರು ಇಡೀ ಮನುಕುಲಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಬಿಜೆಪಿ ಮುಖಂಡ ಸಿ.ಎಚ್. ಪಾಟೀಲ ಮಾತನಾಡಿ, ಇಂದಿನ ಯಾಂತ್ರಿಕ ಬದುಕಿನ ಮಧ್ಯೆಯೂ ಹಿರಿಯರು ಹಿಂದಿನಿಂದ ಆಚರಿಸುತ್ತ ಬಂದಿರುವ ಭಾವೈಕ್ಯತೆ ಜಾತ್ರಾ ಮಹೋತ್ಸವಗಳು ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತವೆ. ಹಿಂದಿನಿಂದಲೂ ನಮ್ಮ ಹಿರಿಯರು ಸಮಿತಿ ನೇಮಕ ಮಾಡಿಕೊಂಡು ಸುಮಾರು ನೂರು ವ‌ರ್ಷಗಳಿಂದ ಜಾತ್ರೆ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಸಿದ್ದರಾಮೇಶ್ವರ ಸ್ವಾಮೀಜಿ, ಇಂದಿನ ಜಗತ್ತಿಗೆ ಬಸವಣ್ಣನವರ ವಚನಗಳು ಅರ್ಥಪೂರ್ಣವಾಗಿವೆ. ಜಾತಿ, ಮತ, ಮೇಲು ಕೀಳು ಎಲ್ಲವನ್ನು ಹೊಡೆದು ಹಾಕಿ ಸಮಾಜದಲ್ಲಿ ಸಮಾನತೆ ತರುವಲ್ಲಿ ಅವರ ಪಾತ್ರ ಹಿರಿಯದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಹಿರಿಯ ಮುಖಂಡ ಬಸವಲಿಂಗಪ್ಪ ಭೂತೆ ಮಾತನಾಡಿ, ಜಾತ್ರಾ ಸಮಿತಿಯವರು ವರ್ಷದಿಂದ ವರ್ಷಕ್ಕೆ ಹೊಸ ಪ್ರತಿಭೆಗಳನ್ನು ಹೊರತರುವ ಜತೆಗೆ ವಿಭಿನ್ನ ಕಾರ್ಯಕ್ರಮ ಆಯೋಜಿಸಿ ಜನರ ಮನಸ್ಸು ತಣಿಸುವ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.

ಕೊಪ್ಪಳದ ಸದಾಶಿವ ಪಾಟೀಲ ಹಾಗೂ ಸಂಗಡಿಗರು ಜನಪದ ಹಾಗೂ ರಸಮಂಜರಿ ಕಾರ್ಯಕ್ರಮ ನಡೆಸಿಕೊಟ್ಟರು.

ಜಾತ್ರಾ ಸಮಿತಿ ಅಧ್ಯಕ್ಷ ಅಮರಪ್ಪ ಕಲಬುರ್ಗಿ, ಸಾಹಿತಿ ಮುನಿಯಪ್ಪ ಹುಬ್ಬಳ್ಳಿ, ಪ್ರಭುರಾಜ ಕಲಬುರ್ಗಿ, ವೀರಣ್ಣ ಹುಬ್ಬಳ್ಳಿ, ದೊಡ್ಡನಗೌಡ ಓಜನಹಳ್ಳಿ, ಸುರೇಶಗೌಡ ಶಿವನಗೌಡ, ಷಣ್ಮಖಪ್ಪ ರಾಂಪುರ, ಬಸವರಾಜ ಅಧಿಕಾರಿ, ಎಸ್‌.ಎನ್‌. ಶ್ಯಾಗೋಟಿ, ಕೆ.ಜಿ. ಪಲ್ಲೇದ, ಎಚ್.ಎಚ್. ಕುರಿ, ಮಲ್ಲಿಕಾರ್ಜುನ ನರೇಗಲ್ಲ, ಸುರೇಶ ಮಾಟೂರ, ವಸಂತ ಭಾವಿಮನಿ, ಈರಪ್ಪ ಬಣಕಾರ, ಕಳಕಪ್ಪ ತಳವಾರ, ಸಿದ್ದರಾಮೇಶ್ವರ ಬೇಲೇರಿ, ಬಸವಲಿಂಗಪ್ಪ ಕೊತ್ತಲ, ಅಮರೇಶ ಹುಬ್ಬಳ್ಳಿ, ಅಶೋಕ ಅರಕೇರಿ ಇದ್ದರು.

ಕಳಕೇಶ ಅರಕೇರಿ ಸ್ವಾಗತಿಸಿದರು. ಶಿಕ್ಷಕ ದೇವಪ್ಪ ವಾಲ್ಮೀಕಿ ನಿರೂಪಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.