ಗಂಗಾವತಿಯಲ್ಲಿ ಕೃಷಿ ವಿವಿ ಸ್ಥಾಪನೆಗೆ ಮರುಜೀವ

ಮತ್ತೂಮ್ಮೆ ಪ್ರಸ್ತಾವನೆಗೆ ಸಿದ್ಧತೆ; ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ಆರಂಭ?

Team Udayavani, Jul 31, 2020, 6:49 AM IST

ಗಂಗಾವತಿಯಲ್ಲಿ ಕೃಷಿ ವಿವಿ ಸ್ಥಾಪನೆಗೆ ಮರುಜೀವ

ಗಂಗಾವತಿ: ನಿಯೋಜಿತ ಕೃಷಿ ವಿವಿ ಸ್ಥಾಪಿಸಲು ಆಯ್ಕೆ ಮಾಡಿರುವ ಕೆವಿಕೆ ಕಟ್ಟಡ.

–  2011ರಲ್ಲಿ ಸದಾನಂದಗೌಡ ನೀಡಿದ್ದ ಭರವಸೆ
– 2013ರಲ್ಲಿ ಕಾಂಗ್ರೆಸ್‌ ಸರ್ಕಾರ ಪ್ರಸ್ತಾಪ ತಿರಸ್ಕರಿಸಿತ್ತು
– ರಾಯಚೂರು ಕೃಷಿ ವಿವಿ ನಾಮ ನಿರ್ದೇಶಿತ ಸದಸ್ಯರ ಜಿ. ಶ್ರೀಧರ ವಿಶೇಷ ಕಾಳಜಿ
– ಶಾಸಕ ಪರಣ್ಣ ಮುನವಳ್ಳಿ, ಸಂಸದ ಸಂಗಣ್ಣ ಕರಡಿ ಸಾಥ್‌

ಗಂಗಾವತಿ: ಹಲವು ದಶಕಗಳ ಬೇಡಿಕೆಯಾಗಿರುವ ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಮರುಚಾಲನೆ ಸಿಕ್ಕಿದೆ. ತುಂಗಭದ್ರಾ ಡ್ಯಾಂ ನಿರ್ಮಾಣ ಆದಾಗಿನಿಂದಲೂ ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೃಷಿ ಸಂಬಂ ಧಿಸಿದ ಶಿಕ್ಷಣ ನೀಡುವ ಯೋಜನೆ ಆರಂಭವಾಗಿದ್ದು, ರಾಯಚೂರಿನಲ್ಲಿ ಕೃಷಿ ವಿವಿ ಸ್ಥಾಪನೆ ಗಂಗಾವತಿ, ಸಿಂಧನೂರು, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿಯಲ್ಲಿ ಕೃಷಿ ಸಂಬಂಧ ಅಧ್ಯಯನ ಸಂಶೋಧನೆ ಕೇಂದ್ರ ಆರಂಭಿಸಲಾಗಿದೆ.

ಗಂಗಾವತಿಯಲ್ಲಿ ಕೃಷಿ ವಿವಿ ಸ್ಥಾಪಿಸುವ ಪ್ರಸ್ತಾಪ ಹಲವು ವರ್ಷಗಳಿಂದ ಇದ್ದರೂ ಇದುವರೆಗೆ ಮಂಜೂರಿಯಾಗಿಲ್ಲ. 2011ರಲ್ಲಿ ಗಂಗಾವತಿಯಲ್ಲಿ ನಡೆದ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಪರಣ್ಣ ಮುನವಳ್ಳಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಅಂದಿನ ಮುಖ್ಯಮಂತ್ರಿ ಸದಾನಂದಗೌಡ ಅವರಿಗೆ ಪ್ರಸ್ತಾವನೆ ಸಲ್ಲಿಸಿದಾಗ ಸಮ್ಮೇಳನ ಉದ್ಘಾಟನಾ ಭಾಷಣದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಗಂಗಾವತಿಯಲ್ಲಿ ಅಗ್ರಿ ಕಾಲೇಜು ಆರಂಭ ಮಾಡುವುದಾಗಿ ಭರವಸೆ ನೀಡಿದ್ದರು.

ನಿಯೋಗದಿಂದ ಸ್ಥಳ ಪರಿಶೀಲನೆ: ಕಲಬುರ್ಗಿಯಲ್ಲಿ ನಡೆದ ವಿಶೇಷ ಕ್ಯಾಬಿನೆಟ್‌ ಸಭೆಯಲ್ಲಿ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ ಮತ್ತು ಅಗ್ರಿ ಕಾಲೇಜು ಆರಂಭಕ್ಕೆ ನಿರ್ಣಯಿಸಲಾಗಿತ್ತು. ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಸಂಶೋಧನಾ ಕೇಂದ್ರಕ್ಕೆ ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ರಾಜ್ಯದ ಅಧಿ ಕಾರಿಗಳ ನಿಯೋಗ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿತ್ತು.

2013ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ನೂತನ ಕೃಷಿ ಕಾಲೇಜು ಆರಂಭಿಸಬೇಕಾದ ಕಡತ ತಿರಸ್ಕರಿಸಿದ್ದರಿಂದ ನಿಯೋಜಿತ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಪ್ರಸ್ತಾಪ ರದ್ದಾಗಿತ್ತು. ಇದೀಗ ಶಾಸಕ ಪರಣ್ಣ ಮುನವಳ್ಳಿ ಹಾಗೂ ನೂತನವಾಗಿ ಕೃಷಿ ಮಹಾವಿದ್ಯಾಲಯದ ಆಡಳಿತ ಮಂಡಳಿ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಜಿ. ಶ್ರೀಧರ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಕುರಿತು ಹಳೆಯ ಪ್ರಸ್ತಾಪನೆಗೆ ಜೀವ ತುಂಬಿದ್ದು, ಕೃಷಿ ವಿವಿ ಅಧಿಕಾರಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆಸಿದ್ದಾರೆ.

ಗಂಗಾವತಿಯಲ್ಲಿ ಅಗ್ರಿ ಕಾಲೇಜು ಸ್ಥಾಪನೆ ಪ್ರಸ್ತಾಪ ಹಳೆಯದಾಗಿದ್ದು ಶಾಸಕ ಪರಣ್ಣ ಮುನವಳ್ಳಿ, ಸಂಸದ ಕರಡಿ ಸಂಗಣ್ಣ ಆಸಕ್ತರಾಗಿದ್ದಾರೆ. ಈ ಬಾರಿ ಖಚಿತವಾಗಿ ಕೆವಿಕೆ ಮತ್ತು ಎಆರ್‌ಎಸ್‌ ಕೇಂದ್ರದಲ್ಲಿ ಸುಮಾರು 200ಕ್ಕೂ ಹೆಚ್ಚು ಭೂಮಿ ಇದೆ. ಅಲ್ಲಿ ಅಗ್ರಿ ಕಾಲೇಜು ಸ್ಥಾಪನೆ ಹಳೆ ಕಡತ ತೆರೆದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಐಸಿಎನ್‌ಆರ್‌ ಸಂಸ್ಥೆ ನೆರವಿನಿಂದ ಕಾಲೇಜು ಆರಂಭಿಸಲು ಯತ್ನಿಸಲಾಗುತ್ತದೆ.
ಜಿ. ಶ್ರೀಧರ, ನಾಮ ನಿರ್ದೇಶಿತ ಸದಸ್ಯರು, ಕೃಷಿ ವಿವಿ ರಾಯಚೂರು

ಕೆ.ನಿಂಗಜ್ಜ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.