ಗೃಹರಕ್ಷಕರ ಸಮಸ್ಯೆಗೆ ಸ್ಪಂದಿಸಿ


Team Udayavani, Dec 30, 2019, 2:34 PM IST

kopala-tdy-1

ಕುಷ್ಟಗಿ: ಗೃಹರಕ್ಷಕ ದಳ ಸರ್ಕಾರದ ಅಧಿಧೀನ ಸಂಸ್ಥೆಯಾಗಿದ್ದರೂ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯಾಗುತ್ತಿಲ್ಲ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು. ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಅಖೀಲ ಭಾರತ ಗೃಹರಕ್ಷಕ ದಳದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿದರು.

ಬಳಿಕ ಗೃಹರಕ್ಷಕ ದಳದ ಸಂಸ್ಥಾಪಕ ಮೊರಾರ್ಜಿ ದೇಸಾಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿದರು. ಗೃಹರಕ್ಷಕರ ಉದ್ಯೋಗ ಭದ್ರತೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅನೇಕ ಬಾರಿ ಪತ್ರ ಬರೆದಿದ್ದರೂ, ಯಾವ ಸರ್ಕಾರಗಳು ಮುತುವರ್ಜಿವಹಿಸಿ ಸ್ಪದಿಸಿಲ್ಲ ಈ ಹಿಂದೆ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೊಲೀಸ್‌ ನೇಮಕಾತಿಯಲ್ಲಿ ಗೃಹರಕ್ಷಕರನ್ನು ವಯೋಮಿತಿ ಅರ್ಹತೆ, ದೇಹದಾಡ್ಯìತೆ ಆಧಾರದಲ್ಲಿ ಶೇ. 5ರಷ್ಟು ಮೀಸಲಾತಿ ಪರಿಗಣಿಸಲು ಸಲಹೆ ನೀಡಿದೆ. ಇದ್ಯಾವುದು ಪರಿಗಣಿಸಲಿಲ್ಲ ಎಂದರು. ಗೃಹರಕ್ಷಕ ದಳ ಸೇವಾ ಮನೋಭಾವನೆ ಸಂಸ್ಥೆಯಾಗಿದ್ದು ದೇಶದ ಪ್ರಧಾನಿಯಾಗಿದ್ದ ಮೊರಾರ್ಜಿ ದೇಸಾಯಿ ಅವರು, ಶಿಸ್ತಿನ ಸಿಪಾಯಿ ಆಗಿದ್ದನ್ನು ಸ್ಮರಿಸಿದರು.

ಸಿಪಿಐ ಜಿ. ಚಂದ್ರಶೇಖರ ಮಾತನಾಡಿ, ಗೃಹರಕ್ಷಕ ಘಟಕ ಪೊಲೀಸ್‌ ಇಲಾಖೆಗೆ ಕಿರಿಯ ಸಹೋದರ ಇದ್ದಂತೆ. ಪೊಲೀಸ್‌ ತನಿಖೆ ಹೊರತು ಪಡಿಸಿ, ಗೃಹರಕ್ಷಕರು ಪೊಲೀಸ್‌ ಸಮಾನವಾದ ಕೆಲಸ ನಿರ್ವಹಿಸುತ್ತಿದ್ದಾರೆ. ಕುಷ್ಟಗಿ, ಹನುಮಸಾಗರ ಹಾಗೂ ತಾವರಗೇರಾ ಠಾಣೆಗೆ ತಲಾ ಐವರಿಗೆ ಖಾಯಂ ಸೇವೆಗೆ ಬಳಸಿಕೊಳ್ಳಲು ಎಸ್‌ಪಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಬಕಾರಿ, ಜೆಸ್ಕಾಂ, ಪೊಲೀಸ್‌, ಗಣಿ ಭೂ ವಿಜ್ಞಾನ, ಅಗ್ನಿಶಾಮಕ ಆಸ್ಪತ್ರೆಗಳಲ್ಲಿ ಬಂದೋಬಸ್ತ್ ಸೇವೆಗೆ ಅವಕಾಶಗಳಿದ್ದು, ಮೂರು ತಿಂಗಳಲ್ಲಿ ಎರಡು ತಿಂಗಳವಾದರೂ ಕೆಲಸ ಸಿಗಬೇಕು ಎಂದರು.

ಹಿರಿಯ ಪ್ಲಟೂನ್‌ ಕಮಾಡೆಂಟ್‌ ರವೀಂದ್ರ ಬಾಕಳೆ ಮಾತನಾಡಿ, ಸದ್ಯ ಸೇವೆಯಲ್ಲಿರುವ ಗೃಹರಕ್ಷಕರಿಗೆ ಸಲ್ಲಿಸಿದ ಸೇವೆಗೆ ದಿನಕ್ಕೆ 380 ರೂ., ಕವಾಯತು ವಾರದ ಭತ್ಯೆ 22 ರೂ. ಇದೆ. ಬಹುತೇಕ ಗೃಹರಕ್ಷಕರು ಬಡವರ್ಗದವರಾಗಿದ್ದು, ಉದ್ಯೋಗ ಭದ್ರತೆ ಇಲ್ಲ ಹೀಗಾಗಿ ಆಂಧ್ರ, ತೆಲಂಗಾಣ ಮಾದರಿಯಲ್ಲಿ ಮಾಸಿಕ 28 ಸಾವಿರ ರೂ. ನೀಡುವಂತಾಗಲು ಶಾಸಕ ಬಯ್ನಾಪೂರ ಶ್ರಮಿಸಬೇಕು ಎಂದರು.

ಕುಷ್ಟಗಿ ಘಟಕಾಧಿಕಾರಿ ನಾಗರಾಜ ಬಡಿಗೇರ, ಹನುಮಸಾಗರ ಘಟಕಾಧಿಕಾರಿ ಅಕ್ಬರ್‌ ಚಳಗೇರಿ, ತಾವರಗೇರಾ ಘಟಕಾಧಿಕಾರಿ ರವೀಂದ್ರ ಬಳಿಗಾರ ಮತ್ತಿತರಿದ್ದರು. ಶಿವಪ್ಪ ಚೂರಿ ವಂದಿಸಿದರು. ಇದಕ್ಕೂ ಮುನ್ನ ಕಳೆದ ಶುಕ್ರವಾರ ಹೃದಯಘಾತದಿಂದ ನಿಧನರಾದ ಗೃಹರಕ್ಷಕ ಪುಟ್ಟಪ್ಪ ಹೋರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.