ಕುಷ್ಟಗಿ: ಪಾಳು ಬಾವಿಗೆ ಬಿದ್ದ ಕತ್ತೆ ಕಿರುಬ ರಕ್ಷಣೆ


Team Udayavani, Sep 12, 2022, 11:01 AM IST

3

ಕುಷ್ಟಗಿ: ಅಹಾರ ಹುಡುಕಾಟದಲ್ಲಿ ಪಾಳುಬಾವಿಯಲ್ಲಿ ಬಿದ್ದು ಕಂಗಾಲಾಗಿದ್ದ ಕತ್ತೆ ಕಿರುಬ (ಹೈನಾ) ವನ್ಯಜೀವಿಯನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಕಾರ್ಯಾಚರಣೆಯಿಂದ ಜೀವಂತ ರಕ್ಷಿಸಿ ಮಾನವೀಯತೆ ಮೆರೆದ ಘಟನೆ ಕುಷ್ಟಗಿ ತಾಲೂಕು ಕಬ್ಬರಗಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕಬ್ಬರಗಿ ಸೀಮಾದ ರೈತ ಭೀಮಪ್ಪ ಯಮನಪ್ಪ ವಜ್ಜಲ ಇವರ ಜಮೀನಿನ ಪಾಳು ಬಾವಿಯಲ್ಲಿ ಕತ್ತೆ ಕಿರುಬ ಕಾಲು ಜಾರಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಠಾಣಾ ಸಿಬ್ಬಂದಿ ಸದರಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

ಆರಂಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಂದಿ ಬಲೆ ಸಹಾಯದಿಂದ ಹುಕ್ಕು ಬಳಸಿ ಬಾವಿಯಿಂದ ಮೇಲೆಕ್ಕೆತ್ತುವ ಕಾರ್ಯಾಚರಣೆ ನಡೆಸಲು ತೀರ್ಮಾನಿಸಿದ್ದರು. ಈ ರೀತಿ ಕಾರ್ಯಾಚರಣೆ ಫಲಿಸುವುದಿಲ್ಲ, ಪ್ರಾಣಿಗೆ ಅಪಾಯದ ಸಾದ್ಯತೆ ಇರುವ ಹಿನ್ನೆಲೆಯಲ್ಲಿ ಗದಗ ಬಿಂಕದಕಟ್ಟಿ ಮೃಗಾಲಯದ ಅರವಳಿಕೆ ತಜ್ಞ ಡಾ. ನಿಖಿಲ್ ಅವರನ್ನು ಕರೆಯಿಸುವ ಕ್ರಮವನ್ನು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಚೈತ್ರಾ ಮೆಣಸಿನಕಾಯಿ ಕ್ರಮ ಕೈಗೊಂಡರು.

ತೆರದ ಪಾಳು ಬಾವಿಯಲ್ಲಿಯೇ ಮಳೆಯಲ್ಲಿ ನೆನೆದು ಕಂಗಾಲಾಗಿದ್ದ ಕತ್ತೆ ಕಿರುಬ ಪ್ರಾಣಿಗೆ ಡಾ. ನಿಖಿಲ ಅರವಳಿಕೆ ಅವರಿಂದ ಚುಚ್ಚುಮದ್ದು ನೀಡಿ ಪ್ರಜ್ಞೆ ತಪ್ಪಿಸಲಾಯಿತು. ನಂತರ ಸ್ಟೇಚರ್ ಬಾವಿಯಲ್ಲಿ ಇಳಿಸಿ, ಪ್ರಜ್ಞಾಹೀನ ಕತ್ತೆ ಕಿರುಬ ಪ್ರಾಣಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಯಿತು.

ನಂತರ ಪ್ರಾಥಮಿಕ ಚಿಕಿತ್ಸೆ ನೀಡಿ ಗದಗ ಸಮೀಪದ ಬಿಂಕದಕಟ್ಟಿ ಮೃಗಾಲಯಕ್ಕೆ ಬೋನ್ ನಲ್ಲಿ‌ ಕೊಂಡೊಯ್ಯಲಾಯಿತು. ನಿರಂತರ ಮಳೆಯಲ್ಲಿ ಎರಡ್ಮೂರು ತಾಸಿಗೂ ಅಧಿಕ ನಡೆದ ಕಾರ್ಯಾಚರಣೆಯಲ್ಲಿ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಚೈತ್ರಾ ಮೆಣಸಿನಕಾಯಿ, ಅಗ್ನಿ ಶಾಮಕ ಠಾಣಾಧಿಕಾರಿ ರಾಜು ಎನ್. ಸೇರಿದಂತೆ ಅರಣ್ಯಾಧಿಕಾರಿಗಳು, ಅಗ್ನಿ ಶಾಮಕ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕುಷ್ಟಗಿ ತಾಲೂಕಿನ ಹನುಮಸಾಗರ ವಲಯದ ಕಬ್ಬರಗಿ ಹಾಗೂ ತಾವರಗೇರಾ ವಲಯದ ಕುಮಾರಖೇಡ್ ಪ್ರದೇಶದಲ್ಲಿ ವನ್ಯಜೀವಿ ಕತ್ತೆ ಕಿರುಬಗಳಿವೆ. ಇವು ಒಂಟಿಯಾಗಿ ಸಂಚರಿಸುವುದಿಲ್ಲ. ಗುಂಪಾಗಿ ಸಂಚರಿಸುತ್ತಿವೆ.

ರಕ್ಷಿತಾರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಊರಿನಲ್ಲಿರುವ ನಾಯಿ ಇಲ್ಲವೇ ಸತ್ತ ಪ್ರಾಣಿಗಳ ಅಹಾರಕ್ಕಾಗಿ ಅಲೆಯುತ್ತಿರುತ್ತವೆ. ಕತ್ತೆ ಕಿರುಬಗಳು ಅಹಾರ ಹುಡುಕುತ್ತಿರುವಾಗ ಒಂದು ಕತ್ತೆ ಕಿರುಬ ತೆರೆದ ಬಾವಿಯಲ್ಲಿ ಬಿದ್ದಿದೆ. ಈ ಬಾವಿಯನ್ನು ಕಲ್ಲಿನಲ್ಲಿ ಕಟ್ಟಿದ್ದರಿಂದ ಕತ್ತೆಕಿರುಬಕ್ಕೆ  ಮೇಲಕ್ಕೆ ಹತ್ತಲು ಸಾಧ್ಯವಾಗಿಲ್ಲ ಎಂದು ಉಪ ವಲಯ ಅರಣ್ಯಾಧಿಕಾರಿ ಶಿವಶಂಕರ್‌ ಯಾವಣಕಿ‌ ಮಾಹಿತಿ ನೀಡಿದರು. ಅಪರೂಪದ ವನ್ಯಜೀವಿ ಕತ್ತೆ ಕಿರುಬ ಪ್ರಾಣಿಯನ್ನು ಜೀವಂತವಾಗಿ ರಕ್ಷಿಸಿದ ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಗೆ ವನ್ಯಜೀವಿ ಪ್ರೇಮಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.