ಆಲಮಟ್ಟಿ-ಚಿತ್ರದುರ್ಗ ಹೊಸ ರೈಲ್ವೆ ಮಾರ್ಗದ ಸರ್ವೆ ವರದಿ ಶೀಘ್ರ ಸಲ್ಲಿಕೆ : ಸಂಗಣ್ಣ ಕರಡಿ


Team Udayavani, Jul 13, 2022, 6:14 PM IST

ಆಲಮಟ್ಟಿ-ಚಿತ್ರದುರ್ಗ ಹೊಸ ರೈಲ್ವೆ ಮಾರ್ಗದ ಸರ್ವೆ ವರದಿ ಶೀಘ್ರ ಸಲ್ಲಿಕೆ : ಸಂಗಣ್ಣ ಕರಡಿ

ಕುಷ್ಟಗಿ : ಬಹುಜನರ ಬೇಡಿಕೆಯಾಗಿರುವ ಆಲಮಟ್ಟಿ-ಚಿತ್ರದುರ್ಗ ನೇರ ರೈಲ್ವೆ ಮಾರ್ಗದ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಒಂದೆರಡು ವಾರದಲ್ಲಿ ರೈಲ್ವೆ ಇಲಾಖೆಗೆ ವರದಿ ಸಲ್ಲಿಕೆಯಾಗಲಿದೆ. ಈ ನೂತನ ರೈಲ್ವೆ ಮಾರ್ಗಕ್ಕೆ ಕೊಪ್ಪಳವನ್ನೂ ಸಹ ಸೇರ್ಪಡೆಗೊಳಿಸಲಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.

ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ಕಚೇರಿಯಲ್ಲಿ ಬುಧವಾರ ರೈಲ್ವೆ ಇಲಾಖೆ ಪ್ರಮುಖ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಬಳಿಕ, ಸಂಸದರು ಈ ವಿಷಯ ತಿಳಿಸಿದ್ದು, ಆಲಮಟ್ಟಿ- ಚಿತ್ರದುರ್ಗ ರೈಲ್ವೆ ಮಾರ್ಗಕ್ಕೆ ಈ ಹಿಂದೆಯೇ ಸರ್ವೆ ಕಾರ್ಯ ಜರುಗಿದೆ, ಆದರೆ ಈ ಸರ್ವೆಯಲ್ಲಿ ಕೊಪ್ಪಳವನ್ನು ಸೇರ್ಪಡೆಗೊಳಿಸಿರಲಿಲ್ಲ. ಇದೀಗ ನಮ್ಮ ಮನವಿಯಂತೆ ಈ ನೂತನ ಮಾರ್ಗಕ್ಕೆ ಕೊಪ್ಪಳವನ್ನು ಸಹ ಸೇರ್ಪಡೆಗೊಳಿಸಿ, ಸರ್ವೆ ಕಾರ್ಯ ಪೂರ್ಣಗೊಳಿಸಲಾಗಿದೆ. ಒಂದೆರಡು ವಾರದಲ್ಲಿ ಸರ್ವೆ ವರದಿ ಸಲ್ಲಿಕೆಯಾಗಲಿದೆ.

ದರೋಜಿ-ಗಂಗಾವತಿ ನೂತನ ರೈಲ್ವೆ ಮಾರ್ಗದ ಸರ್ವೆ ಕಾರ್ಯಕ್ಕೆ ರೈಲ್ವೆ ಇಲಾಖೆ ಈಗಾಗಲೆ ಮಂಜೂರಾತಿ ನೀಡಿದ್ದು, ಐತಿಹಾಸಿಕ ತಾಣಗಳ ಸಂಪರ್ಕ ಹಾಗೂ ಉದ್ಯಮಕ್ಕೆ ಅನುಕೂಲವಾಗುವಂತೆ ಈ ಯೋಜನೆಯನ್ನು ಮಾರ್ಪಡಿಸಿ, ದರೋಜಿ-ಗಂಗಾವತಿ ರೈಲ್ವೆ ಮಾರ್ಗವನ್ನು ಬಾಗಲಕೋಟೆಯವರೆಗೂ ವಿಸ್ತರಿಸುವಂತೆ ಮನವಿ ಮಾಡಲಾಯಿತು, ಇದಕ್ಕೆ ರೈಲ್ವೆ ಇಲಾಖೆ ಮಹಾಪ್ರಬಂಧಕರು ತಾತ್ವಿಕವಾಗಿ ಸಮ್ಮತಿ ಸೂಚಿಸಿದ್ದಾರೆ. ಶೀಘ್ರದಲ್ಲಿಯೇ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ.

ಗದಗ-ವಾಡಿ ರೈಲ್ವೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಬರುವ ಜನವರಿ ವೇಳೆಗೆ ತಳಕಲ್‌ನಿಂದ ಲಿಂಗಲಬಂಡಿವರೆಗೆ ರೈಲು ಸಂಚರಿಸಲು ಮಾರ್ಗ ಸಿದ್ಧವಾಗಲಿದೆ ಎಂಬುದಾಗಿ ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ, ತಳಕಲ್‌ನಿಂದ ಕೇವಲ ಲಿಂಗಲಬಂಡಿವರೆಗೆ ರೈಲು ಸಂಚರಿಸುವ ರೀತಿ ಆಗುವ ಬದಲು ಬರುವ ಫೆಬ್ರವರಿ ವೇಳೆಗೆ ಕನಿಷ್ಟ ತಳಕಲ್‌ನಿಂದ ಕುಷ್ಟಗಿ ವರೆಗಾದರೂ ರೈಲು ಸಂಚರಿಸುವಂತೆ ಯೋಜನೆ ಕಾರ್ಯಗತಗೊಳಿಸಬೇಕು ಎಂದು ಸಂಸದರು ಸೂಚನೆ ನೀಡಿದರು. ಇದಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ಫೆಬ್ರವರಿ ವೇಳೆಗೆ ಕುಷ್ಟಗಿ ವರೆಗೂ ಮಾರ್ಗಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ : ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ನೀಡಿ, ಇಲ್ಲದಿದ್ದಲ್ಲಿ ಪ್ರತಿಭಟನೆ ಎದುರಿಸಿ : ಕಾಗೋಡು

ಮುನಿರಾಬಾದ್-ಮೆಹಬೂಬ್‌ನಗರ ರೈಲ್ವೆ ಮಾರ್ಗದಲ್ಲಿ ರೈಲು ಇದೀಗ ಗಂಗಾವತಿ ಮಾರ್ಗವಾಗಿ ಕಾರಟಗಿವರೆಗೆ ಸಂಚರಿಸಲು ಅನುವಾಗಿದ್ದು, ಬರುವ ಫೆಬ್ರವರಿ ವೇಳೆಗೆ ಸಿಂದನೂರು ವರೆಗೂ ರೈಲು ಸಂಚರಿಸುವ ರೀತಿ ಕಾಮಗಾರಿ ಪೂರ್ಣಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಗಂಗಾವತಿ-ಹುಬ್ಬಳ್ಳಿ ಎಕ್ಸ್ ಪ್ರೆಸ್ ರೈಲಿಗೆ ಬನ್ನಿಕೊಪ್ಪ ದಲ್ಲಿ ನಿಲುಗಡೆ ನೀಡುವಂತೆ ಮಾಡಿದ ಮನವಿಗೆ ರೈಲ್ವೆ ಅಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.

ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯದ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ವಲಯದ ರೈಲ್ವೆ ಮಹಾಪ್ರಬಂಧಕ ಸಂಜೀವ್ ಕಿಶೋರ್ ಸೇರಿದಂತೆ ರೈಲ್ವೆ ಇಲಾಖೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.