ಸ್ಥಳೀಯ ಸಂಸ್ಥೆಗಳ ತೆರಿಗೆ ಬಾಕಿ 11 ಕೋಟಿ ರೂ.

ಗಂಗಾವತಿ, ಕೊಪ್ಪಳದಲ್ಲೇ ಬಾಕಿ ಹೆಚ್ಚು ವಸೂಲಾಗದೇ ನರಳಾಡುತ್ತಿವೆ ಗ್ರಾಪಂಗಳು ತೆರಿಗೆ ಸಂಗ್ರಹದಲ್ಲಿ ಶೇ.50 ಪ್ರಗತಿಯಿಲ್ಲ

Team Udayavani, May 26, 2019, 12:10 PM IST

Udayavani Kannada Newspaper

ಕೊಪ್ಪಳ: ಜಿಲ್ಲೆಯಲ್ಲಿ ಬರದ ಪರಿಸ್ಥಿತಿಯಿಂದಲೋ..? ಅಥವಾ ಗ್ರಾಪಂ ಸಿಬ್ಬಂದಿಗಳ ವಿಳಂಬ ನೀತಿಯಿಂದಲೋ ? ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ವಸೂಲಾತಿ ನಡೆಯುತ್ತಿಲ್ಲ. ಅಂಕಿ-ಅಂಶಗಳ ಲೆಕ್ಕಾಚಾರದಲ್ಲಿ 153 ಗ್ರಾಪಂಗಳಲ್ಲಿ 11 ಕೋಟಿಯಷ್ಟು ತೆರಿಗೆ ಬರುವುದು ಬಾಕಿಯಿದೆ.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಜನರಿಂದ ಸಂಗ್ರಹ ಮಾಡಿದ ತೆರಿಗೆಯಿಂದಲೇ ಆಡಳಿತ ನಡೆಸಬೇಕಾದ ಸ್ಥಿತಿಯಿದೆ. ಸರ್ಕಾರ ಅಲ್ಪ ಅನುದಾನ ಮಂಜೂರು ಮಾಡಿದರೆ, ಉಳಿದ ಹಣ ವಾಣಿಜ್ಯ ಮಳಿಗೆ, ನೀರಿನ ಕರ, ಸ್ವಚ್ಛತಾ ಕರ, ಬಾಡಿಗೆ, ಕಟ್ಟಡ, ಮನೆ ಕರ ಸೇರಿ ಸೇರಿದಂತೆ ಇತರೆ ತೆರಿಗೆಗಳನ್ನು ಗ್ರಾಪಂಗಳೇ ಸಾರ್ವಜನಿಕರಿಂದ ವಸೂಲಿ ಮಾಡಬೇಕಿದೆ. ಪ್ರತಿ ವರ್ಷ ಮನೆ-ಮನೆಗೆ ತೆರಳಿ ಕರ ವಸೂಲಿ ಮಾಡಬೇಕಾಗಿದ್ದರೂ ಗ್ರಾಪಂಗಳಿಂದ ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ವಸೂಲಿ ನಡೆದಿಲ್ಲ.

11.79 ಕೋಟಿ ರೂ. ಬಾಕಿ: ಅಂಕಿ-ಅಂಶಗಳ ಲೆಕ್ಕಾಚಾರ ಗಮನಿಸಿದರೆ, ಜಿಲ್ಲೆಯಲ್ಲಿನ 153 ಗ್ರಾಪಂನಲ್ಲಿ 23 ಕೋಟಿ ರೂ. ತೆರಿಗೆ ವಸೂಲಿ ಮಾಡಬೇಕಿತ್ತು. ಮಾರ್ಚ್‌-2019ರ ಅಂತ್ಯಕ್ಕೆ 11.25 ಕೋಟಿ ರೂ. ವಸೂಲಿ ಮಾಡಲಾಗಿದೆ. ಅಂದರೆ ಇನ್ನೂ 11.79 ಕೋಟಿ ರೂ. ನಷ್ಟು ವಸೂಲಿ ಮಾಡಬೇಕಿದೆ. ಕೊಪ್ಪಳ ತಾಲೂಕಿನಲ್ಲಿ 4.21 ಕೋಟಿ, ಗಂಗಾವತಿ ತಾಲೂಕಿನಲ್ಲಿ 3.39 ಕೋಟಿ, ಯಲಬುರ್ಗಾ 1.89 ಕೋಟಿ, ಕುಷ್ಟಗಿ ತಾಲೂಕಿನಲ್ಲಿ 1.75 ಕೋಟಿ ವಸೂಲಿ ಬಾಕಿಯಿದೆ.

ಗಂಗಾವತಿ, ಯಲಬುರ್ಗಾ ಹೆಚ್ಚು: ವಿಶೇಷವೆಂದರೆ ಜಿಲ್ಲೆಯಲ್ಲಿ ಗಂಗಾವತಿ ಹಾಗೂ ಕೊಪ್ಪಳ ತಾಲೂಕಿನಲ್ಲಿಯೇ ಹೆಚ್ಚಿನ ಮಟ್ಟದ ತೆರಿಗೆ ಬರಬೇಕಿದೆ. ಗಂಗಾವತಿಯಲ್ಲಿ ಹಲವು ರೈಸ್‌ ಮಿಲ್ಗಳು, ವಿವಿಧ ಉದ್ಯಮಗಳಿವೆ. ಅವರೇ ಸಕಾಲಕ್ಕೆ ತೆರಿಗೆ ಕಟ್ಟಿಲ್ಲ. ಇನ್ನೂ ಕೊಪ್ಪಳ ತಾಲೂಕಿನಲ್ಲೂ ಹಲವು ಉದ್ಯಮಗಳು ಬಾಕಿ ಉಳಿಸಿಕೊಂಡಿದ್ದಾರೆ. ಇಲ್ಲಿ ಗ್ರಾಪಂ ಸಿಬ್ಬಂದಿಗಳ ನಿರಾಸಕ್ತಿಯೋ..? ಜನರೇ ತೆರಿಗೆ ಕಟ್ಟಲು ಮನಸ್ಸು ಮಾಡುತ್ತಿಲ್ಲವೋ| ಜಿಪಂಗೆ ತಿಳಿಯದಂತಾಗಿದೆ.

ಇನ್ನೂ ಸರ್ಕಾರ ಗ್ರಾಪಂ ಪಿಡಿಒ ಹೊರತು ಪಡಿಸಿದರೆ ಉಳಿದಂತೆ ಉಳಿದ ನೌಕರಿಗೆ ಪೂರ್ಣ ಪ್ರಮಾಣದಲ್ಲಿ ವೇತನ ಬಿಡುಗಡೆ ಮಾಡಲ್ಲ. ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹವಾದ ತೆರಿಗೆಯಲ್ಲೇ ವೇತನ ಬಿಡುಗಡೆ ಮಾಡಬೇಕಿದೆ. ಜೊತೆಗೆ ಆಡಳಿತ ವೆಚ್ಚ, ಇತರೆ ಕಾರ್ಯಕ್ಕೂ ಅನುದಾನ ಮೀಸಲಿಟ್ಟು ಗ್ರಾಪಂನಡಿ ಬರುವ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಬೇಕಿದೆ.

ಇನ್ನೂ ಜಿಲ್ಲೆಯಲ್ಲಿ ಬರದ ಪರಿಸ್ಥಿತಿಯಿಂದಾಗಿ ಜನರ ಬಳಿ ಹಣವಿಲ್ಲ. ದುಡಿಮೆ ಇಲ್ಲದೇ ಅವರೇ ಅನ್ಯ ಊರುಗಳಿಗೆ ಗುಳೆ ಹೋಗುತ್ತಿದ್ದಾರೆ. ಇನ್ನೆಲ್ಲಿಂದ ತೆರಿಗೆ ಕಟ್ಟಬೇಕು ಎನ್ನುವುದು ಜನರ ಮಾತಾಗಿದೆ. ಹಾಗಾಗಿ ಗ್ರಾಪಂಗಳು ತೆರಿಗೆ ವಸೂಲಾತಿ ಆಗುತ್ತಿಲ್ಲ ಎಂದು ನರಳಾಡುತ್ತಿವೆ. ಈ ಎಲ್ಲ ಲೆಕ್ಕಾಚಾರದಲ್ಲಿ ತೆರಿಗೆ ವಸೂಲಾತಿಯಲ್ಲಿ ಕೊಪ್ಪಳ ತಾಲೂಕು ಶೇ.64ರಷ್ಟು ಪ್ರಗತಿ ಸಾಧಿಸಿದ್ದರೆ, ಗಂಗಾವತಿ ಶೇ.47, ಯಲಬುರ್ಗಾ-ಶೇ.36, ಕುಷ್ಟಗಿ ಶೇ.43ರಷ್ಟು ಸೇರಿದಂತೆ ಒಟ್ಟಾರೆ ಜಿಲ್ಲಾದ್ಯಂತ ಶೇ.48ರಷ್ಟು ಪ್ರಗತಿ ಸಾಧಿಸಿದೆ. ಅಂದರೆ ಶೇ.50ರಷ್ಟು ಪ್ರಗತಿ ಸಾಧಿಸಲು ಹರಸಾಹಸ ಪಡುವಂತಾಗಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.