ರಸ್ತೆ ದುರಸ್ತಿ ಕಾರ್ಯ ಪರಿಶೀಲನೆ
Team Udayavani, Sep 29, 2019, 12:29 PM IST
ಗಂಗಾವತಿ: ಮಳೆಯಿಂದ ಹದಗೆಟ್ಟ ಆನೆಗೊಂದಿ ರಸ್ತೆ ದುರಸ್ತಿ ಕಾರ್ಯ ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಅವರು ಮಾತನಾಡಿ, ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟಿದ್ದು ಅವುಗಳ ದುರಸ್ತಿ ಕಾರ್ಯ ಮಾಡಲು ಸರಕಾರದಿಂದ ಅನುದಾನ ಮಂಜೂರಿ ಮಾಡಿಸಲಾಗಿದೆ. ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರಿಗೆ ಸೂಚನೆ ಮಾಡಲಾಗಿದೆ. ಕಂಪ್ಲಿ ಗಂಗಾವತಿ ಸೇತುವೆ ನದಿ ನೀರಿನಲ್ಲಿ ಮುಳುಗಿದ್ದರಿಂದ ಆನೆಗೊಂದಿ ಕಡೆಬಾಗಿಲು ಸೇತುವೆ ಮೇಲೆ ಭಾರಿ ವಾಹನ ಸಂಚಾರವಾಗಿದ್ದರಿಂದ ಆನೆಗೊಂದಿ ರಸ್ತೆ ಸಂಪೂರ್ಣ ಹದಗೆಟ್ಟಿದೆ ಶೀಘ್ರ ದುರಸ್ತಿ ಕಾರ್ಯ ಮುಕ್ತಾಯವಾಗಿಲಿದ್ದು ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ನಗರಸಭೆ ಅಭಿಯಂತರ ಆರ್.ಆರ್. ಪಾಟೀಲ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿ ಇತರರಿದ್ದರು.