ಶಾಲೆ ಆರಂಭಿಸದಿದ್ದರೆ ಸಮಾರಂಭಕ್ಕೆ ಬಾಡಿಗೆ!

ಶಿಕ್ಷಕರಿಗೆ ವೇತನಕ್ಕೂ ಸಂಕಷ್ಟ | ಶಾಲಾರಂಭಕ್ಕೆ ನೀತಿ ರೂಪಿಸಿ, ಇಲ್ಲವೇ ಶೂನ್ಯ ವರ್ಷವೆಂದು ಘೋಷಿಸಿ

Team Udayavani, Dec 17, 2020, 2:39 PM IST

ಶಾಲೆ ಆರಂಭಿಸದಿದ್ದರೆ ಸಮಾರಂಭಕ್ಕೆ ಬಾಡಿಗೆ!

ಕೊಪ್ಪಳ: ಕೋವಿಡ್‌-19 ಉಲ್ಬಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳನ್ನು ಬಂದ್‌ ಮಾಡಿ ಬರೋಬ್ಬರಿ 8 ತಿಂಗಳು ಗತಿಸಿವೆ. ಸರ್ಕಾರಿ ಶಾಲೆಗಳ ರೋದನೆ ಒಂದಡೆಯಾದರೆ, ಖಾಸಗಿ ಶಾಲೆಗಳ ಸಮಸ್ಯೆ ಮತ್ತೂಂದು ಕಡೆಯಾಗಿದೆ. ಖಾಸಗಿ ಶಾಲೆ ಮಾಲೀಕನೋರ್ವ ಶಾಲೆ ಆರಂಭಿಸದಿದ್ದರೆ ನಾವು ಶಿಕ್ಷಕರ ವೇತನ ಭರಿಸಲು ಮದುವೆ ಕಾರ್ಯಗಳಿಗ  ಶಾಲೆ ಬಾಡಿಗೆಯನ್ನಾದರೂ ಕೊಡುತ್ತೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಸರ್ಕಾರ ಕೋವಿಡ್‌ ನಿಯಂತ್ರಣದ ಬಳಿಕ ಎಲ್ಲ ಉದ್ಯಮವನ್ನೂ ಆರಂಭಿಸಿದೆ. ಕಾಲೇಜು ಆರಂಭಿಸಿ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಿದೆ. ಆದರೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆರಂಭಿಸಲು ಮನಸ್ಸು ಮಾಡುತ್ತಿಲ್ಲ.

ಯಾವುದೇ ನಿರ್ಧಾರ ಸ್ಪಷ್ಟವಾಗದೇ ಇರುವುದು ಪಾಲಕರಲ್ಲೂ ಗೊಂದಲಕ್ಕೆ ಕಾರಣವಾಗಿದೆ. ಸರ್ಕಾರ ಯಾರದೋ ತಪ್ಪು ಕಲ್ಪನೆಯಿಂದಾಗಿ ವಿದ್ಯಾಗಮ, ವಠಾರ ಶಾಲೆ ಆರಂಭಿಸಿ ಕೊನೆಯ ಹಂತಕ್ಕೆ ಕೈ ಬಿಟ್ಟಿದೆ. ಹೀಗೆ ಆದರೆ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ವಿದ್ಯಾರ್ಥಿಗಳು ಈ ಹಿಂದಿನ ತರಗತಿಯಲ್ಲಿ ಅಭ್ಯಾಸ ಮಾಡಿದ ಪಠ್ಯವನ್ನೇ ಮರೆಯುತ್ತಿದ್ದಾರೆ.

ಕೆಲ ಪಾಲಕರು ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳಿಸುತ್ತಿದ್ದಾರೆ. ಇದರಿಂದ ಮಗು ಕಲಿಕೆಯಿಂದ ದೂರ ಉಳಿಯುವ ಸಾಧ್ಯತೆ ಹೆಚ್ಚಿದೆ. ಸರ್ಕಾರ ಸರ್ಕಾರಿ ಶಾಲೆ ಆರಂಭಿಸಿದೆ. ಆದರೆ ಮಕ್ಕಳ ಹಾಜರಾತಿಗೆ ಕೊಕ್ಕೆ ಹಾಕಿದೆ. ಪ್ರತಿದಿನ ಸರ್ಕಾರಿ ಶಾಲೆ ಶಿಕ್ಷಕರು ಶಾಲೆಗೆ ಹಾಜರಾಗಿ ಸುಮ್ಮನೆ ಕುಳಿತು ಸಂಜೆ ಮನೆಗೆ ತೆರಳುತ್ತಿದ್ದಾರೆ. ಅವರಿಗೆ ಬೋಧನೆ ಮಾಡಲು ಮಕ್ಕಳಿಲ್ಲ. ಮಕ್ಕಳು ಶಿಕ್ಷಣ ಪಡೆಯಲು ಸರ್ಕಾರ ಅನುಮತಿ ನೀಡಿಲ್ಲ.

ಇನ್ನು ಖಾಸಗಿ ಶಾಲೆಗಳ ಸ್ಥಿತಿಯೂ ಇದೇ ಆಗಿದೆ. ಸರ್ಕಾರ ಶಾಲೆಗಳನ್ನು ಆರಂಭಿಸಲಿ. ಇಲ್ಲವೇ ಶೂನ್ಯ ವರ್ಷವೆಂದು ಘೋಷಿಸಿ ಮುಂದಿನ ವರ್ಷಕ್ಕೆ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಿ. ಈ ಕುರಿತಂತೆ ಮನವಿ ಸಲ್ಲಿಸಿ, ಪ್ರತಿಭಟನೆಯನ್ನೂ ಮಾಡಲಾಗಿದೆ. ಆದರೆ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ. ಇತ್ತ ಶೂನ್ಯ ವರ್ಷವೆಂದೂ ಘೋಷಿಸುತ್ತಿಲ್ಲ.

ಇದನ್ನೂ ಓದಿ:ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಫೈರಿಂಗ್ ಪ್ರಕರಣ: ಸಮಸ್ಯೆ ಬಗೆಹರಿಸಲಾಗುವುದು ಎಂದ ಡಿಕೆಶಿ

ಅತ್ತ ಶಾಲೆ ಆರಂಭಿಸುತ್ತೇವೆ ಎನ್ನುವ ಸ್ಪಷ್ಟ ಸಂದೇಶವನ್ನೂ ನೀಡುತ್ತಿಲ್ಲ. ಅಡ್ಡಗೋಡೆ ಮೇಲೆ ದೀಪವನ್ನಿಟ್ಟಂತೆ ಈ ತಿಂಗಳು, ಮುಂದಿನ ತಿಂಗಳು ಶಾಲೆ ಆರಂಭಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳುತ್ತಲೇ ಇದ್ದಾರೆ. ಆನ್‌ ಲೈನ್‌ ತರಗತಿಗಳು ಮಕ್ಕಳಿಗೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಸ್ವತಃ ಪಾಲಕ ವರ್ಗವೇ ಆಪಾದನೆ ಮಾಡುವಂತಾಗಿದೆ.

ಇನ್ನು ಕೊಪ್ಪಳದಲ್ಲಿ ಖಾಸಗಿ ಶಾಲೆ ಮಾಲೀಕ ಶಿವಕುಮಾರ ಎನ್ನುವವರು ಶಿಕ್ಷಣ ಸಚಿವ ಸುರೇಶಕುಮಾರ ಅವರ ನಡೆಯ ವಿರುದ್ಧ ಹರಿಹಾಯ್ದು ಶಾಲೆಗಳನ್ನು ಆರಂಭಿಸಿ, ಇಲ್ಲದಿದ್ದರೆ ನಾವು ಶಾಲೆಗಳನ್ನು ಮದುವೆ ಕಾರ್ಯಕ್ರಮಕ್ಕೆ ಬಾಡಿಗೆಯನ್ನಾದರೂ ಕೊಡುತ್ತೇವೆ. ಬಾಡಿಗೆ ಹಣದಲ್ಲಾದರೂ ನಮ್ಮ ಶಿಕ್ಷಕರಿಗೆ ವೇತನ ನೀಡಿ ಅವರ ಜೀವನ ನಡೆಸಲು ನೆರವಾಗುತ್ತೇವೆ. ಸರ್ಕಾರ ದೃಢ ನಿರ್ಧಾರ ಕೈಗೊಳ್ಳದೆ ವಿಳಂಬ ಮಾಡುತ್ತಿರುವುದು ತರವಲ್ಲ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಶಾಲೆಗಳನ್ನು ಆರಂಭಿಸಲು ಮೀನಮೇಷ ಎಣಿಸುತ್ತಿದೆ. ಶಾಲೆ ಆರಂಭಿಸದಿದ್ದರೆ ಶೂನ್ಯ ವರ್ಷವೆಂದು ಘೋಷಣೆ ಮಾಡಲಿ. ಇಲ್ಲವೇ ಶಾಲೆ ಆರಂಭಿಸಿ, ಒಂದು ನೀತಿಯನ್ನು ರೂಪಿಸಲಿ. ಗೊಂದಲದ ಹೇಳಿಕೆ ನೀಡಿದ್ರೆ ನಮಗೂ ಕಷ್ಟವಾಗಲಿದೆ. ಶಾಲೆ ಆರಂಭಿಸದಿದ್ದರೆ ನಾವು ನಮ್ಮ ಶಾಲಾ ಕಟ್ಟಡಗಳನ್ನು ಮದುವೆ, ಮುಂಜಿ ಕಾರ್ಯಕ್ಕಾದರೂ ಬಾಡಿಗೆ ಕೊಡುತ್ತೇವೆ. ಅದರಿಂದ ಬರುವ ಬಾಡಿಗೆ ಹಣದಲ್ಲಾದರೂ ಶಿಕ್ಷಕರ ವೇತನ ಕೊಡುತ್ತೇವೆ.

ಶಿವಕುಮಾರ ಕುಕನೂರು, ಖಾಸಗಿ ಶಾಲೆ ಮಾಲೀಕ ಕೊಪ್ಪಳ

ದತ್ತು ಕಮ್ಮಾರ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.