ಜಿಪಂ ಅಧ್ಯಕ್ಷ -ಉಪಾಧ್ಯಕ್ಪರ ರಾಜೀನಾಮೆ?


Team Udayavani, Oct 25, 2018, 5:01 PM IST

25-october-21.gif

ಕೊಪ್ಪಳ: ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ರಾಜೀನಾಮೆ ಪ್ರಹಸನದ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಒಳ ಒಪ್ಪಂದದ ಲೆಕ್ಕಾಚಾರದಂತೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುತ್ತಾರೆ ಎನ್ನಲಾಗುತ್ತಿದ್ದರೂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಮಾತ್ರ ಇದೆಲ್ಲ ಸುಳ್ಳು ಎನ್ನುವ ಮಾತನ್ನಾಡಿದ್ದಾರೆ.

ಹೌದು.. 2016ರಲ್ಲಿ ನಡೆದ ಜಿಪಂ ಪಂಚಾಯಿತಿ ಚುನಾವಣೆ ನಡೆದಿದೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುತವಿದೆ. ಆರಂಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಎಸ್‌.ಬಿ. ನಾಗರಳ್ಳಿ ಅವರು ಒಂದು ವರ್ಷದ ಅವಧಿಗೆ ಅಧ್ಯಕ್ಷ ಸ್ಥಾನದ ದರ್ಬಾರ್‌ ನಡೆಸಿ ಏಕಾಏಕಿ ಬೆಂಗಳೂರಿಗೆ ತೆರಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದಾದ ಬೆನ್ನಲ್ಲೇ ರಾಜಶೇಖರ ಹಿಟ್ನಾಳ ಅವರನ್ನು ಅಧ್ಯಕ್ಷ ಸ್ಥಾನದ ಪಟ್ಟಕ್ಕೇರಿಸಲಾಗಿತ್ತು. ಆದರೆ ಉಪಾಧ್ಯಕ್ಷರಾಗಿದ್ದ ಲಕ್ಷ್ಮವ್ವ ನೀರಲೂಟಿ ಅವರು ತಮ್ಮ ಸ್ಥಾನದಲ್ಲೇ ಮುಂದುವರಿದಿದ್ದರು. ತಲಾ 30 ತಿಂಗಳು ಸ್ಥಾನ ಹಂಚಿಕೆಯ ಒಳ ಒಪ್ಪಂದ ನಡೆದಿತ್ತು ಎನ್ನಲಾಗಿದೆ.

ಒಳ ಒಪ್ಪಂದವೇನು?: ಜಿಪಂನಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದೆ. ಹೀಗಾಗಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳೆರಡನ್ನೂ ಐದು ವರ್ಷದಲ್ಲಿ ತಲಾ ಎರಡೂವರೆ ವರ್ಷ ಕೊಪ್ಪಳ ಹಾಗೂ ಗಂಗಾವತಿ ತಾಲೂಕಿನ ಜಿಪಂ ಕ್ಷೇತ್ರದ ಸದಸ್ಯರಿಗೆ ಅವಕಾಶ ಮಾಡಿಕೊಡಬೇಕೆಂದು ಒಳ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಈ ಹಿಂದೆ ಸಚಿವರಾಗಿದ್ದ ಶಿವರಾಜ ತಂಗಡಗಿ, ಶಾಸಕರಾಗಿದ್ದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರಡ್ಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ ಹಾಗೂ ಅಮರೇಗೌಡ ಬಯ್ನಾಪೂರ ಅವರ ನೇತೃತ್ವದಲ್ಲೇ ಎರಡೂವರೆ ವರ್ಷ ಕೊಪ್ಪಳಕ್ಕೆ ಅಧ್ಯಕ್ಷ ಸ್ಥಾನ, ಗಂಗಾವತಿಗೆ ಉಪಾಧ್ಯಕ್ಷ ಸ್ಥಾನ ಹಂಚಿಕೆ ಮಾಡುವ ಮಾತಾಗಿತ್ತಂತೆ. ಹಾಗಾಗಿ ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಗಂಗಾವತಿ ಜಿಪಂ ಸದಸ್ಯರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಬೇಕು ಎನ್ನುವ ಕೂಗು ಕೇಳಿ ಬಂದಿದೆ.

ಒಳ ಒಪ್ಪಂದದ ಪ್ರಕಾರ, ಎರಡೂವರೆ ವರ್ಷದಲ್ಲಿ ಒಂದು ವರ್ಷ ಸದಸ್ಯ ಎಸ್‌.ಬಿ. ನಾಗರಳ್ಳಿ ಅಧ್ಯಕ್ಷ ಸ್ಥಾನದ ಅಧಿಕಾರ ನಿರ್ವಹಿಸಿದ್ದರು. ಅವರು ರಾಜೀನಾಮೆ ನೀಡಿದ ತರುವಾಯ ರಾಜಶೇಖರ ಹಿಟ್ನಾಳ ಸತತ 15 ತಿಂಗಳು ಅಧ್ಯಕ್ಷರಾಗಿದ್ದಾರೆ. ಉಳಿದ ಅವಧಿಯಲ್ಲಿ ಗಂಗಾವತಿ ಜಿಪಂ ಸದಸ್ಯರಿಗೆ ಅಧ್ಯಕ್ಷ ಸ್ಥಾನದ ಅವಧಿ  ಬಿಟ್ಟು ಕೊಡಬೇಕು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಆದರೆ ಅಧ್ಯಕ್ಷ ರಾಜಶೇಖರ ಹಿಟ್ನಾಳ ಇದನ್ನು ಸಂಪೂರ್ಣ ಅಲ್ಲಗಳೆದಿದ್ದಾರೆ. ಒಂದು ವೇಳೆ ರಾಜಕೀಯ ಏರಿಳಿತದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ರಾಜೀನಾಮೆ ಕೊಟ್ಟಿದ್ದೇ ಆದರೆ ಗಂಗಾವತಿ ತಾಲೂಕಿನ ಜಿಪಂ ಸದಸ್ಯ ವಿಶ್ವನಾಥರಡ್ಡಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಉಪಾಧ್ಯಕ್ಷ ಸ್ಥಾನ ಕೊಪ್ಪಳದ ಪಾಲಾಗಲಿದೆ ಎನ್ನವು ಚರ್ಚೆ ಮತ್ತೊಂದು ಕಡೆ ನಡೆದಿದೆ. ಈ ರಾಜೀನಾಮೆ ಪ್ರಹಸನ ಕಳೆದ ಹಲವು ದಿನಗಳಿಂದ ಕೇಳಿ ಬಂದು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ನಾನು ರಾಜೀನಾಮೆ ಕೊಡುತ್ತೇನೆ ಎನ್ನುವುದು ಸುಳ್ಳು. ಸದ್ಯಕ್ಕೆ ನಾನಂತೂ ರಾಜೀನಾಮೆ ಕೊಡುತ್ತಿಲ್ಲ. ಉಪಾಧ್ಯಕ್ಷರು ರಾಜೀನಾಮೆ ಕೊಡುತ್ತಾರೆ ಎನ್ನುವ ಮಾಹಿತಿಯಿತ್ತು. ಅವರು ಈ ವರೆಗೂ ರಾಜೀನಾಮೆ ಕೊಟ್ಟಿಲ್ಲ. ಮುಂದೆ ಲೋಕಸಭೆ ಚುನಾವಣೆಯಿದೆ. ಹಾಗಾಗಿ ಚುನಾವಣೆ ನಡೆದ ಬಳಿಕ ಇವೆಲ್ಲ ನಡೆಯಬಹುದು.
ರಾಜಶೇಖರ ಹಿಟ್ನಾಳ,
ಜಿಪಂ ಅಧ್ಯಕ್ಷ 

„ದತ್ತು ಕಮ್ಮಾರ

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.