ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ

ಸ್ವ ಸಹಾಯ ಸಂಘಗಳ ಆರ್ಥಿಕ ಅಭಿವೃದ್ಧಿಗೆ ಸಂಸ್ಥೆ ಸಹಕಾರಿ

Team Udayavani, May 9, 2022, 3:49 PM IST

16

ಕುಷ್ಟಗಿ: ಸಂಜೀವಿನಿ ಮಾಸಿಕ ಸಂತೆಯ ಪ್ರದರ್ಶನ ಮತ್ತು ಮಾರಾಟದಿಂದ ಲಾಭದಾಯಕ ಆದಾಯವಿದ್ದು, ಗ್ರಾಮೀಣ ಸ್ವ ಸಹಾಯ ಸಂಘಗಳ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಹೇಳಿದರು.

ಪಟ್ಟಣದ ತಾಪಂ ಬಳಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕೌಶಲಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ, ಜಿಪಂ ಹಾಗೂ ತಾಪಂ ಸಹಯೋಗದಲ್ಲಿ ಆಯೋಜಿಸಿದ್ದ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಸಂಜೀವಿನಿ ಮಾಸಿಕ ಸಂತೆಯಲ್ಲಿ ವಿವಿಧ ಸ್ವ ಸಹಾಯ ಒಕ್ಕೂಟದ ಮಹಿಳೆಯರು ತಯಾರಿಸಿದ ವಿವಿಧ ಖಾದ್ಯ, ಗುಡು ಕೈಗಾರಿಕೆ, ಕರ ಕುಶಲ ವಸ್ತುಗಳು ಅಲಂಕಾರಿ ವಸ್ತುಗಳ ನೇರ ಮಾರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ತಿಂಗಳು ರವಿವಾರ ವಾರದ ಸಂತೆಯಲ್ಲಿ ಇದೇ ಸ್ಥಳದಲ್ಲಿ ಮಾರಾಟ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಹಣಕಾಸಿನ ಸೌಲಭ್ಯ ಪಡೆದುಕೊಂಡ ಸ್ವ ಸಹಾಯ ಸಂಘದವರು ತಯಾರಿಸಿದ ಉತ್ಪನ್ನಗಳನ್ನು ಮುಂದಿನ ದಿನಗಳಲ್ಲಿ ಅಮೆಜಾನ್‌, ಪ್ಲಿಪ್‌ಕಾರ್ಟ್‌ ಮೂಲಕ ಆನ್‌ಲೈನ್‌ ಮಾರಾಟ ವ್ಯವಸ್ಥೆಗೆ ಸರ್ಕಾರ ಯೋಜಿಸಿದೆ. ಈ ಕ್ರಮದಿಂದ ಗ್ರಾಮೀಣ ಮಹಿಳೆಯರು ತಯಾರಿಸಿ ವಸ್ತುಗಳನ್ನು ಆನ್‌ಲೈನ್‌ ಖರೀದಿಯಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯವಿದೆ ಎಂದರು.

ತಾಪಂ ಇಒ ಡಾ| ಜಯರಾಮ್‌ ಚವ್ಹಾಣ ಮಾತನಾಡಿ, ತಾಲೂಕಿನ 36 ಸಂಜೀವಿನಿ ಒಕ್ಕೂಟಗಳಲ್ಲಿ ಆಯ್ದ 20 ಸ್ವಸಹಾಯ ಗುಂಪುಗಳಿಂದ ಕುಷ್ಟಗಿ ವಾರದ ಸಂತೆಯಲ್ಲಿ ಮೊದಲ ಬಾರಿಗೆ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ತಾಲೂಕಿನ ಎಲ್ಲ ಸಂಘಗಳಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸುತ್ತಿವೆ. ಸ್ಥಳೀಯವಾಗಿ ತಯಾರಿಸಿದ ವಸ್ತುಗಳನ್ನು ರಾಷ್ಟ್ರಮಟ್ಟದಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುಣಮಟ್ಟದಿಂದ ವಸ್ತುಗಳನ್ನು ತಯಾರಿಸಿದ ಬೇಡಿಕೆ ಹೆಚ್ಚಿಸಿ ಆದಾಯ ವೃದ್ಧಿಸಿಕೊಳ್ಳುವ ಅವಕಾಶಗಳಿವೆ. ಕಳೆದ ತಿಂಗಳು ಜಿಲ್ಲೆಯ ಮಹಿಳಾ ಸ್ವಸಹಾಯಕ ಸಂಘಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಮನ್ನಣೆ ಗಳಿಸಿದೆ ಎಂದರು.

ವಲಯ ಮೇಲ್ವಿಚಾರಕ ಮಾದೇಗೌಡ ಪೊಲೀಸ ಪಾಟೀಲ ಮಾತನಾಡಿ, ತಾಲೂಕಿನಲ್ಲಿ 1561 ಮಹಿಳಾ ಸಂಘಗಳಿದ್ದು, 17,200 ಸದಸ್ಯರಿದ್ದಾರೆ. ಪ್ರತಿ ಗ್ರಾಪಂಗೆ ತಲಾ ಒಂದರಂತೆ ಒಕ್ಕೂಟವಿದ್ದು, ಈ ಒಕ್ಕೂಟದ ಮೂಲಕ ಸ್ವ ಸಹಾಯ ಸಂಘಗಳಿಗೆ ಶೇ. 12ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಪಡೆದ ಸಾಲಕ್ಕೆ ಪ್ರತಿ ತಿಂಗಳ ಸಾಲ ಹಾಗೂ ಬಡ್ಡಿ ಮರು ಪಾವತಿಸಲಾಗುತ್ತಿದೆ. ಈ ಸೌಲಭ್ಯ ಪಡೆದು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಪ್ರತಿ ತಿಂಗಳಿಗೊಮ್ಮೆ ವಾರದ ಸಂತೆಯಲ್ಲಿ ತಯಾರಿಸಿದ ವಸ್ತುಗಳನ್ನು ತಂದು ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದರು.

ನಂತರ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಕೆ. ಮಹೇಶ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಜಿವೀನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಮಲ್ಲಿಕಾರ್ಜುನ ಪಾಟೀಲ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸಂಗಣ್ಣ, ರಾಜು ಭಜಂತ್ರಿ, ವಿಜಯಕುಮಾರ ತಾಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕ ರವಿಗೌಡ್ರು, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ಎಂಬಿಕೆಎಲ್‌ಸಿ ಆರ್‌.ಪಿ. ಸದಸ್ಯರು ಪಾಲ್ಗೊಂಡಿದ್ದರು. ‌

ಸಂಜಿವೀನಿ ಮಾಸಿಕ ಸಂತೆಯಲ್ಲಿ ಏನೇನು?

15 ಮಳಿಗೆಗಳ ವ್ಯವಸ್ಥೆಯಲ್ಲಿ ಮಾಸಿಕ ಸಂತೆಯಲ್ಲಿ ಟ್ಯಾರಾಕೋಡ್‌ (ಮಣ್ಣಿನಿಂದ ತಯಾರಿಸಿದ) ಆಭರಣಗಳು, ಸೀರೆಗಳು, ಕೌದಿಗಳು, ಶೇಂಗಾ ಚಿಕ್ಕಿ, ಶೇಂಗಾ ಹೊಳಿಗೆ, ಚಕ್ಕಲಿ, ಕರುಕಲು ತಿಂಡಿಗಳು, ಬೆಲ್ಲದಿಂದ ತಯಾರಿಸಿದ ಜಿಲೇಬಿ, ಜಾಮೂನು, ಪಾಪಡಿ, ಕರಿದ ಅವಲಕ್ಕಿ, ಶ್ಯಾವಗಿ, ಹಪ್ಪಳ, ಆಲೂಗಡ್ಡೆ ಚಿಪ್ಸ್‌, ಪಾಪಡ್‌, ಪೇಪರ್‌ ಪ್ಲೇಟ್‌ ಮಣ್ಣಿನಿಂದ ತಯಾರಿಸಿದ ಅಲಂಕಾರಿಕ ಹಣತೆಗಳು, ಲಂಬಾಣಿ ಕಸೂತಿ ಬಟ್ಟೆ ಹಾಗೂ ಇಲಕಲ್‌ ಸೀರೆ, ಸಂಜೀವಿನಿ ಸ್ಪೇಷಲ್‌ ಟೀ ಪುಡಿ, ಎತ್ತಿಗೆ ಹಣೆ ಕಟ್ಟು, ಗೊಂಡೆ, ಗಾಡಿ, ಎತ್ತಿನ ಜೂಲಾ ಸಾಮಾಗ್ರಿ, ಅಡುಗೆ ಮಸಾಲೆ ಸಾಮಗ್ರಿಗಳ ಮಾರಾಟ ಹಾಗೂ ಪ್ರದರ್ಶನದಲ್ಲಿ ಗಮನ ಸೆಳೆದವು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.