ಭೂಗಳ್ಳರಿಂದ ಬೃಹತ್ ಕಲ್ಲುಬಂಡೆ ಧ್ವಂಸ
Team Udayavani, May 22, 2021, 11:08 PM IST
ಗಂಗಾವತಿ: ಭೂಗಳ್ಳರು ಬೃಹತ್ ಗಾತ್ರದ ಕಲ್ಲುಬಂಡೆ ಒಡೆದು ಅಲ್ಲಿ ವಾಸಿಸಲು ಜಾಗ ಮಾಡಿಕೊಳ್ಳುವ ಸಂಚು ನಡೆಸಿದ ಘಟನೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ತಾಲೂಕಿನ ಚಿಕ್ಕರಾಂಪುರ ಕ್ರಾಸ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿ ನಡೆದಿದೆ.
ಚಿಕ್ಕರಾಂಪುರ ಕ್ರಾಸ್ ಗ್ರಾಮ ಹಂಪಿ ಅಭಿವೃದ್ಧಿ ಪ್ರಾಧಿ ಕಾರದ ವ್ಯಾಪ್ತಿಯಲ್ಲಿದ್ದರೂ ಇಲ್ಲಿ ನಿರಂತರ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಅಪರೂಪವಾದ ಕಲ್ಲು ಬಂಡೆಗಳು ಮತ್ತು ಗುಹಾಂತರ ಚಿತ್ರಗಳಿದ್ದರೂ ಸ್ಥಳೀಯ ಕೆಲವರು ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಬಳಸಿ ಕಲ್ಲು ಒಡೆದು ವಾಸಿಸಲು ಜಾಗ ಮಾಡಿಕೊಳ್ಳುತ್ತಿದ್ದಾರೆ. ಅಂಜನಾದ್ರಿ ಬೆಟ್ಟ ಸೇರಿ ಸುತ್ತಲಿನ ಏಳುಗುಡ್ಡ ಪ್ರದೇಶದಲ್ಲಿ ಅಪರೂಪದ ಜೀವಿ ಸಂಕುಲವಿದ್ದು ಅವುಗಳನ್ನು ರಕ್ಷಿಸಲು ಸರ್ಕಾರ ಈ ಪ್ರದೇಶ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಿದೆ.
ಅರಣ್ಯ ಇಲಾಖೆಯವರು ಸಣ್ಣಪುಟ್ಟ ಮಣ್ಣು ಮರಂ ಸಾಗಿಸುವವರನ್ನು ಮತ್ತು ಜೀವನೋಪಾಯಕ್ಕಾಗಿ ಹೋಟೆಲ್ ನಡೆಸುವವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುತ್ತಾರೆ. ಆದರೆ ಬೃಹತ್ ಕಲ್ಲು ಬಂಡೆ ಒಡೆದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ