30ರೊಳಗೆ ಕಿಸಾನ್ ಸಮ್ಮಾನ್ಗೆ ನೋಂದಣಿ ಮಾಡಿಸಿ
ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕ ಒಟ್ಟು 6 ಸಾವಿರ ರೂ.
Team Udayavani, Jun 24, 2019, 10:31 AM IST
ಕೊಪ್ಪಳ: ಬೆಟಗೇರಿ ಗ್ರಾಮದಲ್ಲಿ ಅಳವಂಡಿ ರೈತ ಸಂಪರ್ಕ ಕೇಂದ್ರದಿಂದ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಜಾಗೃತಿ ಮೂಡಿಸಲಾಯಿತು.
ಕೊಪ್ಪಳ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಎಲ್ಲ ಅರ್ಹ ಪ್ರತಿಯೊಬ್ಬ ರೈತರೂ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕೆಂದು ಅಳವಂಡಿ ರೈತ ಸಂರ್ಪಕ ಕೇಂದ್ರದ ಕೃಷಿ ಅಧಿಕಾರಿ ಯೋಗೇಶ ಕಾಟ್ರಳ್ಳಿ ಹೇಳಿದರು.
ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಎಲ್ಲಾ ರೈತರು ಅರ್ಹರು. ಈ ಅರ್ಜಿ ಫಾರಂ ಜೊತೆಗೆ ಆಧಾರ್ ಕಾರ್ಡ್, ಪಹಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಪ್ರತಿಗಳನ್ನು ಸಲ್ಲಿಸಬೇಕೆಂದರು.
ಈ ವೇಳೆ ಗ್ರಾಪಂ ಪಿಡಿಒ ಬಸವರಾಜ ತವದಿ ಮಾತನಾಡಿ, ರೈತರು ರೈತ ಸಂಪರ್ಕ ಕೆಂದ್ರ, ಗ್ರಾಮ ಪಂಚಾಯತ್ ಅಥವಾ ಕಾಮನ್ ಸರ್ವಿಸ್ ಸೆಂಟರ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಮೂರು ಕಂತಿನ ಮೂಲಕ ರೈತರಿಗೆ ಆರು ಸಾವಿರ ರೂಪಾಯಿ ಸರಕಾರದಿಂದ ದೊರೆಯಲಿದೆ ಎಂದರು.
ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ, ಅಂದಪ್ಪ ವಾಲಿಕಾರ ಏಳುಕೊಟೇಶ ಕೊಮಲಾಪೂರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!