3ನೇ ಡೋಸ್‌ ಲಸಿಕೆ ಪಡೆಯಲು ನಿರಾಸಕ್ತಿ

ಕೋವಿಡ್‌ ಭಯ ಮರೆತ ಜಿಲ್ಲೆ ಜನ ; ಸದ್ಯ 2 ಲಕ್ಷ ಜನರಷ್ಟೇ ಲಸಿಕೆ ಪಡೆದವರು ; ಮನೆ ಮನೆ ತೆರಳಿದರೂ ಸ್ಪಂದಿಸದ ಜನತೆ

Team Udayavani, Oct 29, 2022, 9:10 AM IST

5

ಕೊಪ್ಪಳ: ಕಳೆದ ಕೋವಿಡ್‌ ಸಂದರ್ಭದಲ್ಲಿ ಆಸ್ಪತ್ರೆಗಳ ಮುಂದೆ ನಾ ಮುಂದು ತಾ ಮುಂದು ಎಂದು ಸರದಿ ಸಾಲಿನಲ್ಲಿ ನಿಂತು ಲಸಿಕೆ ಹಾಕಿಸಿಕೊಳ್ಳುತ್ತಿದ್ದ ಜನರೀಗ ಕೋವಿಡ್‌ ಸೋಂಕಿನ ಆರ್ಭಟ ಕಡಿಮೆಯಾದ ಬಳಿಕ 3ನೇ ಡೋಸ್‌ ಪಡೆಯಲು ನಿರಾಸಕ್ತಿ ತೋರಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಈವರೆಗೂ 2 ಲಕ್ಷ ಜನರಷ್ಟೇ 3ನೇ ಡೋಸ್‌ ಲಸಿಕೆ ಪಡೆದಿದ್ದು, 6 ಲಕ್ಷ ಜನರು ಲಸಿಕೆ ಪಡೆಯುವುದು ಬಾಕಿಯಿದೆ.

ಜಿಲ್ಲೆಯಲ್ಲಿ ಕಳೆದ ಎರಡು ವರ್ಷದ ಅವಧಿಯಲ್ಲಿ ಜನತೆ ಕೋವಿಡ್‌ ಆತಂಕದಲ್ಲಿಯೇ ಜೀವನವನ್ನ ಸಾಗಿಸಿದ್ದರು. ಲಸಿಕೆ ಪಡೆಯಿರಿ ಎಂದು ಹೇಳಿದಾಕ್ಷಣ ಆಸ್ಪತ್ರೆಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ಲಸಿಕೆ ಪಡೆದಿದ್ದರು. ಕೋವಿಡ್‌ ಬಗ್ಗೆ ಜಾಗೃತರಾಗಿರಿ ಎಂದು ಸರ್ಕಾರ ಹೇಳಿದಾಕ್ಷಣ ಅತ್ಯಂತ ಕಟ್ಟುನಿಟ್ಟಿನ ನಿಯಮ ಪಾಲನೆ ಮಾಡಿದ್ದರು. ಆದರೆ ಈಗ ಅದೇ ಜನರು 3ನೇ ಡೋಸ್‌ ಪಡೆಯುವಲ್ಲಿ ಆಸಕ್ತಿಯೇ ಇಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೊದಲೆರಡು ಡೋಸ್‌ಗಳನ್ನ ಜಿಲ್ಲೆಯ ಜನರಲ್ಲಿ ಆದ್ಯತೆ ಮೇರೆಗೆ ಲಸಿಕೆ ಹಾಕಿದೆ. 18 ವರ್ಷ ಮೇಲ್ಪಟ್ಟ ಹಾಗೂ 59 ವರ್ಷದೊಳಗಿನ ಪ್ರತಿಯೊಬ್ಬರೂ 3ನೇ ಡೋಸ್‌ ಲಸಿಕೆ ಪಡೆಯಿರಿ ಎಂದೆನ್ನುತ್ತಿದೆ. ಜನರಲ್ಲೂ ಜಾಗೃತಿ ಮೂಡಿಸುತ್ತಿದೆ. ಈ ಲಸಿಕೆ ಪಡೆಯುವುದರಿಂದ ಜನರಲ್ಲಿ ನಿರೋಧಕ ಶಕ್ತಿ ಹೆಚ್ಚಾಗಿ ಯಾವು ಸೋಂಕು ತೊಂದರೆ ಮಾಡಲ್ಲ ಎಂದು ಜಾಗೃತಿ ಮೂಡಿಸುತ್ತಿದೆ. ಆದರೆ ಜನರಲ್ಲಿ ಮೂರನೇ ಡೋಸ್‌ ಪಡೆಯಲು ಆಸಕ್ತಿ ತೋರುತ್ತಿಲ್ಲ.

ಪ್ರಸ್ತುತ ಜಿಲ್ಲಾ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 3ನೇ ಡೋಸ್‌ ಅನ್ನು ಕೊಪ್ಪಳ ತಾಲೂಕು-82819, ಕುಷ್ಟಗಿ -72501, ಯಲಬುರ್ಗಾ-63863, ಗಂಗಾವತಿ-66879 ಜನರು ಸೇರಿದಂತೆ ಒಟ್ಟಾರೆ ಈ ವರೆಗೂ 2,86,062 ಜನರು 3ನೇ ಡೋಸ್‌ ಲಸಿಕೆ ಪಡೆದಿದ್ದಾರೆ. ಆದರೆ ಮಾಹಿತಿಯ ಪ್ರಕಾರ 6,69,699 ಜನರು 3ನೇ ಡೋಸ್‌ ಲಸಿಕೆ ಪಡೆಯಬೇಕಿದೆ. ಕೊಪ್ಪಳ ತಾಲೂಕಿನಲ್ಲಿ 1,95,479, ಕುಷ್ಟಗಿ-1,26,694, ಯಲಬುರ್ಗಾ-1,13,969, ಗಂಗಾವತಿ-2,33,567 ಸೇರಿದಂತೆ 6,69,699 ಜನರು ಲಸಿಕೆಯನ್ನು ಪಡೆಯಬೇಕಿದೆ. ಈ ಪೈಕಿ ಗಂಗಾವತಿ ತಾಲೂಕಿನಲ್ಲಿಯೇ ಹೆಚ್ಚು ಜನರು ಮೂರನೇ ಡೋಸ್‌ ಪಡೆಯುವಲ್ಲಿ ನಿರಾಸಕ್ತಿ ತೋರುತ್ತಿದ್ದಾರೆ.

ಕೋವಿಡ್‌ ಭಯವೇ ಮರೆತ ಜನತೆ: ರಾಜ್ಯದ ಇತರೆ ಜಿಲ್ಲೆಗಳ ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಕೊಪ್ಪಳ ಜಿಲ್ಲೆಯೇ 3ನೇ ಡೋಸ್‌ ಲಸಿಕೆ ಹಾಕುವಲ್ಲಿ ಉತ್ತಮ ಎಂದೆನಿಸಿದೆ. ಯಾದಗಿರಿ ಮೊದಲ ಸ್ಥಾನದಲ್ಲಿದ್ದರೆ, ಕೊಪ್ಪಳ 2ನೇ ಸ್ಥಾನದಲ್ಲಿದೆ. ಇದು ಸ್ವಲ್ಪ ನೆಮ್ಮದಿಯ ವಿಚಾರವಾಗಿದೆ. ಆದರೆ ಜಿಲ್ಲೆಯ ಜನತೆ ಕೋವಿಡ್‌ ಭಯವನ್ನೇ ಮರೆತು ಲಸಿಕೆಯನ್ನೂ ಪಡೆಯುವಲ್ಲಿ ನಿರಾಸಕ್ತಿ ತೋರುತ್ತಿದ್ದಾರೆ. ಈಗೆಲ್ಲ ಕೋವಿಡ್‌ ಇಳಿಮುಖವಾಗಿದೆ. ಮತ್ತ್ಯಾಕೆ 3ನೇ ಡೋಸ್‌ ಲಸಿಕೆ ಪಡೆಯಬೇಕು ಎನ್ನುವ ನಿರ್ಲಕ್ಷ್ಯ ಭಾವನೆ ತಾಳುತ್ತಿದ್ದಾರೆ. ಆದರೂ ಸಹಿತ ಜಿಲ್ಲಾ ಆರೋಗ್ಯ ಇಲಾಖೆ 310 ತಂಡವು ಮನೆ ಮನೆಗೆ ವಾರದಲ್ಲಿ ಒಂದು ದಿನ ತೆರಳಿ ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡುತ್ತಿದೆ.

ಜಿಲ್ಲೆಯಲ್ಲಿ 3ನೇ ಡೋಸ್‌ ಲಸಿಕೆಯನ್ನು ಆಸ್ಪತ್ರೆಗಳಲ್ಲಿ ಹಾಕಲಾಗುತ್ತಿದೆ. ವಾರದಲ್ಲಿ ಒಂದು ದಿನ ತಮ್ಮ ತಂಡವು ಮನೆ ಮನೆಗೆ ತೆರಳಿ ಲಸಿಕೆ ಹಾಕುತ್ತಿದೆ. ಈಗ ಕೋವಿಡ್‌ ಇಳಿಮುಖವಾಗಿದ್ದು, ಜನರಲ್ಲಿ ಭಯ ದೂರವಾಗಿದೆ. ಹಾಗಾಗಿ ಜನರು 3ನೇ ಡೋಸ್‌ ಲಸಿಕೆ ಪಡೆಯಲು ಆಸಕ್ತಿ ತೋರುತ್ತಿಲ್ಲ. ನಾವು ಅವರಿಗೆ ಮನವರಿಕೆ ಮಾಡಿ ಲಸಿಕೆ ಹಾಕುತ್ತಿದ್ದೇವೆ.  -ಡಾ| ಪ್ರಕಾಶ, ಆರ್‌ಸಿಎಚ್‌ ಅಧಿಕಾರಿ

„ದತ್ತು ಕಮ್ಮಾರ

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.