ಒತ್ತುವರಿ ತೆರವಿಗೆ ಆಗ್ರಹ
Team Udayavani, Dec 12, 2019, 3:34 PM IST
ಗಂಗಾವತಿ: ನಗರದ ಮಹಾತ್ಮ ಗಾಂಧಿ ವೃತ್ತ ಸೇರಿ ಪ್ರಮುಖ ವೃತ್ತಗಳಲ್ಲಿ ನಗರಸಭೆಯ ಫುಟ್ಪಾತ್ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಕರವೇ (ಪ್ರವೀಣ ಶೆಟ್ಟಿ) ಬಣದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಮೃತ್ ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ ಫುಟ್ಪಾತ್ ಜಾಗೆ ಒತ್ತುವರಿ ಮಾಡಿ ಅಂಗಡಿ ಸಾಮಾನು ಇರಿಸಲಾಗುತ್ತಿದೆ. ಕೇಂದ್ರ ಬಸ್ ನಿಲ್ದಾಣದ ಎದುರಿಗಿದ್ದ ಬಡ ಮತ್ತು ಸಣ್ಣ ವ್ಯಾಪಾರಿಗಳನ್ನು ಒಕ್ಕಲೆಬಿಸಲಾಗುತ್ತಿದೆ. ಆಟೋಚಾಲಕರಿಗೆ ಆಟೋ ನಿಲ್ಲಿಸಲು ಜಾಗ ಕೊಡುತ್ತಿಲ್ಲ. ನಗರದಲ್ಲಿ ಅಮೃತ ಸಿಟಿ ಯೋಜನೆಯಲ್ಲಿ ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದ್ದು ಕಾಮಗಾರಿ ಕಳಪೆಯಾಗಿವೆ.
ಜಿಲ್ಲಾಡಳಿತದ ನೆಪ ಹೇಳಿ ನಗರಸಭೆ ಫುಟ್ಪಾತ್ ವ್ಯಾಪಾರಿಗಳಿಗೆ ಜಾಗೆ ಖಾಲಿ ಮಾಡಿಸಿ ತೊಂದರೆ ನೀಡಲಾಗುತ್ತಿದೆ. ಸಿಬಿಎಸ್ ವೃತ್ತದಿಂದ ಗಾಂಧಿ ಸರ್ಕಲ್ವರೆಗೆ ಫುಟ್ಪಾತ್ ನಿರ್ಮಾಣಗೊಂಡಿದ್ದು, ಈ ಫುಟ್ ಪಾತ್ ಯಾವುದೇ ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ನಿರ್ಮಿಸಿಲ್ಲ. ಶ್ರೀಮಂತರ ಮಳಿಗೆಗಳ ಮೆಟ್ಟಿಲುಗಳಿಗಾಗಿ ನಿರ್ಮಾಣವಾಗಿದೆ. ರಸ್ತೆ ಅಗಲೀಕರಣ ವಿಷಯದಲ್ಲಿ ನಗರಸಭೆ ತಾರತಮ್ಯ ನೀತಿ ಅನುಸರಿಸಿರುವುದು ಕಂಡುಬಂದಿದೆ. ಕಳಪೆ ಕಾಮಗಾರಿ ಕೂಡಲೇ ನಿಲ್ಲಿಸಬೇಕು. ಆಟೋದವರಿಗೆ ನಿಲ್ದಾಣದ ವ್ಯವಸ್ಥೆ ಮಾಡಬೇಕು. ಗೂಡಂಗಡಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಪಂಪಣ್ಣ ನಾಯಕ, ಹುಸೇನಸಾಬ್, ಮಹೇಂದ್ರ, ಶಂಕರ ಪೂಜಾರಿ, ಹುಲುಗಪ್ಪ ಹಸೇನಸಾಬ್, ಸಿದ್ದು ನಾಯಕ, ಅಫ್ಜಲ್, ಕೃಷ್ಣ, ಪರಶುರಾಮ, ಅಂಜಿ ಪೂಜಾರಿ ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ