ಕೋವಿಡ್ ನಡುವೆಯೂ ರೆಸಾರ್ಟ್ ಆರಂಭ: ಪ್ರವಾಸಿಗರನ್ನು ರೆಸಾರ್ಟ್ ನಿಂದ ಹೊರಹಾಕಿದ ಸ್ಥಳೀಯರು
Team Udayavani, May 25, 2020, 12:44 PM IST
ಗಂಗಾವತಿ: ಕೋವಿಡ್-19 ಭೀತಿಯ ನಡುವೆಯೂ ತಾಲೂಕಿನ ಜಂಗ್ಲಿ ರಂಗಾಪೂರ ಗ್ರಾಮದಲ್ಲಿರುವ ಜಂಗಲ್ ಟ್ರೀ ರೆಸಾರ್ಟ್ ಆರಂಭಿಸಲಾಗಿದೆ. ರೆಸಾರ್ಟ್ ಗೆ ಬೆಂಗಳೂರು ಹೈದರಾಬಾದ್ ನಿಂದ ಟೆಕ್ಕಿಗಳು ಕಳೆದ ಶುಕ್ರವಾರ ರಾತ್ರಿ ಆಗಮಿಸಿದ್ದರು. ಇದನ್ನು ವಿರೋಧಿಸಿ ಜಂಗ್ಲಿ ರಂಗಾಪೂರ ಗ್ರಾಮದ ಮಹಿಳೆಯರು ರೆಸಾರ್ಟ್ ಮಾಲೀಕರು ಮತ್ತು ಟೆಕ್ಕಿಗಳನ್ನು ರೆಸಾರ್ಟ್ ನಿಂದ ಹೊರ ಹಾಕಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ಜರುಗಿದೆ.
ಕೋವಿಡ್-19 ರೋಗದ ಹಿನ್ನೆಲೆಯಲ್ಲಿ ಜನರು ಭಯದ ನೆರಳಿನಲ್ಲಿರುವಾಗ ರೆಸಾರ್ಟ್ ಆರಂಭ ಮಾಡಿ ಬೆಂಗಳೂರು ಹೈದರಾಬಾದ್ ಮೂಲದ ಪ್ರವಾಸಿಗರಿಗೆ ರೂಮ್ ಕೊಡುವ ಮೂಲಕ ಸ್ಥಳೀಯರು ಭಯಭೀತರಾಗುವಂತಾಗಿದೆ. ಕೂಡಲೇ ಪ್ರವಾಸಿಗರನ್ನು ಕ್ವಾರಂಟೈನ್ ಮಾಡಬೇಕು. ರೆಸಾರ್ಟ್ ಮಾಲೀಕರ ವಿರುದ್ದ ಕ್ರಮಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದರು. ಸ್ಥಳಕ್ಕೆ ತೆರಳಿದ ಗ್ರಾಮೀಣ ಪೊಲೀಸರು ಸ್ಥಳೀಯರನ್ನು ಸಮಾಧಾನಪಡಿಸಿದರು.
ಕೋವಿಡ್-19 ಸಂದರ್ಭದಲ್ಲಿ ಅಕ್ರಮವಾಗಿ ರೂಂ ಬಾಡಿಗೆ ನೀಡಿದ ರೆಸಾರ್ಟ್ ಮಾಲೀಕನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ಈ ಘಟನೆ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದು ಗ್ರಾಮೀಣ ಪಿಎಸ್ಐ ಜೆ.ದೊಡ್ಡಪ್ಪ ಉದಯವಾಣಿ ಗೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ